ಮುಂಬೈ: ‘ಕರ್ನಾಟಕದಲ್ಲಿ ಶಾಲಾ ಪಠ್ಯದಿಂದ ಹಿಂದುತ್ವ ಸಿದ್ಧಾಂತ ಪ್ರತಿಪಾದಕ ವಿ.ಡಿ. ಸಾವರ್ಕರ್ ಹಾಗೂ ಆರ್ಎಸ್ಎಸ್ ಸ್ಥಾಪಕ ಹೆಡಗೇವಾರ್ ಅವರ ಪಠ್ಯವನ್ನು ಕೈಬಿಟ್ಟಿರುವ ಕಾಂಗ್ರೆಸ್ ಸರ್ಕಾರದ ಕ್ರಮದ ಬಗ್ಗೆ ಶಿವಸೇನಾ (ಉದ್ಧವ್ ಬಣ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ನಿಲುವೇನು’ ಎಂದು ಬಿಜೆಪಿ ನಾಯಕರು ಶುಕ್ರವಾರ ಪ್ರಶ್ನಿಸಿದ್ದಾರೆ.
6ರಿಂದ 10ನೇ ತರಗತಿವರೆಗಿನ ಕನ್ನಡ ಹಾಗೂ ಸಮಾಜ ವಿಜ್ಞಾನ ಪಠ್ಯದಿಂದ ಸಾವರ್ಕರ್ ಹಾಗೂ ಹೆಡಗೇವಾರ್ ಅವರ ಪಠ್ಯವನ್ನು ಕೈಬಿಟ್ಟು, ಸಾವಿತ್ರಿ ಬಾಯಿ ಫುಲೆ, ಇಂದಿರಾ ಗಾಂಧಿ ಅವರಿಗೆ ನೆಹರೂ ಅವರು ಬರೆದ ಪತ್ರ ಹಾಗೂ ಅಂಬೇಡ್ಕರ್ ಅವರ ಕವಿತೆಗಳನ್ನು ಸೇರಿಸಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಮಹಾರಾಷ್ಟ್ರ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಎಂದಿದೆ.