<p>ರಾಜ್ಯ, ರಾಷ್ಟ್ರೀಯ, ವಿದೇಶ, ವಾಣಿಜ್ಯ ಹಾಗೂ ಕ್ರೀಡೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ...</p>.<p><strong>ಬೆಂಗಳೂರು:</strong> ಡೀಸೆಲ್ ದರ ಏರಿಕೆ ಮತ್ತು ಇತರ ಕಾರಣಗಳಿಂದಾಗಿ ಶುಕ್ರವಾರ ರಾತ್ರಿ 12ರಿಂದ ಜಾರಿಗೆ ಬರುವಂತೆ ಶೇ 10ರಿಂದ ಶೇ 30ರವರೆಗೆ ಟಿಕೆಟ್ ದರ ಹೆಚ್ಚಳ ಮಾಡಲು ಮಾಡಲು ಬಸ್ ಮಾಲೀಕರು ನಿರ್ಧರಿಸಿದ್ದಾರೆ.</p><p><br><a href="https://www.prajavani.net/news/karnataka-news/karnataka-private-bus-fare-hike-3988513">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ನೈರುತ್ಯ ಮುಂಗಾರು ಮಾರುತಗಳು ಮೇ 26ರಂದು ಕೇರಳಂ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.</p><p><a href="https://www.prajavani.net/news/india-news/kerala-monsoon-arrival-forecast-3986894">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು:</strong> ಇಂಧನ ದರ ಏರಿಕೆಯು ಗಿಗ್ ಕಾರ್ಮಿಕರ ಜೀವನೋಪಾಯದ ಮೇಲೆ ಪರಿಣಾಮ ಬೀರುತ್ತಿದೆ. ಎಲ್ಪಿಜಿ ಸಿಲಿಂಡರ್ ದರ ಏರಿಕೆಯಾಗಿ ಆನ್ಲೈನ್ ಪ್ಲ್ಯಾಟ್ಫಾರ್ಮ್ ಬಳಸಿ ಆಹಾರ ತರಿಸುವವರ ಪ್ರಮಾಣ ಒಂದೆಡೆ ಕಡಿಮೆಯಾಗಿದ್ದರೆ, ಪೆಟ್ರೊಲ್ ದರ ಹೆಚ್ಚಳವಾಗಿ ಪೂರೈಕೆ ವೆಚ್ಚ ಅಧಿಕಗೊಂಡಿದೆ.</p><p><a href="https://www.prajavani.net/district/bengaluru-city/fuel-price-hike-impact-on-gig-workers-3987284">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p><strong>ಕೋಲ್ಕತ್ತ:</strong> ಯಾರಾದರೂ ಪಕ್ಷ ಬಿಟ್ಟು ಹೋಗಲು ಬಯಸಿದರೆ ಅವರು ಹೋಗಬಹುದು. ನಾವು ಯಾರನ್ನೂ ತಡೆಯುವುದಿಲ್ಲ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ.</p><p><a href="https://www.prajavani.net/news/india-news/whoever-wants-to-go-may-go-mamata-appeals-defeated-tmc-members-to-rebuild-party-3988516">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p><strong>ಪುಣೆ/ನಾಗ್ಪುರ:</strong> ವೈದ್ಯಕೀಯ ಚಿಕಿತ್ಸೆಗೆ ಹಣ ಭರಿಸಲು ಸಾಧ್ಯವಾಗದ ಕಾರಣ ಆಸ್ಪತ್ರೆಯೊಂದರಲ್ಲಿ ಕಚ್ಚಾ ಬಾಂಬ್ (ಐಇಡಿ) ಇಟ್ಟಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಇದರಲ್ಲಿ ಯಾವುದೇ ಭಯೋತ್ಪಾದನಾ ಕೃತ್ಯದ ಉದ್ದೇಶವಿರಲಿಲ್ಲ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.</p><p><a href="https://www.prajavani.net/news/india-news/man-who-planted-ied-in-pune-hospital-wanted-money-for-own-treatment-police-say-3988525">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p>ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಿರ್ಧಾರವನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.</p><p><a href="https://www.prajavani.net/news/karnataka-news/siddaramaiah-demands-fuel-price-hike-reversal-3987056">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p><strong>ನವದೆಹಲಿ</strong>: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಶುಕ್ರವಾರ ಇಲ್ಲಿ ಭೇಟಿ ಮಾಡಿ ಸಮಾಲೋಚಿಸಿದರು. </p><p><a href="https://www.prajavani.net/news/karnataka-news/deve-gowda-rajya-sabha-jds-bjp-talks-3986899">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p><strong>ತೈಪೆ:</strong> ಅಮೆರಿಕದೊಂದಿಗಿನ ರಕ್ಷಣಾ ವ್ಯಾಪಾರವು ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ತೈವಾನ್ ಉಪ ವಿದೇಶಾಂಗ ಸಚಿವ ಚೆನ್ ಮಿಂಗ್-ಚಿ ಅವರು ಶನಿವಾರ(ಮೇ 16) ಹೇಳಿದ್ದಾರೆ.