<p><strong>ನವದೆಹಲಿ:</strong> ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದ ಬಗ್ಗೆ ತನಿಖೆ ನಡೆಸಲು ಎನ್ಡಿಎ ಮೈತ್ರಿಕೂಟದಿಂದ 8 ಸಂಸದರ ನಿಯೋಗವನ್ನು ರಚಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ.</p><p>ಬಿಜೆಪಿ ಸಾಮಾನ್ಯವಾಗಿ ದುರಂತಗಳು ನಡೆದ ಸಂದರ್ಭದಲ್ಲಿ ತನಿಖೆಗಾಗಿ ತನ್ನದೇ ಪಕ್ಷದ ನಾಯಕರನ್ನು ಕಳುಹಿಸುತ್ತಿತ್ತು. ಆದರೆ, ಈ ಬಾರಿ ತನ್ನ ಮಿತ್ರಪಕ್ಷಗಳಾದ ಶಿವಸೇನಾ, ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸದರನ್ನು ಒಳಗೊಂಡ ಎಂಟು ಸದಸ್ಯರ ಸಮಿತಿಯನ್ನು ರಚಿಸಿದೆ. </p><p>ಈ ನಿಯೋಗದಲ್ಲಿ ಶಿವಸೇನಾ ಸಂಸದ ಶ್ರೀಕಾಂತ್ ಶಿಂದೆ, ಟಿಡಿಪಿ ಸಂಸದ ಮಹೇಶ್ ಕುಮಾರ್ ಸೇರಿದಂತೆ ಬಿಜೆಪಿ ಸಂಸದರಾದ ಹೇಮಾ ಮಾಲಿನಿ, ಅಪರಾಜಿತಾ ಸಾರಂಗಿ, ರೇಖಾ ಶರ್ಮಾ, ಬ್ರಿಜ್ಲಾಲ್, ಅನುರಾಗ್ ಠಾಕೂರ್, ತೇಜಸ್ವಿ ಸೂರ್ಯ ಇದ್ದಾರೆ.</p><p>ಸೆಪ್ಟೆಂಬರ್ 27ರಂದು ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರು ಕರೂರಿನಲ್ಲಿ ನಡೆಸಿದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ದುರಂತದಲ್ಲಿ ಈವರೆಗೆ 41 ಮಂದಿ ಮೃತಪಟ್ಟಿದ್ದಾರೆ.</p>.Karur Stampede | ಕಣ್ಣೀರಿನ ಕತೆ ಹೇಳುತ್ತಿವೆ ಎಲ್ಲೆಂದರಲ್ಲಿ ಬಿದ್ದ ಚಪ್ಪಲಿಗಳು.Karur Stampede | ಮೃತರ ಸಂಖ್ಯೆ 40ಕ್ಕೆ ಏರಿಕೆ: ನ್ಯಾ. ಅರುಣಾ ಸಮಿತಿಯಿಂದ ತನಿಖೆ.Karur Stampede: ಸಿಬಿಐ ತನಿಖೆ ಕೋರಿ ಮದ್ರಾಸ್ ಹೈಕೋರ್ಟ್ಗೆ ಟಿವಿಕೆ.ಕರೂರು ಕಾಲ್ತುಳಿತ ದುರಂತದ ಬಗ್ಗೆ ವದಂತಿ ಹರಡಬೇಡಿ: ತಮಿಳುನಾಡು ಸಿಎಂ ಸ್ಟಾಲಿನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದ ಬಗ್ಗೆ ತನಿಖೆ ನಡೆಸಲು ಎನ್ಡಿಎ ಮೈತ್ರಿಕೂಟದಿಂದ 8 ಸಂಸದರ ನಿಯೋಗವನ್ನು ರಚಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ.</p><p>ಬಿಜೆಪಿ ಸಾಮಾನ್ಯವಾಗಿ ದುರಂತಗಳು ನಡೆದ ಸಂದರ್ಭದಲ್ಲಿ ತನಿಖೆಗಾಗಿ ತನ್ನದೇ ಪಕ್ಷದ ನಾಯಕರನ್ನು ಕಳುಹಿಸುತ್ತಿತ್ತು. ಆದರೆ, ಈ ಬಾರಿ ತನ್ನ ಮಿತ್ರಪಕ್ಷಗಳಾದ ಶಿವಸೇನಾ, ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸದರನ್ನು ಒಳಗೊಂಡ ಎಂಟು ಸದಸ್ಯರ ಸಮಿತಿಯನ್ನು ರಚಿಸಿದೆ. </p><p>ಈ ನಿಯೋಗದಲ್ಲಿ ಶಿವಸೇನಾ ಸಂಸದ ಶ್ರೀಕಾಂತ್ ಶಿಂದೆ, ಟಿಡಿಪಿ ಸಂಸದ ಮಹೇಶ್ ಕುಮಾರ್ ಸೇರಿದಂತೆ ಬಿಜೆಪಿ ಸಂಸದರಾದ ಹೇಮಾ ಮಾಲಿನಿ, ಅಪರಾಜಿತಾ ಸಾರಂಗಿ, ರೇಖಾ ಶರ್ಮಾ, ಬ್ರಿಜ್ಲಾಲ್, ಅನುರಾಗ್ ಠಾಕೂರ್, ತೇಜಸ್ವಿ ಸೂರ್ಯ ಇದ್ದಾರೆ.</p><p>ಸೆಪ್ಟೆಂಬರ್ 27ರಂದು ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರು ಕರೂರಿನಲ್ಲಿ ನಡೆಸಿದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ದುರಂತದಲ್ಲಿ ಈವರೆಗೆ 41 ಮಂದಿ ಮೃತಪಟ್ಟಿದ್ದಾರೆ.</p>.Karur Stampede | ಕಣ್ಣೀರಿನ ಕತೆ ಹೇಳುತ್ತಿವೆ ಎಲ್ಲೆಂದರಲ್ಲಿ ಬಿದ್ದ ಚಪ್ಪಲಿಗಳು.Karur Stampede | ಮೃತರ ಸಂಖ್ಯೆ 40ಕ್ಕೆ ಏರಿಕೆ: ನ್ಯಾ. ಅರುಣಾ ಸಮಿತಿಯಿಂದ ತನಿಖೆ.Karur Stampede: ಸಿಬಿಐ ತನಿಖೆ ಕೋರಿ ಮದ್ರಾಸ್ ಹೈಕೋರ್ಟ್ಗೆ ಟಿವಿಕೆ.ಕರೂರು ಕಾಲ್ತುಳಿತ ದುರಂತದ ಬಗ್ಗೆ ವದಂತಿ ಹರಡಬೇಡಿ: ತಮಿಳುನಾಡು ಸಿಎಂ ಸ್ಟಾಲಿನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>