<p><strong>ಆಗ್ರಾ</strong>: ಸ್ಟ್ಯಾಂಡಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಪ್ರಕರಣದ ಬೆನ್ನಲ್ಲೇ ಸಮಾಜವಾದಿ ರಾಜ್ಯಸಭಾ ಸದಸ್ಯ ರಾಮ್ಜಿ ಲಾಲ್ ಸುಮನ್ ಅವರ ಆಗ್ರಾ ನಿವಾಸದ ಮೇಲೆ ಬುಧವಾರ ಮಧ್ಯಾಹ್ನ ದಾಳಿ ನಡೆದಿದ್ದು, ಕರ್ಣಿ ಸೇನಾ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ.</p><p>ಸುಮನ್ ಅವರು ಮೇವಾಡದ ಅರಸ ರಾಣಾ ಸಂಗಾ ಅವರನ್ನು ‘ದೇಶದ್ರೋಹಿ’ ಎಂದು ಕರೆದಿರುವುದಕ್ಕೆ ಕೆರಳಿದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.</p><p>ಮಾರ್ಚ್ 21ರಂದು ರಾಜ್ಯಸಭೆಯಲ್ಲಿ ಮಾತನಾಡಿದ್ದ ಸುಮನ್ ಅವರು ರಾಣಾ ಸಂಗಾ ಅವರನ್ನು ದೇಶದ್ರೋಹಿ ಎಂದು ಕರೆದಿದ್ದರು.</p><p>‘ಬಾಬರ್ನನ್ನು ಭಾರತಕ್ಕೆ ಕರೆತಂದವರು ಯಾರು? ಇಬ್ರಾಹಿಂ ಲೋಧಿಯನ್ನು ಸೋಲಿಸಲು ಬಾಬರ್ಗೆ ಆಹ್ವಾನ ನೀಡಿದ್ದು ರಾಣಾ ಸಂಗಾ. ಮುಸ್ಲಿಮರು ಬಾಬರ್ನ ಸಂತತಿ ಆದರೆ, ಹಿಂದೂಗಳು ದೇಶದ್ರೋಹಿ ರಾಣಾ ಸಂಗಾನ ವಂಶಸ್ಥರೇ? ನಾವು ಬಾಬರ್ನನ್ನು ಟೀಕಿಸುತ್ತೇವೆ. ಆದರೆ ರಾಣಾನನ್ನು ಟೀಕಿಸಲ್ಲ’ ಎಂದು ಸುಮನ್ ಹೇಳಿದ್ದರು.</p>.<p>ಇಂದು ಮಧ್ಯಾಹ್ನ ಬುಲ್ಡೋಜರ್ ಸಮೇತ ಸುಮನ್ ಅವರ ನಿವಾಸ ತಲುಪಿದ್ದ ಕಾರ್ಯಕರ್ತರು, ಅಲ್ಲಿರುವ ವಸ್ತುಗಳನ್ನು ಚೆಲ್ಲಾಪಿಲ್ಲಿ ಎಸೆದು ಹಾನಿ ಮಾಡಿದ್ದಾರೆ.</p><p>ಏನತ್ಮಧ್ಯೆ, ಸುಮನ್ ಅವರ ಮುಖಕ್ಕೆ ಮಸಿ ಬಳಿದು ಬೂಟಿನಲ್ಲಿ ಹೊಡೆದವರಿಗೆ ಬಹುಮಾನವಾಗಿ ₹5 ಲಕ್ಷ ನೀಡುವುದಾಗಿಯೂ ಸಂಘಟನೆಯ ರಾಜ್ಯ ಘಟಕ ಘೋಷಿಸಿದೆ.</p><p>ಹಾಸ್ಯ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು ‘ವಂಚಕ’ ಎಂದು ಕುನಾಲ್ ಕಾಮ್ರಾ ಕರೆದಿದ್ದರು. ಇದರಿಂದ ಕೆರಳಿದ್ದ ಶಿವಸೇನಾ ಕಾರ್ಯಕರ್ತರು ಭಾನುವಾರ ರಾತ್ರಿ ಕಾರ್ಯಕ್ರಮ ನಡೆದ ಖಾರ್ನಲ್ಲಿರುವ ಹ್ಯಾಬಿಟೇಟ್ ಕಾಮಿಡಿ ಕ್ಲಬ್ ಇರುವ ಹೋಟೆಲ್ ಅನ್ನು ಹಾನಿಗೊಳಿಸಿದ್ದರು.</p>.ಶಿಂದೆ ‘ದೇಶದ್ರೋಹಿ’ ಎಂದ ಸ್ಟ್ಯಾಂಡ್ಅಪ್ ಕಾಮಿಡಿಯನ್ ಕುನಾಲ್: ಹೋಟೆಲ್ಗೆ ಹಾನಿ.