ಪ್ರಧಾನಿ ನರೇಂದ್ರ ಮೋದಿ ವಿಷದ ಹಾವಿದ್ದಂತೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದರು. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿಷಕನ್ಯೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದ್ದರು. ಕೆಲಸ ಮಾಡದವರು ನಾಲಾಯಕ್ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಪ್ರಚಾರದ ವೇಳೆ ಇಂತಹ ಹೇಳಿಕೆಗಳು ಹೆಚ್ಚುತ್ತಿರುವುದನ್ನು ಗಮನಿಸಿದ ಆಯೋಗವು, ರಾಜಕೀಯ ಪಕ್ಷಗಳಿಗೆ ಮಂಗಳವಾರ ಕೆಲವೊಂದು ಸಲಹೆಗಳನ್ನು ನೀಡಿದೆ.