<p>ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆ, ಸಿನಿಮಾ ಸೇರಿ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಬೆಂಗಳೂರು: </strong>ಬಹಳ ಕಾಲದಿಂದ ಬಗೆಹರಿಯದೇ ಕಗ್ಗಂಟಾಗಿ ಉಳಿದಿದ್ದ ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿ ವಿಚಾರವಾಗಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಆ ಪ್ರಕಾರ ಗ್ರೂಪ್ ‘ಎ’ ಗೆ ಶೇ. 5.25, ಗ್ರೂಪ್ ‘ಬಿ’ ಗೆ ಶೇ. 5.25 ಮತ್ತು ಗ್ರೂಪ್ ‘ಸಿ’ಗೆ ಶೇ. 4.5 ಒಳ ಮೀಸಲಾತಿ ನೀಡಲು ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟದ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ.</p><p><a href="https://www.prajavani.net/news/karnataka-news/karnataka-cabinet-approves-sc-internal-reservation-3933062">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯರಾದ ರಾಘವ್ ಛಡ್ಡಾ, ಸಂದೀಪ್ ಪಾಠಕ್ ಸೇರಿದಂತೆ ಪಕ್ಷದ ಏಳು ಸದಸ್ಯರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ಶುಕ್ರವಾರ ಘೋಷಿಸಿದ್ದಾರೆ.</p><p><br><a href="https://www.prajavani.net/news/india-news/raghav-chadha-announces-aap-mps-join-bjp-3932464">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ರಾಘವ್ ಛಡ್ಡಾ ಸೇರಿ ಏಳು ಮಂದಿ ರಾಜ್ಯಸಭಾ ಸಂಸದರು ಎಎಪಿ ತೊರೆದು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಈ ದಿಢೀರ್ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.</p><p><br><a href="https://www.prajavani.net/news/india-news/aap-mps-including-raghav-chadha-join-bjp-3932697">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು: </strong>ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಶೇ 20ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿವೆ. ಆದರೆ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಮತ್ತು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಹೇಳಿದ್ದಾರೆ. </p> <p><a href="https://www.prajavani.net/news/karnataka-news/karnataka-engineering-fee-hike-decision-pending-3932412">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪದಚ್ಯುತಿ ಕೋರಿ ವಿರೋಧ ಪಕ್ಷಗಳು ಎರಡನೇ ಬಾರಿಗೆ ನೋಟಿಸ್ ಸಲ್ಲಿಸಿವೆ.</p><p><a href="https://www.prajavani.net/news/india-news/opposition-issues-second-notice-for-cec-gyanesh-kumar-removal-3932504">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ಬೆಂಗಳೂರಿನ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ರಕ್ಷಣಾ ಇಲಾಖೆ ವಿಧಿಸಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳು ಪ್ರಗತಿಗೆ ಅಡ್ಡಿಯಾಗಿದ್ದು, ಈ ನಿರ್ಬಂಧಗಳನ್ನು ಸಡಿಲಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದರು.</p><p><a href="https://www.prajavani.net/news/karnataka-news/dk-shivakumar-request-airport-building-height-relaxation-3932986">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಕೋಲ್ಕತ್ತ: </strong>ಜನರು ಬದಲಾವಣೆಗಾಗಿ ಉತ್ಸಾಹದಿಂದ ಮತ ಚಲಾಯಿಸಿದ್ದಾರೆ. ಪ್ರಾಚೀನ ಸಾಮ್ರಾಜ್ಯಗಳಾದ 'ಅಂಗ, ವಂಗ ಮತ್ತು ಕಳಿಂಗ'ದಲ್ಲಿ (ಇಂದಿನ ಅಸ್ಸಾಂ, ಬಂಗಾಳ ಮತ್ತು ಒಡಿಶಾ) ಮುಂದಿನ ತಿಂಗಳು ಬಿಜೆಪಿ ಸರ್ಕಾರ ಇರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪ್ರತಿಪಾದಿಸಿದ್ದಾರೆ.</p><p><a href="https://www.prajavani.net/news/india-news/angavangakalingawillhavebjpgovtsnextmonths-amitshah-3932305">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಚೆನ್ನೈ:</strong> ತಮಿಳುನಾಡಿನ ಮತದಾರರು ಈ ಬಾರಿ ಚುನಾವಣಾ ರಾಜಕೀಯವನ್ನು ಮರುವ್ಯಾಖ್ಯಾನಿಸಿದ್ದಾರೆ ಎಂದು ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಶುಕ್ರವಾರ ಹೇಳಿದ್ದಾರೆ.</p> <p><a href="https://www.prajavani.net/news/india-news/actor-vijay-tvk-election-redefinition-3933188">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ </a></p>.<p><strong>ನವದೆಹಲಿ:</strong> ಪುತ್ರಿ ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಇಂದ್ರಾಣಿ ಮುಖರ್ಜಿ ಅವರು, ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಹೊಸ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. </p><p><a href="https://www.prajavani.net/news/india-news/supreme-court-rejects-indrani-mukherjea-travel-plea-3932999">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಪತ್ತನಂತಿಟ್ಟ:</strong> ಶಬರಿಮಲೆ ಅಯ್ಯಪ್ಪ ದೇಗುಲದ ಸನಿಹ ಭಾರತೀಯ ಕರಾವಳಿ ಪಡೆಯ (ಐಸಿಜಿ) ಹೆಲಿಕಾಪ್ಟರ್ ಹಾರಾಟ ನಡೆಸಿದ್ದರಿಂದ ಪಂಪಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p><p><br><a href="https://www.prajavani.net/news/india-news/sabarimala-coast-guard-helicopter-case-3932962">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆ, ಸಿನಿಮಾ ಸೇರಿ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಬೆಂಗಳೂರು: </strong>ಬಹಳ ಕಾಲದಿಂದ ಬಗೆಹರಿಯದೇ ಕಗ್ಗಂಟಾಗಿ ಉಳಿದಿದ್ದ ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿ ವಿಚಾರವಾಗಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಆ ಪ್ರಕಾರ ಗ್ರೂಪ್ ‘ಎ’ ಗೆ ಶೇ. 