ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಚಿವ ಸ್ಥಾನ ಹಂಚಿಕೆಯಲ್ಲಿ ಪ್ರಾದೇಶಿಕ ಸಮಾನತೆ ಇರಬೇಕು. ಸಚಿವ ಸ್ಥಾನ ವಂಚಿತ ಜಿಲ್ಲೆಗಳಿಗೂ ಸಚಿವ ಸ್ಥಾನ ಕೊಡಬೇಕು. ಇದನ್ನು ಸರಿದೂಗಿಸಲು ಯಾರು ತ್ಯಾಗ ಮಾಡಬೇಕಿದೆಯೋ ಅವರು ತ್ಯಾಗ ಮಾಡಲಿ. ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಗಟ್ಟಿಯಾಗಬೇಕಾದರೆ ಶಾಸಕರಾದ ರಾಜೂಗೌಡ, ದತ್ತಾತ್ರೇಯ ಪಾಟೀಲ ರೇವೂರ ಅವರ ಭಾವನೆಗಳಿಗೆ ಸ್ಪಂದಿಸಬೇಕು’ ಎಂದರು.