</p> <p><a href="https://www.prajavani.net/news/world-news/taiwan-us-defense-trade-peace-3988519">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p>ನವದೆಹಲಿ (ಪಿಟಿಐ): ಏಪ್ರಿಲ್ ತಿಂಗಳಿನಲ್ಲಿ ದೇಶದಿಂದ ₹4.17 ಲಕ್ಷ ಕೋಟಿ (43.56 ಬಿಲಿಯನ್ ಡಾಲರ್) ಮೌಲ್ಯದ ಸರಕು ಮತ್ತು ಸೇವೆಗಳು ರಫ್ತಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ರಫ್ತು ಪ್ರಮಾಣವು ಶೇ 13.78ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯದ ಅಂಕಿ–ಅಂಶಗಳು ಶುಕ್ರವಾರ ತಿಳಿಸಿದೆ.</p><p><a href="https://www.prajavani.net/business/commerce-news/india-exports-increase-april-commerce-ministry-report-3987417">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p><strong>ಲಖನೌ</strong>: ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ (90;38ಎ) ಅವರು ಅಲ್ಪಅಂತರದಲ್ಲಿ ಶತಕ ತಪ್ಪಿಸಿಕೊಂಡರು. ಆದರೆ, ಅವರ ಮಿಂಚಿನ ಬ್ಯಾಟಿಂಗ್ನಿಂದಾಗಿ ಲಖನೌ ಸೂಪರ್ ಜೈಂಟ್ಸ್ ತಂಡವು ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಏಳು ವಿಕೆಟ್ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ನಿರಾಯಾಸವಾಗಿ ಮಣಿಸಿತು.</p><p><a href="https://www.prajavani.net/sports/cricket/ipl-2026-lsg-vs-csk-lucknow-super-giants-vs-chennai-super-kings-in-lucknow-here-is-the-full-match-highlights-3986595">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ವಿದೇಶ, ವಾಣಿಜ್ಯ ಹಾಗೂ ಕ್ರೀಡೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ...</p>.<p><strong>ಬೆಂಗಳೂರು:</strong> ಡೀಸೆಲ್ ದರ ಏರಿಕೆ ಮತ್ತು ಇತರ ಕಾರಣಗಳಿಂದಾಗಿ ಶುಕ್ರವಾರ ರಾತ್ರಿ 12ರಿಂದ ಜಾರಿಗೆ ಬರುವಂತೆ ಶೇ 10ರಿಂದ ಶೇ 30ರವರೆಗೆ ಟಿಕೆಟ್ ದರ ಹೆಚ್ಚಳ ಮಾಡಲು ಮಾಡಲು ಬಸ್ ಮಾಲೀಕರು ನಿರ್ಧರಿಸಿದ್ದಾರೆ.</p><p><br><a href="https://www.prajavani.net/news/karnataka-news/karnataka-private-bus-fare-hike-3988513">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ನೈರುತ್ಯ ಮುಂಗಾರು ಮಾರುತಗಳು ಮೇ 26ರಂದು ಕೇರಳಂ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.</p><p><a href="https://www.prajavani.net/news/india-news/kerala-monsoon-arrival-forecast-3986894">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು:</strong> ಇಂಧನ ದರ ಏರಿಕೆಯು ಗಿಗ್ ಕಾರ್ಮಿಕರ ಜೀವನೋಪಾಯದ ಮೇಲೆ ಪರಿಣಾಮ ಬೀರುತ್ತಿದೆ. ಎಲ್ಪಿಜಿ ಸಿಲಿಂಡರ್ ದರ ಏರಿಕೆಯಾಗಿ ಆನ್ಲೈನ್ ಪ್ಲ್ಯಾಟ್ಫಾರ್ಮ್ ಬಳಸಿ ಆಹಾರ ತರಿಸುವವರ ಪ್ರಮಾಣ ಒಂದೆಡೆ ಕಡಿಮೆಯಾಗಿದ್ದರೆ, ಪೆಟ್ರೊಲ್ ದರ ಹೆಚ್ಚಳವಾಗಿ ಪೂರೈಕೆ ವೆಚ್ಚ ಅಧಿಕಗೊಂಡಿದೆ.</p><p><a href="https://www.prajavani.net/district/bengaluru-city/fuel-price-hike-impact-on-gig-workers-3987284">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p><strong>ಕೋಲ್ಕತ್ತ:</strong> ಯಾರಾದರೂ ಪಕ್ಷ ಬಿಟ್ಟು ಹೋಗಲು ಬಯಸಿದರೆ ಅವರು ಹೋಗಬಹುದು. ನಾವು ಯಾರನ್ನೂ ತಡೆಯುವುದಿಲ್ಲ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ.</p><p><a href="https://www.prajavani.net/news/india-news/whoever-wants-to-go-may-go-mamata-appeals-defeated-tmc-members-to-rebuild-party-3988516">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p><strong>ಪುಣೆ/ನಾಗ್ಪುರ:</strong> ವೈದ್ಯಕೀಯ ಚಿಕಿತ್ಸೆಗೆ ಹಣ ಭರಿಸಲು ಸಾಧ್ಯವಾಗದ ಕಾರಣ ಆಸ್ಪತ್ರೆಯೊಂದರಲ್ಲಿ ಕಚ್ಚಾ ಬಾಂಬ್ (ಐಇಡಿ) ಇಟ್ಟಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಇದರಲ್ಲಿ ಯಾವುದೇ ಭಯೋತ್ಪಾದನಾ ಕೃತ್ಯದ ಉದ್ದೇಶವಿರಲಿಲ್ಲ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.</p><p><a href="https://www.prajavani.net/news/india-news/man-who-planted-ied-in-pune-hospital-wanted-money-for-own-treatment-police-say-3988525">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p>ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಿರ್ಧಾರವನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.</p><p><a href="https://www.prajavani.net/news/karnataka-news/siddaramaiah-demands-fuel-price-hike-reversal-3987056">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p><strong>ನವದೆಹಲಿ</strong>: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಶುಕ್ರವಾರ ಇಲ್ಲಿ ಭೇಟಿ ಮಾಡಿ ಸಮಾಲೋಚಿಸಿದರು. </p><p><a href="https://www.prajavani.net/news/karnataka-news/deve-gowda-rajya-sabha-jds-bjp-talks-3986899">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p><strong>ತೈಪೆ:</strong> ಅಮೆರಿಕದೊಂದಿಗಿನ ರಕ್ಷಣಾ ವ್ಯಾಪಾರವು ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ತೈವಾನ್ ಉಪ ವಿದೇಶಾಂಗ ಸಚಿವ ಚೆನ್ ಮಿಂಗ್-ಚಿ ಅವರು ಶನಿವಾರ(ಮೇ 16) ಹೇಳಿದ್ದಾರೆ.</p> <p><a href="https://www.prajavani.net/news/world-news/taiwan-us-defense-trade-peace-3988519">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p>ನವದೆಹಲಿ (ಪಿಟಿಐ): ಏಪ್ರಿಲ್ ತಿಂಗಳಿನಲ್ಲಿ ದೇಶದಿಂದ ₹4.17 ಲಕ್ಷ ಕೋಟಿ (43.56 ಬಿಲಿಯನ್ ಡಾಲರ್) ಮೌಲ್ಯದ ಸರಕು ಮತ್ತು ಸೇವೆಗಳು ರಫ್ತಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ರಫ್ತು ಪ್ರಮಾಣವು ಶೇ 13.78ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯದ ಅಂಕಿ–ಅಂಶಗಳು ಶುಕ್ರವಾರ ತಿಳಿಸಿದೆ.</p><p><a href="https://www.prajavani.net/business/commerce-news/india-exports-increase-april-commerce-ministry-report-3987417">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<p><strong>ಲಖನೌ</strong>: ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ (90;38ಎ) ಅವರು ಅಲ್ಪಅಂತರದಲ್ಲಿ ಶತಕ ತಪ್ಪಿಸಿಕೊಂಡರು. ಆದರೆ, ಅವರ ಮಿಂಚಿನ ಬ್ಯಾಟಿಂಗ್ನಿಂದಾಗಿ ಲಖನೌ ಸೂಪರ್ ಜೈಂಟ್ಸ್ ತಂಡವು ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಏಳು ವಿಕೆಟ್ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ನಿರಾಯಾಸವಾಗಿ ಮಣಿಸಿತು.</p><p><a href="https://www.prajavani.net/sports/cricket/ipl-2026-lsg-vs-csk-lucknow-super-giants-vs-chennai-super-kings-in-lucknow-here-is-the-full-match-highlights-3986595">ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>