5.25, ಗ್ರೂಪ್ ‘ಬಿ’ ಗೆ ಶೇ. 5.25 ಮತ್ತು ಗ್ರೂಪ್ ‘ಸಿ’ಗೆ ಶೇ. 4.5 ಒಳ ಮೀಸಲಾತಿ ನೀಡಲು ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟದ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ.</p><p><a href="https://www.prajavani.net/news/karnataka-news/karnataka-cabinet-approves-sc-internal-reservation-3933062">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯರಾದ ರಾಘವ್ ಛಡ್ಡಾ, ಸಂದೀಪ್ ಪಾಠಕ್ ಸೇರಿದಂತೆ ಪಕ್ಷದ ಏಳು ಸದಸ್ಯರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ಶುಕ್ರವಾರ ಘೋಷಿಸಿದ್ದಾರೆ.</p><p><br><a href="https://www.prajavani.net/news/india-news/raghav-chadha-announces-aap-mps-join-bjp-3932464">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ರಾಘವ್ ಛಡ್ಡಾ ಸೇರಿ ಏಳು ಮಂದಿ ರಾಜ್ಯಸಭಾ ಸಂಸದರು ಎಎಪಿ ತೊರೆದು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಈ ದಿಢೀರ್ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.</p><p><br><a href="https://www.prajavani.net/news/india-news/aap-mps-including-raghav-chadha-join-bjp-3932697">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು: </strong>ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಶೇ 20ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿವೆ. ಆದರೆ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಮತ್ತು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಹೇಳಿದ್ದಾರೆ. </p> <p><a href="https://www.prajavani.net/news/karnataka-news/karnataka-engineering-fee-hike-decision-pending-3932412">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪದಚ್ಯುತಿ ಕೋರಿ ವಿರೋಧ ಪಕ್ಷಗಳು ಎರಡನೇ ಬಾರಿಗೆ ನೋಟಿಸ್ ಸಲ್ಲಿಸಿವೆ.</p><p><a href="https://www.prajavani.net/news/india-news/opposition-issues-second-notice-for-cec-gyanesh-kumar-removal-3932504">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ಬೆಂಗಳೂರಿನ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ರಕ್ಷಣಾ ಇಲಾಖೆ ವಿಧಿಸಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳು ಪ್ರಗತಿಗೆ ಅಡ್ಡಿಯಾಗಿದ್ದು, ಈ ನಿರ್ಬಂಧಗಳನ್ನು ಸಡಿಲಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದರು.</p><p><a href="https://www.prajavani.net/news/karnataka-news/dk-shivakumar-request-airport-building-height-relaxation-3932986">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಕೋಲ್ಕತ್ತ: </strong>ಜನರು ಬದಲಾವಣೆಗಾಗಿ ಉತ್ಸಾಹದಿಂದ ಮತ ಚಲಾಯಿಸಿದ್ದಾರೆ. ಪ್ರಾಚೀನ ಸಾಮ್ರಾಜ್ಯಗಳಾದ 'ಅಂಗ, ವಂಗ ಮತ್ತು ಕಳಿಂಗ'ದಲ್ಲಿ (ಇಂದಿನ ಅಸ್ಸಾಂ, ಬಂಗಾಳ ಮತ್ತು ಒಡಿಶಾ) ಮುಂದಿನ ತಿಂಗಳು ಬಿಜೆಪಿ ಸರ್ಕಾರ ಇರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪ್ರತಿಪಾದಿಸಿದ್ದಾರೆ.</p><p><a href="https://www.prajavani.net/news/india-news/angavangakalingawillhavebjpgovtsnextmonths-amitshah-3932305">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಚೆನ್ನೈ:</strong> ತಮಿಳುನಾಡಿನ ಮತದಾರರು ಈ ಬಾರಿ ಚುನಾವಣಾ ರಾಜಕೀಯವನ್ನು ಮರುವ್ಯಾಖ್ಯಾನಿಸಿದ್ದಾರೆ ಎಂದು ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಶುಕ್ರವಾರ ಹೇಳಿದ್ದಾರೆ.</p> <p><a href="https://www.prajavani.net/news/india-news/actor-vijay-tvk-election-redefinition-3933188">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ </a></p>.<p><strong>ನವದೆಹಲಿ:</strong> ಪುತ್ರಿ ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಇಂದ್ರಾಣಿ ಮುಖರ್ಜಿ ಅವರು, ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಹೊಸ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. </p><p><a href="https://www.prajavani.net/news/india-news/supreme-court-rejects-indrani-mukherjea-travel-plea-3932999">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಪತ್ತನಂತಿಟ್ಟ:</strong> ಶಬರಿಮಲೆ ಅಯ್ಯಪ್ಪ ದೇಗುಲದ ಸನಿಹ ಭಾರತೀಯ ಕರಾವಳಿ ಪಡೆಯ (ಐಸಿಜಿ) ಹೆಲಿಕಾಪ್ಟರ್ ಹಾರಾಟ ನಡೆಸಿದ್ದರಿಂದ ಪಂಪಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p><p><br><a href="https://www.prajavani.net/news/india-news/sabarimala-coast-guard-helicopter-case-3932962">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>