<p><strong>ಚೆನ್ನೈ:</strong> ಕರೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಂಗ ನಿಂದನೆ ಪೋಸ್ಟ್ ಮಾಡಿದ ಆರೋಪದ ಮೇಲೆ ರಾಜಕೀಯ ಕಾರ್ಯಕರ್ತ ಹಾಗೂ ವಕೀಲ ಆರ್. ವರದರಾಜನ್ ಎನ್ನುವವರನ್ನು ಸೈಬರ್ ಕ್ರೈಂ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ವರದರಾಜನ್ ಅವರು ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದು, ನೇತಾಜಿ ಮಕ್ಕಳ್ ಕಚ್ಚಿ ಸಂಘಟನೆಯ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. </p><p>ಕರೂರು ಕಾಲ್ತುಳಿತ ಪ್ರಕರಣದ ಕುರಿತು ನ್ಯಾಯಾಂಗ ನಿಂದನೆ ಮಾಡಿದ ಆರೋಪದ ಮೇಲೆ ತಮಿಳಿನ ಪ್ರಸಿದ್ಧ ಯ್ಯೂಟ್ಯೂಬರ್ ಮಾರಿದಾಸ್ ಅವರನ್ನು ಅ.4ರಂದು ಬಂಧಿಸಲಾಗಿತ್ತು. </p><p>ಸೆ.27ರಂದು ನಟ ಮತ್ತು ರಾಜಕಾರಣಿ ವಿಜಯ್ ಅವರ ಕರೂರು ರ್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 41 ಜನರು ಮೃತಪಟ್ಟಿದ್ದರು. 60ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಕರೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಂಗ ನಿಂದನೆ ಪೋಸ್ಟ್ ಮಾಡಿದ ಆರೋಪದ ಮೇಲೆ ರಾಜಕೀಯ ಕಾರ್ಯಕರ್ತ ಹಾಗೂ ವಕೀಲ ಆರ್. ವರದರಾಜನ್ ಎನ್ನುವವರನ್ನು ಸೈಬರ್ ಕ್ರೈಂ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ವರದರಾಜನ್ ಅವರು ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದು, ನೇತಾಜಿ ಮಕ್ಕಳ್ ಕಚ್ಚಿ ಸಂಘಟನೆಯ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. </p><p>ಕರೂರು ಕಾಲ್ತುಳಿತ ಪ್ರಕರಣದ ಕುರಿತು ನ್ಯಾಯಾಂಗ ನಿಂದನೆ ಮಾಡಿದ ಆರೋಪದ ಮೇಲೆ ತಮಿಳಿನ ಪ್ರಸಿದ್ಧ ಯ್ಯೂಟ್ಯೂಬರ್ ಮಾರಿದಾಸ್ ಅವರನ್ನು ಅ.4ರಂದು ಬಂಧಿಸಲಾಗಿತ್ತು. </p><p>ಸೆ.27ರಂದು ನಟ ಮತ್ತು ರಾಜಕಾರಣಿ ವಿಜಯ್ ಅವರ ಕರೂರು ರ್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 41 ಜನರು ಮೃತಪಟ್ಟಿದ್ದರು. 60ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>