<p><strong>ನವದೆಹಲಿ:</strong> ಕರೂರು ಕಾಲ್ತುಳಿತದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸುವ ಮದ್ರಾಸ್ ಹೈಕೋರ್ಟ್ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಸಲ್ಲಿಸಿದ ಮೇಲ್ಮನವಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ಕಾಯ್ದಿರಿಸಿದೆ. </p><p>ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಕಕ್ಷಿದಾರರು, ಸಂತ್ರಸ್ತರು, ತಮಿಳುನಾಡು ಸರ್ಕಾರ ಮತ್ತು ಇತರರ ಪರ ಇದ್ದ ವಕೀಲರ ವಾದಗಳನ್ನು ಆಲಿಸಿತು. </p><p>ಕರೂರು ಕಾಲ್ತುಳಿತದ ಕುರಿತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ನಟ ವಿಜಯ್ ಅವರ ಟಿವಿಕೆ ಪಕ್ಷವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಮಂಗಳವಾರದಂದು ಅರ್ಜಿಯನ್ನು ಪರಿಗಣಿಸಿದ್ದ ಸುಪ್ರೀಂ ಕೋರ್ಟ್ ಇಂದು (ಅ.10) ವಿಚಾರಣೆ ನಡೆಸಲು ಸಮ್ಮತಿ ಸೂಚಿಸಿತ್ತು. </p><p>ರ್ಯಾಲಿ ಸ್ಥಳದಲ್ಲಿ ತೊಂದರೆ ಸೃಷ್ಟಿಸಲು ಕೆಲವು ದುಷ್ಕರ್ಮಿಗಳು ಪೂರ್ವಯೋಜಿತ ಪಿತೂರಿ ನಡೆಸಿರುವುದು ಕಾಲ್ತುಳಿತಕ್ಕೆ ಕಾರಣ ಎಂಬುದನ್ನು ತಳ್ಳಿಹಾಕುವಂತಿಲ್ಲ ಎಂದು ಟಿವಿಕೆ ಪಕ್ಷವು ವಾದಿಸಿದೆ. </p><p>ಸೆಪ್ಟೆಂಬರ್ 27ರಂದು ವಿಜಯ್ ನಡೆಸಿದ್ದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.</p>.ಕರೂರು ಕಾಲ್ತುಳಿತ: ಎಸ್ಐಟಿ ರಚನೆ ಪ್ರಶ್ನಿಸಿ ಟಿವಿಕೆ ಪಕ್ಷ ಸುಪ್ರೀಂ ಕೋರ್ಟ್ಗೆ.ಕರೂರು ಕಾಲ್ತುಳಿತ ದುರಂತ: TVK ಇಬ್ಬರು ಕಾರ್ಯದರ್ಶಿಗಳಿಗೆ 14 ದಿನ ನ್ಯಾಯಾಂಗ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರೂರು ಕಾಲ್ತುಳಿತದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸುವ ಮದ್ರಾಸ್ ಹೈಕೋರ್ಟ್ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಸಲ್ಲಿಸಿದ ಮೇಲ್ಮನವಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ಕಾಯ್ದಿರಿಸಿದೆ. </p><p>ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಕಕ್ಷಿದಾರರು, ಸಂತ್ರಸ್ತರು, ತಮಿಳುನಾಡು ಸರ್ಕಾರ ಮತ್ತು ಇತರರ ಪರ ಇದ್ದ ವಕೀಲರ ವಾದಗಳನ್ನು ಆಲಿಸಿತು. </p><p>ಕರೂರು ಕಾಲ್ತುಳಿತದ ಕುರಿತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ನಟ ವಿಜಯ್ ಅವರ ಟಿವಿಕೆ ಪಕ್ಷವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಮಂಗಳವಾರದಂದು ಅರ್ಜಿಯನ್ನು ಪರಿಗಣಿಸಿದ್ದ ಸುಪ್ರೀಂ ಕೋರ್ಟ್ ಇಂದು (ಅ.10) ವಿಚಾರಣೆ ನಡೆಸಲು ಸಮ್ಮತಿ ಸೂಚಿಸಿತ್ತು. </p><p>ರ್ಯಾಲಿ ಸ್ಥಳದಲ್ಲಿ ತೊಂದರೆ ಸೃಷ್ಟಿಸಲು ಕೆಲವು ದುಷ್ಕರ್ಮಿಗಳು ಪೂರ್ವಯೋಜಿತ ಪಿತೂರಿ ನಡೆಸಿರುವುದು ಕಾಲ್ತುಳಿತಕ್ಕೆ ಕಾರಣ ಎಂಬುದನ್ನು ತಳ್ಳಿಹಾಕುವಂತಿಲ್ಲ ಎಂದು ಟಿವಿಕೆ ಪಕ್ಷವು ವಾದಿಸಿದೆ. </p><p>ಸೆಪ್ಟೆಂಬರ್ 27ರಂದು ವಿಜಯ್ ನಡೆಸಿದ್ದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.</p>.ಕರೂರು ಕಾಲ್ತುಳಿತ: ಎಸ್ಐಟಿ ರಚನೆ ಪ್ರಶ್ನಿಸಿ ಟಿವಿಕೆ ಪಕ್ಷ ಸುಪ್ರೀಂ ಕೋರ್ಟ್ಗೆ.ಕರೂರು ಕಾಲ್ತುಳಿತ ದುರಂತ: TVK ಇಬ್ಬರು ಕಾರ್ಯದರ್ಶಿಗಳಿಗೆ 14 ದಿನ ನ್ಯಾಯಾಂಗ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>