<p>ರಾಜ್ಯ, ರಾಷ್ಟ್ರೀಯ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದ ಈ ದಿನದ ಟಾಪ್ 10 ಸುದ್ದಿಗಳು</p>.<p>ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 10ರಿಂದ 14 ಶಾಸಕರು ಸಚಿವರಾಗಿ ಲೋಕಭವನದಲ್ಲಿ ಬುಧವಾರ (ಜೂನ್ 3) ಸಂಜೆ 4.05ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. </p>.ಕರುನಾಡ ಚುಕ್ಕಾಣಿ ಶಿವಕುಮಾರ್ ಕೈಗೆ.<p>ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ನಾಳೆ ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ ಹೈಕಮಾಂಡ್ ನಾಯಕರು ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.</p>.ಇಂದು ಸಚಿವರ ಪಟ್ಟಿ ಪ್ರಕಟ: ಮಾಧ್ಯಮಗಳಲ್ಲಿನ ಹೆಸರುಗಳು ಅಧಿಕೃತವಲ್ಲ; ಶಿವಕುಮಾರ್.<p>ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರನ್ನಾಗಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ.</p>.ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ಧರಾಮಯ್ಯ ನೇಮಕ.<p>ಕಿರ್ಗಿಜ್ ಗಣರಾಜ್ಯದಲ್ಲಿ ಬುಧವಾರದಿಂದ ‘ಶಾಂಘೈ ಸಹಕಾರ ಸಂಘ’ದ ಸದಸ್ಯ ರಾಷ್ಟ್ರಗಳ ಶೃಂಗಸಭೆ ಆರಂಭವಾಗಲಿದ್ದು, ಸದಸ್ಯ ರಾಷ್ಟ್ರಗಳ ಕೈಗಾರಿಕಾ ಸಚಿವರ ಮಟ್ಟದ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.</p>.ಶಾಂಘೈ ಸಹಕಾರ ಸಂಘ ಶೃಂಗ: ಎಚ್ಡಿಕೆ ಭಾಗಿ.<p>ಒಂದು ಕಾಲದಲ್ಲಿ ಮನೆಗೆಲಸದವಳಾಗಿ ಕೆಲಸ ಮಾಡುತ್ತಿದ್ದ 37 ವರ್ಷದ ಮಹಿಳೆಯೊಬ್ಬರು ಸೋಮವಾರ ಪಶ್ಚಿಮ ಬಂಗಾಳ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.</p>.ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಬಂಗಾಳ ಸರ್ಕಾರದ ಸಚಿವೆ.<p>ಎಲ್ಲ ಪ್ರಕರಣಗಳಲ್ಲಿ ಅದರಲ್ಲೂ ವಿಶೇಷವಾಗಿ ಮಾದಕವಸ್ತುಗಳನ್ನು ಒಳಗೊಂಡ ಪ್ರಕರಣಗಳಲ್ಲಿ ವೈಯಕ್ತಿಕ ಸ್ವಾತಂತ್ರ್ಯಕ್ಕಿಂತ ದೇಶದ ಸಾರ್ವಭೌಮತೆಯೇ ಮುಖ್ಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.</p>.ವೈಯಕ್ತಿಕ ಸ್ವಾತಂತ್ರ್ಯಕ್ಕಿಂತ ದೇಶದ ಸಾರ್ವಭೌಮತೆಯೇ ಮಿಗಿಲು: ಸುಪ್ರೀಂ ಕೋರ್ಟ್ .<p>ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಮಂಗಳವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ‘ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸಿ’ ಎಂದು ಬಿಜೆಪಿ ಹೈಕಮಾಂಡ್ ಅಣ್ಣಾಮಲೈ ಅವರಿಗೆ ಮನವಿ ಮಾಡಿರುವುದಾಗಿ ಮೂಲಗಳು ತಿಳಿಸಿವೆ.</p>.ರಾಜೀನಾಮೆ: ಮರುಪರಿಶೀಲಿಸಲು ಅಣ್ಣಾಮಲೈಗೆ ಮನವಿ.<p><br>ಕುವೈತ್ ಮತ್ತು ಬಹರೇನ್ನಲ್ಲಿರುವ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.</p>.ಕುವೈತ್, ಬಹರೇನ್ ನೆಲೆಗಳ ಮೇಲೆ ಇರಾನ್ ದಾಳಿ: ಅಮೆರಿಕ ಪ್ರತಿದಾಳಿ.<p>ಅಮೆರಿಕ ಇರಾನ್ನ ಬಂದರುಗಳ ಮೇಲೆ ನೌಕಾ ದಿಗ್ಬಂಧನ ಹೇರಿದ್ದು, ನಿಯಮ ಉಲ್ಲಂಘಿಸಿ ಇರಾನ್ ಪ್ರವೇಶಿಸಲು ಯತ್ನಿಸುತ್ತಿದ್ದ ವಾಣಿಜ್ಯ ತೈಲ ಟ್ಯಾಂಕರ್ ಮೇಲೆ ಅಮೆರಿಕ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.</p>.ಇರಾನ್ನ ಖಾರ್ಗ್ ದ್ವೀಪದತ್ತ ಹೊರಟಿದ್ದ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ.<p>ಮಹಿಳೆಯರ 1,500 ಮೀ. ಓಟದಲ್ಲಿ ರಾಷ್ಟ್ರೀಯ ದಾಖಲೆ ಹೊಂದಿರುವ ಕೆ.ಎಂ.ದೀಕ್ಷಾ ಅವರು ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.ಮಹಿಳೆಯರ 1,500 ಮೀ. ಓಟ: ಡೋಪಿಂಗ್ ಪರೀಕ್ಷೆಯಲ್ಲಿ ಸಿಲುಕಿದ ದೀಕ್ಷಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದ ಈ ದಿನದ ಟಾಪ್ 10 ಸುದ್ದಿಗಳು</p>.