<p><strong>ನವದೆಹಲಿ:</strong> ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ₹1,950.80 ಕೋಟಿ ಪರಿಹಾರವನ್ನು 2025–26ನೇ ಸಾಲಿನ ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್ಡಿಆರ್ಎಫ್) ಅಡಿ ಮುಂಗಡವಾಗಿ ನೀಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಅನುಮೋದನೆ ನೀಡಿದ್ದಾರೆ. ಪರಿಹಾರದ ಎರಡನೇ ಕಂತಿನ ಮೊತ್ತ ಇದಾಗಿದೆ. </p><p>ಈ ವರ್ಷದ ನೈರುತ್ಯ ಮುಂಗಾರಿನಿಂದ ತೀವ್ರ ಹಾನಿಗೊಳಗಾದ ಜನರಿಗೆ ತ್ವರಿತವಾಗಿ ನೆರವು ಒದಗಿಸಲು ಒಟ್ಟು ಮೊತ್ತದಲ್ಲಿ ಕರ್ನಾಟಕಕ್ಕೆ ₹384.40 ಕೋಟಿ ಹಾಗೂ ಮಹಾರಾಷ್ಟ್ರಕ್ಕೆ ₹1,566.40 ಕೋಟಿ ನೀಡಲು ಅನುಮೋದನೆ ನೀಡಲಾಗಿದೆ.</p><p>‘ಪ್ರವಾಹ, ಭೂಕುಸಿತ ಹಾಗೂ ಮೇಘಸ್ಫೋಟಕ್ಕೆ ಒಳಗಾದ ರಾಜ್ಯಗಳಿಗೆ ಎಲ್ಲ ರೀತಿಯ ನೆರವು ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸಲಹೆಯಂತೆ ಕೇಂದ್ರ ಸರ್ಕಾರ ತನ್ನ ಬದ್ಧತೆ ವ್ಯಕ್ತಪಡಿಸಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. </p><p>ಎಸ್ಡಿಆರ್ಎಫ್ನ ಅಡಿಯಲ್ಲಿ ಕೇಂದ್ರದ ಪಾಲಾದ ₹13,603.20 ಕೋಟಿಯನ್ನು 27 ರಾಜ್ಯಗಳಿಗೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯ (ಎನ್ಡಿಆರ್ಎಫ್) ಅಡಿಯಲ್ಲಿ 15 ರಾಜ್ಯಗಳಿಗೆ ₹2,189.28 ಕೋಟಿ ಮೊತ್ತವನ್ನು ಕೇಂದ್ರ ಸರ್ಕಾರವು ಈ ವರ್ಷ ಬಿಡುಗಡೆ ಮಾಡಿದೆ</p><p>ಇದಲ್ಲದೇ, ಹೆಚ್ಚುವರಿಯಾಗಿ ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್ಡಿಎಂಎಫ್)ನ ಅಡಿಯಲ್ಲಿ 21 ರಾಜ್ಯಗಳಿಗೆ ₹4,571.30 ಕೋಟಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್ಡಿಎಂಎಫ್) ಅಡಿಯಲ್ಲಿ 9 ರಾಜ್ಯಗಳಿಗೆ ₹372.09 ಕೋಟಿ ನೆರವು ನೀಡಲಾಗಿದೆ. </p>.PHOTOS | ಕಲಬುರಗಿ: ಅತಿವೃಷ್ಟಿ, ಪ್ರವಾಹ; ಮನೆಗಳು ಜಲಾವೃತ, ಸಂಕಷ್ಟದಲ್ಲಿ ಜನರು.ಅತಿವೃಷ್ಟಿ, ಪ್ರವಾಹ: ತುರ್ತಾಗಿ ಸ್ಪಂದಿಸಿ: ಪ್ರಿಯಾಂಕ್ ಖರ್ಗೆ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ₹1,950.80 ಕೋಟಿ ಪರಿಹಾರವನ್ನು 2025–26ನೇ ಸಾಲಿನ ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್ಡಿಆರ್ಎಫ್) ಅಡಿ ಮುಂಗಡವಾಗಿ ನೀಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಅನುಮೋದನೆ ನೀಡಿದ್ದಾರೆ. ಪರಿಹಾರದ ಎರಡನೇ ಕಂತಿನ ಮೊತ್ತ ಇದಾಗಿದೆ. </p><p>ಈ ವರ್ಷದ ನೈರುತ್ಯ ಮುಂಗಾರಿನಿಂದ ತೀವ್ರ ಹಾನಿಗೊಳಗಾದ ಜನರಿಗೆ ತ್ವರಿತವಾಗಿ ನೆರವು ಒದಗಿಸಲು ಒಟ್ಟು ಮೊತ್ತದಲ್ಲಿ ಕರ್ನಾಟಕಕ್ಕೆ ₹384.40 ಕೋಟಿ ಹಾಗೂ ಮಹಾರಾಷ್ಟ್ರಕ್ಕೆ ₹1,566.40 ಕೋಟಿ ನೀಡಲು ಅನುಮೋದನೆ ನೀಡಲಾಗಿದೆ.</p><p>‘ಪ್ರವಾಹ, ಭೂಕುಸಿತ ಹಾಗೂ ಮೇಘಸ್ಫೋಟಕ್ಕೆ ಒಳಗಾದ ರಾಜ್ಯಗಳಿಗೆ ಎಲ್ಲ ರೀತಿಯ ನೆರವು ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸಲಹೆಯಂತೆ ಕೇಂದ್ರ ಸರ್ಕಾರ ತನ್ನ ಬದ್ಧತೆ ವ್ಯಕ್ತಪಡಿಸಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. </p><p>ಎಸ್ಡಿಆರ್ಎಫ್ನ ಅಡಿಯಲ್ಲಿ ಕೇಂದ್ರದ ಪಾಲಾದ ₹13,603.20 ಕೋಟಿಯನ್ನು 27 ರಾಜ್ಯಗಳಿಗೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯ (ಎನ್ಡಿಆರ್ಎಫ್) ಅಡಿಯಲ್ಲಿ 15 ರಾಜ್ಯಗಳಿಗೆ ₹2,189.28 ಕೋಟಿ ಮೊತ್ತವನ್ನು ಕೇಂದ್ರ ಸರ್ಕಾರವು ಈ ವರ್ಷ ಬಿಡುಗಡೆ ಮಾಡಿದೆ</p><p>ಇದಲ್ಲದೇ, ಹೆಚ್ಚುವರಿಯಾಗಿ ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್ಡಿಎಂಎಫ್)ನ ಅಡಿಯಲ್ಲಿ 21 ರಾಜ್ಯಗಳಿಗೆ ₹4,571.30 ಕೋಟಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್ಡಿಎಂಎಫ್) ಅಡಿಯಲ್ಲಿ 9 ರಾಜ್ಯಗಳಿಗೆ ₹372.09 ಕೋಟಿ ನೆರವು ನೀಡಲಾಗಿದೆ. </p>.PHOTOS | ಕಲಬುರಗಿ: ಅತಿವೃಷ್ಟಿ, ಪ್ರವಾಹ; ಮನೆಗಳು ಜಲಾವೃತ, ಸಂಕಷ್ಟದಲ್ಲಿ ಜನರು.ಅತಿವೃಷ್ಟಿ, ಪ್ರವಾಹ: ತುರ್ತಾಗಿ ಸ್ಪಂದಿಸಿ: ಪ್ರಿಯಾಂಕ್ ಖರ್ಗೆ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>