ಚೆನ್ನೈ:ಇಲ್ಲಿನ ರಾಜಾಜಿ ಹಾಲ್ನಲ್ಲಿರುವತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನದ ವೇಳೆ ಉಂಟಾದನೂಕು ನುಗ್ಗಲಿಗೆ ಇಬ್ಬರುಮೃತಪಟ್ಟಿದ್ದಾರೆ.
ಇದೇ ವೇಳೆ 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅವರನ್ನು ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಂತಿಮ ದಶರ್ನಕ್ಕಾಗಿ ರಾಜಾಜಿ ಹಾಲ್ನ ಹೊರಗೆಒಂದು ಲಕ್ಷ ಮಂದಿ ಸೇರಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈ ಹಿನ್ನೆಲೆ ಹಾಲ್ನ ಬಾಗಿಲನ್ನು ಬಂದ್ ಮಾಡಲಾಗಿದೆ.