<p>ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 10ರಿಂದ 14 ಶಾಸಕರು ಸಚಿವರಾಗಿ ಲೋಕಭವನದಲ್ಲಿ ಬುಧವಾರ (ಜೂನ್ 3) ಸಂಜೆ 4.05ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. </p>.ಕರುನಾಡ ಚುಕ್ಕಾಣಿ ಶಿವಕುಮಾರ್ ಕೈಗೆ.<p>ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ನಾಳೆ ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ ಹೈಕಮಾಂಡ್ ನಾಯಕರು ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.</p>.ಇಂದು ಸಚಿವರ ಪಟ್ಟಿ ಪ್ರಕಟ: ಮಾಧ್ಯಮಗಳಲ್ಲಿನ ಹೆಸರುಗಳು ಅಧಿಕೃತವಲ್ಲ; ಶಿವಕುಮಾರ್.<p>ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರನ್ನಾಗಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ.</p>.ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ಧರಾಮಯ್ಯ ನೇಮಕ.<p>ಕಿರ್ಗಿಜ್ ಗಣರಾಜ್ಯದಲ್ಲಿ ಬುಧವಾರದಿಂದ ‘ಶಾಂಘೈ ಸಹಕಾರ ಸಂಘ’ದ ಸದಸ್ಯ ರಾಷ್ಟ್ರಗಳ ಶೃಂಗಸಭೆ ಆರಂಭವಾಗಲಿದ್ದು, ಸದಸ್ಯ ರಾಷ್ಟ್ರಗಳ ಕೈಗಾರಿಕಾ ಸಚಿವರ ಮಟ್ಟದ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.</p>.ಶಾಂಘೈ ಸಹಕಾರ ಸಂಘ ಶೃಂಗ: ಎಚ್ಡಿಕೆ ಭಾಗಿ.<p>ಒಂದು ಕಾಲದಲ್ಲಿ ಮನೆಗೆಲಸದವಳಾಗಿ ಕೆಲಸ ಮಾಡುತ್ತಿದ್ದ 37 ವರ್ಷದ ಮಹಿಳೆಯೊಬ್ಬರು ಸೋಮವಾರ ಪಶ್ಚಿಮ ಬಂಗಾಳ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.</p>.ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಬಂಗಾಳ ಸರ್ಕಾರದ ಸಚಿವೆ.<p>ಎಲ್ಲ ಪ್ರಕರಣಗಳಲ್ಲಿ ಅದರಲ್ಲೂ ವಿಶೇಷವಾಗಿ ಮಾದಕವಸ್ತುಗಳನ್ನು ಒಳಗೊಂಡ ಪ್ರಕರಣಗಳಲ್ಲಿ ವೈಯಕ್ತಿಕ ಸ್ವಾತಂತ್ರ್ಯಕ್ಕಿಂತ ದೇಶದ ಸಾರ್ವಭೌಮತೆಯೇ ಮುಖ್ಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.</p>.ವೈಯಕ್ತಿಕ ಸ್ವಾತಂತ್ರ್ಯಕ್ಕಿಂತ ದೇಶದ ಸಾರ್ವಭೌಮತೆಯೇ ಮಿಗಿಲು: ಸುಪ್ರೀಂ ಕೋರ್ಟ್ .<p>ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಮಂಗಳವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ‘ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸಿ’ ಎಂದು ಬಿಜೆಪಿ ಹೈಕಮಾಂಡ್ ಅಣ್ಣಾಮಲೈ ಅವರಿಗೆ ಮನವಿ ಮಾಡಿರುವುದಾಗಿ ಮೂಲಗಳು ತಿಳಿಸಿವೆ.</p>.ರಾಜೀನಾಮೆ: ಮರುಪರಿಶೀಲಿಸಲು ಅಣ್ಣಾಮಲೈಗೆ ಮನವಿ.<p><br>ಕುವೈತ್ ಮತ್ತು ಬಹರೇನ್ನಲ್ಲಿರುವ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.</p>.ಕುವೈತ್, ಬಹರೇನ್ ನೆಲೆಗಳ ಮೇಲೆ ಇರಾನ್ ದಾಳಿ: ಅಮೆರಿಕ ಪ್ರತಿದಾಳಿ.<p>ಅಮೆರಿಕ ಇರಾನ್ನ ಬಂದರುಗಳ ಮೇಲೆ ನೌಕಾ ದಿಗ್ಬಂಧನ ಹೇರಿದ್ದು, ನಿಯಮ ಉಲ್ಲಂಘಿಸಿ ಇರಾನ್ ಪ್ರವೇಶಿಸಲು ಯತ್ನಿಸುತ್ತಿದ್ದ ವಾಣಿಜ್ಯ ತೈಲ ಟ್ಯಾಂಕರ್ ಮೇಲೆ ಅಮೆರಿಕ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.</p>.ಇರಾನ್ನ ಖಾರ್ಗ್ ದ್ವೀಪದತ್ತ ಹೊರಟಿದ್ದ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ.<p>ಮಹಿಳೆಯರ 1,500 ಮೀ. ಓಟದಲ್ಲಿ ರಾಷ್ಟ್ರೀಯ ದಾಖಲೆ ಹೊಂದಿರುವ ಕೆ.ಎಂ.ದೀಕ್ಷಾ ಅವರು ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.ಮಹಿಳೆಯರ 1,500 ಮೀ. ಓಟ: ಡೋಪಿಂಗ್ ಪರೀಕ್ಷೆಯಲ್ಲಿ ಸಿಲುಕಿದ ದೀಕ್ಷಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>