ಬಳಿಕ ಖುರೇಶಿ ಅವರಿಗೆ ಪತ್ರ ಬರೆದಿರುವ ಸುಷ್ಮಾ, ‘ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವುದಕ್ಕೆ ಧನ್ಯವಾದ. ಆದರೆ, ಪೂರ್ವ ನಿಗದಿಯಂತೆ ತೆಲಂಗಾಣ ಚುನಾವಣಾ ಪ್ರಚಾರಕ್ಕೆ ತೆರಳಬೇಕಿದ್ದು, ಕರ್ತಾರಪುರಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ನಮ್ಮ ಸರ್ಕಾರದ ಪರವಾಗಿ, ಕೇಂದ್ರ ಸಚಿವರಾದ ಹರ್ಸಿಮ್ರತ್ ಕೌರ್ ಬಾದಲ್ ಮತ್ತು ಹರ್ದೀಪ್ ಸಿಂಗ್ ಪುರಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದ್ದಾರೆ.