ಶಿಂದೆ ಕ್ಷಮೆಯಾಚಿಸುವುದಿಲ್ಲ, ವಿಧ್ವಂಸಕ ಕೃತ್ಯ ಖಂಡಿಸುವೆ: ಕಾಮ್ರಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಗ್ರಾ</strong>: ಸ್ಟ್ಯಾಂಡಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಪ್ರಕರಣದ ಬೆನ್ನಲ್ಲೇ ಸಮಾಜವಾದಿ ರಾಜ್ಯಸಭಾ ಸದಸ್ಯ ರಾಮ್ಜಿ ಲಾಲ್ ಸುಮನ್ ಅವರ ಆಗ್ರಾ ನಿವಾಸದ ಮೇಲೆ ಬುಧವಾರ ಮಧ್ಯಾಹ್ನ ದಾಳಿ ನಡೆದಿದ್ದು, ಕರ್ಣಿ ಸೇನಾ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ.</p><p>ಸುಮನ್ ಅವರು ಮೇವಾಡದ ಅರಸ ರಾಣಾ ಸಂಗಾ ಅವರನ್ನು ‘ದೇಶದ್ರೋಹಿ’ ಎಂದು ಕರೆದಿರುವುದಕ್ಕೆ ಕೆರಳಿದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.</p><p>ಮಾರ್ಚ್ 21ರಂದು ರಾಜ್ಯಸಭೆಯಲ್ಲಿ ಮಾತನಾಡಿದ್ದ ಸುಮನ್ ಅವರು ರಾಣಾ ಸಂಗಾ ಅವರನ್ನು ದೇಶದ್ರೋಹಿ ಎಂದು ಕರೆದಿದ್ದರು.</p><p>‘ಬಾಬರ್ನನ್ನು ಭಾರತಕ್ಕೆ ಕರೆತಂದವರು ಯಾರು? ಇಬ್ರಾಹಿಂ ಲೋಧಿಯನ್ನು ಸೋಲಿಸಲು ಬಾಬರ್ಗೆ ಆಹ್ವಾನ ನೀಡಿದ್ದು ರಾಣಾ ಸಂಗಾ. ಮುಸ್ಲಿಮರು ಬಾಬರ್ನ ಸಂತತಿ ಆದರೆ, ಹಿಂದೂಗಳು ದೇಶದ್ರೋಹಿ ರಾಣಾ ಸಂಗಾನ ವಂಶಸ್ಥರೇ? ನಾವು ಬಾಬರ್ನನ್ನು ಟೀಕಿಸುತ್ತೇವೆ. ಆದರೆ ರಾಣಾನನ್ನು ಟೀಕಿಸಲ್ಲ’ ಎಂದು ಸುಮನ್ ಹೇಳಿದ್ದರು.</p>.<p>ಇಂದು ಮಧ್ಯಾಹ್ನ ಬುಲ್ಡೋಜರ್ ಸಮೇತ ಸುಮನ್ ಅವರ ನಿವಾಸ ತಲುಪಿದ್ದ ಕಾರ್ಯಕರ್ತರು, ಅಲ್ಲಿರುವ ವಸ್ತುಗಳನ್ನು ಚೆಲ್ಲಾಪಿಲ್ಲಿ ಎಸೆದು ಹಾನಿ ಮಾಡಿದ್ದಾರೆ.</p><p>ಏನತ್ಮಧ್ಯೆ, ಸುಮನ್ ಅವರ ಮುಖಕ್ಕೆ ಮಸಿ ಬಳಿದು ಬೂಟಿನಲ್ಲಿ ಹೊಡೆದವರಿಗೆ ಬಹುಮಾನವಾಗಿ ₹5 ಲಕ್ಷ ನೀಡುವುದಾಗಿಯೂ ಸಂಘಟನೆಯ ರಾಜ್ಯ ಘಟಕ ಘೋಷಿಸಿದೆ.</p><p>ಹಾಸ್ಯ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು ‘ವಂಚಕ’ ಎಂದು ಕುನಾಲ್ ಕಾಮ್ರಾ ಕರೆದಿದ್ದರು. ಇದರಿಂದ ಕೆರಳಿದ್ದ ಶಿವಸೇನಾ ಕಾರ್ಯಕರ್ತರು ಭಾನುವಾರ ರಾತ್ರಿ ಕಾರ್ಯಕ್ರಮ ನಡೆದ ಖಾರ್ನಲ್ಲಿರುವ ಹ್ಯಾಬಿಟೇಟ್ ಕಾಮಿಡಿ ಕ್ಲಬ್ ಇರುವ ಹೋಟೆಲ್ ಅನ್ನು ಹಾನಿಗೊಳಿಸಿದ್ದರು.</p>.ಶಿಂದೆ ‘ದೇಶದ್ರೋಹಿ’ ಎಂದ ಸ್ಟ್ಯಾಂಡ್ಅಪ್ ಕಾಮಿಡಿಯನ್ ಕುನಾಲ್: ಹೋಟೆಲ್ಗೆ ಹಾನಿ.ಶಿಂದೆ ಕ್ಷಮೆಯಾಚಿಸುವುದಿಲ್ಲ, ವಿಧ್ವಂಸಕ ಕೃತ್ಯ ಖಂಡಿಸುವೆ: ಕಾಮ್ರಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>