<p><strong>ತಿರುವನಂತಪುರ</strong>: ರಾಷ್ಟ್ರೀಯ ವೈದ್ಯಕೀಯ ಆಯೋಗವು(ಎನ್ಎಂಸಿ) ಕಾಸರಗೋಡು ಮತ್ತು ವಯನಾಡ್ ಜಿಲ್ಲೆಗಳಿಗೆ ತಲಾ 50 ಎಂಬಿಬಿಎಸ್ ಸೀಟುಗಳನ್ನು ಮಂಜೂರುಗೊಳಿಸಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಹಿಂದುಳಿದಿರುವ ಉಭಯ ಜಿಲ್ಲೆಗಳ ಜನರಲ್ಲಿ ಹೊಸ ಭರವಸೆ ಮೂಡಿದೆ.</p>.<p>‘ವಯನಾಡ್ನಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಕನಸು ನಿಜವಾಗುತ್ತಿರುವುದು ಖುಷಿ ನೀಡಿದೆ. ಲಕ್ಷಾಂತರ ಜನರ ಬೇಡಿಕೆ ಹಾಗೂ ರಾಹುಲ್ ಗಾಂಧಿ ಮತ್ತು ನಮ್ಮ ಪ್ರಯತ್ನ ಇಂದು ಫಲ ನೀಡಿದೆ’ ಎಂದು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಹೇಳಿದ್ದಾರೆ.</p>.<p class="title">ವೈದ್ಯಕೀಯ ಕಾಲೇಜು ಶೀಘ್ರದಲ್ಲಿ ಕಾರ್ಯಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇರಳ ಸರ್ಕಾರವನ್ನು ಪ್ರಿಯಾಂಕಾ ಒತ್ತಾಯಿಸಿದ್ದಾರೆ.</p>.<p class="title">‘ಎನ್ಎಂಸಿ ನಿರ್ಧಾರ ಸ್ವಾಗತಾರ್ಹವಾದದ್ದು. ಆದರೆ ಜಿಲ್ಲೆಯಲ್ಲಿ ಜನರಿಗೆ ಸೂಕ್ತ ಚಿಕಿತ್ಸೆಗಳನ್ನು ನೀಡಲು ಬೇಕಾದ ಮೂಲಸೌಕರ್ಯಗಳ ಕೊರತೆಯಿದೆ’ ಎಂದು ವಯನಾಡ್ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಂಶದ್ ಮರಕ್ಕರ್ ಅವರು ಹೇಳಿದ್ದಾರೆ.</p>.<p class="title">‘ಎಂಬಿಬಿಎಸ್ ಸೀಟುಗಳನ್ನು ಮೀಸಲಿಟ್ಟಿರುವುದರಿಂದ, ಕಾಸರಗೋಡಿನಲ್ಲಿ ತಜ್ಞವೈದ್ಯರ ಸಂಖ್ಯೆ ಹೆಚ್ಚಾಗಬಹುದು. ಇದರೊಂದಿಗೆ ಸರ್ಕಾರ ಮೂಲಸೌಕರ್ಯಗಳನ್ನು ಒದಗಿಸಬೇಕು’ ಎಂದು ಎಂಡೋಸಲ್ಫಾನ್ ಸಂತ್ರಸ್ತರ ಸಮಿತಿಯ ನಾಯಕ ಅಂಬಲತಾರಾ ಕುನ್ಹಿಕೃಷ್ಣನ್ ಆಗ್ರಹಿಸಿದ್ದಾರೆ.</p>.<p class="title">ತಜ್ಞವೈದ್ಯರ ಕೊರತೆಯಿಂದಾಗಿ ಕಾಸರಗೋಡಿನಲ್ಲಿರುವ ಎಂಡೋಸಲ್ಫಾನ್ ಪೀಡಿತರು ಸೇರಿದಂತೆ ಬಹುತೇಕರು ವೈದ್ಯಕೀಯ ಸೇವೆಗಳಿಗಾಗಿ ಮಂಗಳೂರಿಗೆ ತೆರಳಬೇಕಾದ ಅನಿವಾರ್ಯ ಇದೆ. ಅದೇ ರೀತಿ ವನ್ಯಜೀವಿ ಸಂಘರ್ಷ ಮತ್ತು ಪ್ರಾಕೃತಿಕ ವಿಕೋಪಗಳಿಗೆ ಪದೇ ಪದೇ ತುತ್ತಾಗುತ್ತಿರುವ ವಯನಾಡ್ನಲ್ಲಿಯೂ ವೈದ್ಯಕೀಯ ಮೂಲಸೌಕರ್ಯಗಳ ಕೊರತೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ರಾಷ್ಟ್ರೀಯ ವೈದ್ಯಕೀಯ ಆಯೋಗವು(ಎನ್ಎಂಸಿ) ಕಾಸರಗೋಡು ಮತ್ತು ವಯನಾಡ್ ಜಿಲ್ಲೆಗಳಿಗೆ ತಲಾ 50 ಎಂಬಿಬಿಎಸ್ ಸೀಟುಗಳನ್ನು ಮಂಜೂರುಗೊಳಿಸಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಹಿಂದುಳಿದಿರುವ ಉಭಯ ಜಿಲ್ಲೆಗಳ ಜನರಲ್ಲಿ ಹೊಸ ಭರವಸೆ ಮೂಡಿದೆ.</p>.<p>‘ವಯನಾಡ್ನಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಕನಸು ನಿಜವಾಗುತ್ತಿರುವುದು ಖುಷಿ ನೀಡಿದೆ. ಲಕ್ಷಾಂತರ ಜನರ ಬೇಡಿಕೆ ಹಾಗೂ ರಾಹುಲ್ ಗಾಂಧಿ ಮತ್ತು ನಮ್ಮ ಪ್ರಯತ್ನ ಇಂದು ಫಲ ನೀಡಿದೆ’ ಎಂದು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಹೇಳಿದ್ದಾರೆ.</p>.<p class="title">ವೈದ್ಯಕೀಯ ಕಾಲೇಜು ಶೀಘ್ರದಲ್ಲಿ ಕಾರ್ಯಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇರಳ ಸರ್ಕಾರವನ್ನು ಪ್ರಿಯಾಂಕಾ ಒತ್ತಾಯಿಸಿದ್ದಾರೆ.</p>.<p class="title">‘ಎನ್ಎಂಸಿ ನಿರ್ಧಾರ ಸ್ವಾಗತಾರ್ಹವಾದದ್ದು. ಆದರೆ ಜಿಲ್ಲೆಯಲ್ಲಿ ಜನರಿಗೆ ಸೂಕ್ತ ಚಿಕಿತ್ಸೆಗಳನ್ನು ನೀಡಲು ಬೇಕಾದ ಮೂಲಸೌಕರ್ಯಗಳ ಕೊರತೆಯಿದೆ’ ಎಂದು ವಯನಾಡ್ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಂಶದ್ ಮರಕ್ಕರ್ ಅವರು ಹೇಳಿದ್ದಾರೆ.</p>.<p class="title">‘ಎಂಬಿಬಿಎಸ್ ಸೀಟುಗಳನ್ನು ಮೀಸಲಿಟ್ಟಿರುವುದರಿಂದ, ಕಾಸರಗೋಡಿನಲ್ಲಿ ತಜ್ಞವೈದ್ಯರ ಸಂಖ್ಯೆ ಹೆಚ್ಚಾಗಬಹುದು. ಇದರೊಂದಿಗೆ ಸರ್ಕಾರ ಮೂಲಸೌಕರ್ಯಗಳನ್ನು ಒದಗಿಸಬೇಕು’ ಎಂದು ಎಂಡೋಸಲ್ಫಾನ್ ಸಂತ್ರಸ್ತರ ಸಮಿತಿಯ ನಾಯಕ ಅಂಬಲತಾರಾ ಕುನ್ಹಿಕೃಷ್ಣನ್ ಆಗ್ರಹಿಸಿದ್ದಾರೆ.</p>.<p class="title">ತಜ್ಞವೈದ್ಯರ ಕೊರತೆಯಿಂದಾಗಿ ಕಾಸರಗೋಡಿನಲ್ಲಿರುವ ಎಂಡೋಸಲ್ಫಾನ್ ಪೀಡಿತರು ಸೇರಿದಂತೆ ಬಹುತೇಕರು ವೈದ್ಯಕೀಯ ಸೇವೆಗಳಿಗಾಗಿ ಮಂಗಳೂರಿಗೆ ತೆರಳಬೇಕಾದ ಅನಿವಾರ್ಯ ಇದೆ. ಅದೇ ರೀತಿ ವನ್ಯಜೀವಿ ಸಂಘರ್ಷ ಮತ್ತು ಪ್ರಾಕೃತಿಕ ವಿಕೋಪಗಳಿಗೆ ಪದೇ ಪದೇ ತುತ್ತಾಗುತ್ತಿರುವ ವಯನಾಡ್ನಲ್ಲಿಯೂ ವೈದ್ಯಕೀಯ ಮೂಲಸೌಕರ್ಯಗಳ ಕೊರತೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>