<p><strong>ನವದೆಹಲಿ:</strong> ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ಭಾನುವಾರ ರಾತ್ರಿಯೇ ಇಲ್ಲಿಗೆ ದೌಡಾಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೋಮವಾರ ಸಂಜೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ.</p>.<p>ಭಾನುವಾರ ರಾತ್ರಿ 9ಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೊಶಿ ಅವರೊಂದಿಗೆ ಬೆಂಗಳೂರಿನಿಂದ ಇಲ್ಲಿಗೆ ಬಂದಿರುವ ಬೊಮ್ಮಾಯಿ, ತಡರಾತ್ರಿವರೆಗೆ ದೆಹಲಿಯ ಅಜ್ಞಾತ ಸ್ಥಳದಲ್ಲಿದ್ದು, ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ.</p>.<p>ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಅವರೂ ಸಮಾಲೋಚನೆಯಲ್ಲಿ ಪಾಲ್ಗೊಂಡು, ಬೊಮ್ಮಾಯಿ ಅವರು ಸಿದ್ಧಪಡಿಸಿ ತಂದಿದ್ದ ಪಟ್ಟಿಯನ್ನು ಪರಾಮರ್ಶಿಸಿದರು ಎಂದು ತಿಳಿದುಬಂದಿದೆ.</p>.<p>ಪ್ರವಾಹ ಪರಿಸ್ಥಿತಿ ಹಾಗೂ ಕೊರೊನಾ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಶೀಘ್ರವೇ ಸಂಪುಟ ವಿಸ್ತರಣೆಗೆ ವರಿಷ್ಠರು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ರಾತ್ರಿ ಸಿದ್ಧವಾಗಿರುವ ಪಟ್ಟಿಯನ್ನು ಜೆ.ಪಿ. ನಡ್ಡಾ ಅವಲೋಕಿಸಿದ ಬಳಿಕ ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ.</p>.<p><strong>ಇದನ್ನೂ ಓದಿ:</strong> <a href="https://www.prajavani.net/karnataka-news/basavaraj-bommai-deve-gowda-karnataka-politics-bjp-jds-853904.html" target="_blank">ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮಾಜಿ ಪ್ರಧಾನಿ ದೇವೇಗೌಡರ ಬಲ </a></p>.<p>ಶಾಸಕರಾದ ಅರವಿಂದ ಬೆಲ್ಲದ್, ಸುನಿಲ್ ವಲ್ಯಾಪುರೆ, ಲಕ್ಷ್ಮಣ ಸವದಿ, ಸಿ.ಸಿ. ಪಾಟೀಲ ಮತ್ತಿತರರು ರಾಷ್ಟ್ರ ರಾಜಧಾನಿಗೆ ಬಂದಿದ್ದು, ಸಚಿವ ಸ್ಥಾನಕ್ಕಾಗಿ ತೀವ್ರ ಕಸರತ್ತು ನಡೆಸಿದ್ದಾರೆ.</p>.<p>ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ, ಕಲಬುರ್ಗಿಯ ಶಶಿಲ್ ನಮೋಶಿ ಅವರೂ ಸಚಿವ ಸ್ಥಾನ ನೀಡುವಂತೆ ವರಿಷ್ಠರ ದುಂಬಾಲು ಬಿದ್ದಿದ್ದಾರೆ.</p>.<p>ಪರಿಷತ್ ಸದಸ್ಯರಿಗೂ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಸಂಪುಟದ ಘನತೆಯನ್ನು ಹೆಚ್ಚಿಸಬೇಕು. ಈ ಮೊದಲು ಬಹುತೇಕ ಮುಖ್ಯಮಂತ್ರಿಗಳೂ ಪರಿಷತ್ ಸದಸ್ಯರಿಗೆ ಸಂಪುಟದಲ್ಲಿ ಆದ್ಯತೆ ನೀಡಿದ ಮಾದರಿಯಲ್ಲೇ ಈಗಲೂ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.</p>.<p><strong>ಇದನ್ನೂ ಓದಿ: </strong><a href="https://www.prajavani.net/karnataka-news/basavaraj-bommai-flies-to-delhi-again-to-consult-bjp-leadership-on-cabinet-expansion-853918.html" target="_blank">ಮುಖ್ಯಮಂತ್ರಿ ಬೊಮ್ಮಾಯಿ ದಿಢೀರ್ ದೆಹಲಿಗೆ: ಗರಿಗೆದರಿದ ಕುತೂಹಲ | Prajavani</a></p>.