<p><strong>ಚೆನ್ನೈ:</strong> ಕರೂರು ಕಾಲ್ತುಳಿತ ಪ್ರಕರಣದ ತನಿಖೆಯ ಭಾಗವಾಗಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ನಟ ವಿಜಯ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ನೋಟಿಸ್ ನೀಡಿದೆ ಎಂದು ವರದಿಯಾಗಿದೆ.</p><p>2025ರ ಸೆ.27ರಂದು ಕರೂರಿನಲ್ಲಿ ನಡೆದ ಟಿವಿಕೆ ಪಕ್ಷದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನ ಮೃತಪಟ್ಟಿದ್ದರು. ಈ ಘಟನೆ ರಾಜಕೀಯ ಕೋಲಾಹಲಕ್ಕೆ ಕಾರಣವಾದ ಬಳಿಕ ತಮಿಳುನಾಡು ಪೊಲೀಸರು ಕೈಗೆತ್ತಿಕೊಂಡಿದ್ದ ತನಿಖೆಯನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ಹಸ್ತಾಂತರಿಸಿತ್ತು. </p><p>ಪ್ರಕರಣ ಸಂಬಂಧ ಟಿವಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್. ಆನಂದ್, ಪಕ್ಷದ ಕಾರ್ಯತಂತ್ರ ಪ್ರಧಾನ ಕಾರ್ಯದರ್ಶಿ ಆಧಾವ್ ಅರ್ಜುನ ಸೇರಿದಂತೆ ಪಕ್ಷದ ಹಲವು ಹಿರಿಯ ಪದಾಧಿಕಾರಿಗಳು ನವೆಂಬರ್ 24ರಂದು ಸಿಬಿಐ ವಿಚಾರಣೆಗೆ ಹಾಜರಾಗಿದ್ದರು.</p><p>ಚೆನ್ನೈನಲ್ಲಿರುವ ಟಿವಿಕೆ ಕೇಂದ್ರ ಕಚೇರಿಗೂ ಸಿಬಿಐ ಅಧಿಕಾರಿಗಳು ಇತ್ತೀಚೆಗೆ ಭೇಟಿ ನೀಡಿ ಕೆಲವು ದಾಖಲೆ ಹಾಗೂ ವಿಜಯ್ ಅವರು ರ್ಯಾಲಿ ದಿನದಂದು ಸಂಚರಿಸಿದ ಬಸ್ನ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಿದ್ದರು.</p><p>ನಟ ವಿಜಯ್ ಅವರು ಮತ್ತೆ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಂತೆಯೇ ಈ ಬೆಳವಣಿಗೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಕರೂರು ಕಾಲ್ತುಳಿತ ಪ್ರಕರಣದ ತನಿಖೆಯ ಭಾಗವಾಗಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ನಟ ವಿಜಯ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ನೋಟಿಸ್ ನೀಡಿದೆ ಎಂದು ವರದಿಯಾಗಿದೆ.</p><p>2025ರ ಸೆ.27ರಂದು ಕರೂರಿನಲ್ಲಿ ನಡೆದ ಟಿವಿಕೆ ಪಕ್ಷದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನ ಮೃತಪಟ್ಟಿದ್ದರು. ಈ ಘಟನೆ ರಾಜಕೀಯ ಕೋಲಾಹಲಕ್ಕೆ ಕಾರಣವಾದ ಬಳಿಕ ತಮಿಳುನಾಡು ಪೊಲೀಸರು ಕೈಗೆತ್ತಿಕೊಂಡಿದ್ದ ತನಿಖೆಯನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ಹಸ್ತಾಂತರಿಸಿತ್ತು. </p><p>ಪ್ರಕರಣ ಸಂಬಂಧ ಟಿವಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್. ಆನಂದ್, ಪಕ್ಷದ ಕಾರ್ಯತಂತ್ರ ಪ್ರಧಾನ ಕಾರ್ಯದರ್ಶಿ ಆಧಾವ್ ಅರ್ಜುನ ಸೇರಿದಂತೆ ಪಕ್ಷದ ಹಲವು ಹಿರಿಯ ಪದಾಧಿಕಾರಿಗಳು ನವೆಂಬರ್ 24ರಂದು ಸಿಬಿಐ ವಿಚಾರಣೆಗೆ ಹಾಜರಾಗಿದ್ದರು.</p><p>ಚೆನ್ನೈನಲ್ಲಿರುವ ಟಿವಿಕೆ ಕೇಂದ್ರ ಕಚೇರಿಗೂ ಸಿಬಿಐ ಅಧಿಕಾರಿಗಳು ಇತ್ತೀಚೆಗೆ ಭೇಟಿ ನೀಡಿ ಕೆಲವು ದಾಖಲೆ ಹಾಗೂ ವಿಜಯ್ ಅವರು ರ್ಯಾಲಿ ದಿನದಂದು ಸಂಚರಿಸಿದ ಬಸ್ನ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಿದ್ದರು.</p><p>ನಟ ವಿಜಯ್ ಅವರು ಮತ್ತೆ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಂತೆಯೇ ಈ ಬೆಳವಣಿಗೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>