ಚೆನ್ನೈ: ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರ ತಂಡವೊಂದು ನಿರಂತರ ನಿಗಾ ವಹಿಸಿ, ಚಿಕಿತ್ಸೆ ನೀಡುತ್ತಿದ್ದಾರೆ. ಅಭಿಮಾನಿಗಳು ಯಾವುದೇ ರೀತಿಯ ಸಂಘರ್ಷವನ್ನುಂಟು ಮಾಡಬಾರದು. ಪೊಲೀಸರಿಗಾಗಲೀ, ಸಾರ್ವಜನಿಕರಿಗಾಗಲೀ ತೊಂದರೆ ನೀಡಬಾರದು ಎಂದು ಕರುಣಾನಿಧಿ ಪುತ್ರಸ್ಟಾಲಿನ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.