<p><strong>ಚೆನ್ನೈ</strong>: ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರವನ್ನು ಪಕ್ಷದ ಮುಖ್ಯಸ್ಥ, ನಟ ವಿಜಯ್ ಭಾನುವಾರ ಘೋಷಿಸಿದ್ದಾರೆ.</p><p>‘ನಿನ್ನೆ ಕರೂರಿನಲ್ಲಿ ನಡೆದ ಘಟನೆಯ ಬಗ್ಗೆ ಯೋಚಿಸುವಾಗ ತುಂಬಾ ನೋವಾಗುತ್ತದೆ. ಯಾರು ಎಷ್ಟೇ ಸಾಂತ್ವನದ ಮಾತುಗಳನ್ನು ಆಡಿದರೂ ನಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ದುಃಖವನ್ನು ಮರೆಮಾಚಲು ಸಾಧ್ಯವಿಲ್ಲ. ಇದು ನಿಜಕ್ಕೂ ತುಂಬಲಾರದ ನಷ್ಟ’ ಎಂದು ವಿಜಯ್ ತಮ್ಮ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.</p><p>‘ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹20 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹2 ಲಕ್ಷ ಕೊಡಲು ನಾವು ಇಚ್ಛಿಸಿದ್ದೇವೆ. ಕುಟುಂಬ ಸದಸ್ಯನನ್ನು ಕಳೆದುಕೊಂಡ ನೋವಿನ ಎದುರು ಈ ಮೊತ್ತ ಏನು ಅಲ್ಲ ಎಂಬುದು ತಿಳಿದಿದೆ. ಆದರೂ, ಈ ಸಂದರ್ಭದಲ್ಲಿ ನಿಮ್ಮ ಕುಟುಂಬದ ಸದಸ್ಯನಾಗಿ ನಿಮ್ಮೊಂದಿಗೆ ನಿಲ್ಲುವುದು ನನ್ನ ಕರ್ತವ್ಯವಾಗಿದೆ’ ಎಂದಿದ್ದಾರೆ.</p>.<p>‘ಕಾಲ್ತುಳಿತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಶೀಘ್ರ ಗುಣಮುಖರಾಗಿ ಮನೆಗೆ ಮರಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.</p><p>ಶನಿವಾರ ಕರೂರಿನಲ್ಲಿ ನಡೆದ ರ್ಯಾಲಿ ವೇಳೆ ನಡೆದ ಕಾಲ್ತುಳಿತದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ 16 ಮಹಿಳೆಯರು, 8 ಮಕ್ಕಳಿದ್ದಾರೆ.</p><p>ಘಟನೆಗೆ ನಿಖರ ಕಾರಣವೆನೆಂಬುವುದು ಇನ್ನಷ್ಟೆ ತಿಳಿದುಬರಬೇಕಿದೆ.</p><p><strong>ಸರ್ಕಾರದಿಂದ ₹10 ಲಕ್ಷ ಪರಿಹಾರ:</strong></p><p>ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಲಾ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ ₹1 ಲಕ್ಷ ನೀಡುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರವನ್ನು ಪಕ್ಷದ ಮುಖ್ಯಸ್ಥ, ನಟ ವಿಜಯ್ ಭಾನುವಾರ ಘೋಷಿಸಿದ್ದಾರೆ.</p><p>‘ನಿನ್ನೆ ಕರೂರಿನಲ್ಲಿ ನಡೆದ ಘಟನೆಯ ಬಗ್ಗೆ ಯೋಚಿಸುವಾಗ ತುಂಬಾ ನೋವಾಗುತ್ತದೆ. ಯಾರು ಎಷ್ಟೇ ಸಾಂತ್ವನದ ಮಾತುಗಳನ್ನು ಆಡಿದರೂ ನಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ದುಃಖವನ್ನು ಮರೆಮಾಚಲು ಸಾಧ್ಯವಿಲ್ಲ. ಇದು ನಿಜಕ್ಕೂ ತುಂಬಲಾರದ ನಷ್ಟ’ ಎಂದು ವಿಜಯ್ ತಮ್ಮ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.</p><p>‘ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹20 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹2 ಲಕ್ಷ ಕೊಡಲು ನಾವು ಇಚ್ಛಿಸಿದ್ದೇವೆ. ಕುಟುಂಬ ಸದಸ್ಯನನ್ನು ಕಳೆದುಕೊಂಡ ನೋವಿನ ಎದುರು ಈ ಮೊತ್ತ ಏನು ಅಲ್ಲ ಎಂಬುದು ತಿಳಿದಿದೆ. ಆದರೂ, ಈ ಸಂದರ್ಭದಲ್ಲಿ ನಿಮ್ಮ ಕುಟುಂಬದ ಸದಸ್ಯನಾಗಿ ನಿಮ್ಮೊಂದಿಗೆ ನಿಲ್ಲುವುದು ನನ್ನ ಕರ್ತವ್ಯವಾಗಿದೆ’ ಎಂದಿದ್ದಾರೆ.</p>.<p>‘ಕಾಲ್ತುಳಿತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಶೀಘ್ರ ಗುಣಮುಖರಾಗಿ ಮನೆಗೆ ಮರಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.</p><p>ಶನಿವಾರ ಕರೂರಿನಲ್ಲಿ ನಡೆದ ರ್ಯಾಲಿ ವೇಳೆ ನಡೆದ ಕಾಲ್ತುಳಿತದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ 16 ಮಹಿಳೆಯರು, 8 ಮಕ್ಕಳಿದ್ದಾರೆ.</p><p>ಘಟನೆಗೆ ನಿಖರ ಕಾರಣವೆನೆಂಬುವುದು ಇನ್ನಷ್ಟೆ ತಿಳಿದುಬರಬೇಕಿದೆ.</p><p><strong>ಸರ್ಕಾರದಿಂದ ₹10 ಲಕ್ಷ ಪರಿಹಾರ:</strong></p><p>ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಲಾ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ ₹1 ಲಕ್ಷ ನೀಡುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>