<p>ಬೊಮ್ಮಾಯಿ ಸಂಜೆಯ ವೇಳೆಗೆ ವರಿಷ್ಠರೊಂದಿಗಿನ ಸಮಾಲೋಚನೆ ಪೂರ್ಣಗೊಳಿಸಿ, ಸಂಪುಟ ಸೇರಲಿರುವವರ ಪಟ್ಟಿಯೊಂದಿಗೆ ಬೆಂಗಳೂರಿಗೆ ವಾಪಸಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ಭಾನುವಾರ ರಾತ್ರಿಯೇ ಇಲ್ಲಿಗೆ ದೌಡಾಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೋಮವಾರ ಸಂಜೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ.</p>.<p>ಭಾನುವಾರ ರಾತ್ರಿ 9ಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೊಶಿ ಅವರೊಂದಿಗೆ ಬೆಂಗಳೂರಿನಿಂದ ಇಲ್ಲಿಗೆ ಬಂದಿರುವ ಬೊಮ್ಮಾಯಿ, ತಡರಾತ್ರಿವರೆಗೆ ದೆಹಲಿಯ ಅಜ್ಞಾತ ಸ್ಥಳದಲ್ಲಿದ್ದು, ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ.</p>.<p>ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಅವರೂ ಸಮಾಲೋಚನೆಯಲ್ಲಿ ಪಾಲ್ಗೊಂಡು, ಬೊಮ್ಮಾಯಿ ಅವರು ಸಿದ್ಧಪಡಿಸಿ ತಂದಿದ್ದ ಪಟ್ಟಿಯನ್ನು ಪರಾಮರ್ಶಿಸಿದರು ಎಂದು ತಿಳಿದುಬಂದಿದೆ.</p>.<p>ಪ್ರವಾಹ ಪರಿಸ್ಥಿತಿ ಹಾಗೂ ಕೊರೊನಾ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಶೀಘ್ರವೇ ಸಂಪುಟ ವಿಸ್ತರಣೆಗೆ ವರಿಷ್ಠರು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ರಾತ್ರಿ ಸಿದ್ಧವಾಗಿರುವ ಪಟ್ಟಿಯನ್ನು ಜೆ.ಪಿ. ನಡ್ಡಾ ಅವಲೋಕಿಸಿದ ಬಳಿಕ ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ.</p>.<p><strong>ಇದನ್ನೂ ಓದಿ:</strong> <a href="https://www.prajavani.net/karnataka-news/basavaraj-bommai-deve-gowda-karnataka-politics-bjp-jds-853904.html" target="_blank">ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮಾಜಿ ಪ್ರಧಾನಿ ದೇವೇಗೌಡರ ಬಲ </a></p>.<p>ಶಾಸಕರಾದ ಅರವಿಂದ ಬೆಲ್ಲದ್, ಸುನಿಲ್ ವಲ್ಯಾಪುರೆ, ಲಕ್ಷ್ಮಣ ಸವದಿ, ಸಿ.ಸಿ. ಪಾಟೀಲ ಮತ್ತಿತರರು ರಾಷ್ಟ್ರ ರಾಜಧಾನಿಗೆ ಬಂದಿದ್ದು, ಸಚಿವ ಸ್ಥಾನಕ್ಕಾಗಿ ತೀವ್ರ ಕಸರತ್ತು ನಡೆಸಿದ್ದಾರೆ.</p>.<p>ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ, ಕಲಬುರ್ಗಿಯ ಶಶಿಲ್ ನಮೋಶಿ ಅವರೂ ಸಚಿವ ಸ್ಥಾನ ನೀಡುವಂತೆ ವರಿಷ್ಠರ ದುಂಬಾಲು ಬಿದ್ದಿದ್ದಾರೆ.</p>.<p>ಪರಿಷತ್ ಸದಸ್ಯರಿಗೂ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಸಂಪುಟದ ಘನತೆಯನ್ನು ಹೆಚ್ಚಿಸಬೇಕು. ಈ ಮೊದಲು ಬಹುತೇಕ ಮುಖ್ಯಮಂತ್ರಿಗಳೂ ಪರಿಷತ್ ಸದಸ್ಯರಿಗೆ ಸಂಪುಟದಲ್ಲಿ ಆದ್ಯತೆ ನೀಡಿದ ಮಾದರಿಯಲ್ಲೇ ಈಗಲೂ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.</p>.<p><strong>ಇದನ್ನೂ ಓದಿ: </strong><a href="https://www.prajavani.net/karnataka-news/basavaraj-bommai-flies-to-delhi-again-to-consult-bjp-leadership-on-cabinet-expansion-853918.html" target="_blank">ಮುಖ್ಯಮಂತ್ರಿ ಬೊಮ್ಮಾಯಿ ದಿಢೀರ್ ದೆಹಲಿಗೆ: ಗರಿಗೆದರಿದ ಕುತೂಹಲ | Prajavani</a></p>.<p>ಬೊಮ್ಮಾಯಿ ಸಂಜೆಯ ವೇಳೆಗೆ ವರಿಷ್ಠರೊಂದಿಗಿನ ಸಮಾಲೋಚನೆ ಪೂರ್ಣಗೊಳಿಸಿ, ಸಂಪುಟ ಸೇರಲಿರುವವರ ಪಟ್ಟಿಯೊಂದಿಗೆ ಬೆಂಗಳೂರಿಗೆ ವಾಪಸಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>