<p><strong>ವಾರಾಣಸಿ:</strong> ಕಾಶಿ ವಿಶ್ವನಾಥ ದೇಗುಲದಲ್ಲಿ ಸುಗಮವಾಗಿ ಪೂಜೆ, ದರ್ಶನ ವ್ಯವಸ್ಥೆ ಮಾಡಿಸುತ್ತೇವೆಂದು ಅರ್ಚಕರ ಸೋಗಿನಲ್ಲಿ ಭಕ್ತರಿಂದ ಸುಲಿಗೆ ಮಾಡುತ್ತಿದ್ದ 21 ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p><p>ದೇಗುಲದ ಆವರಣದಲ್ಲಿ ಹಲವರು ಭಕ್ತರೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಹಾಗೂ ಪೂಜೆ, ದರ್ಶನಕ್ಕೆ ವ್ಯವಸ್ಥೆ ಮಾಡಿಸುತ್ತೇವೆ ಎಂದು ನಂಬಿಸಿ ಭಕ್ತರಿಂದ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಕಳೆದ ಕೆಲವು ದಿನಗಳಿಂದ ದೂರುಗಳು ಬರುತ್ತಿದ್ದವು. ಈ ಹಿನ್ನೆಲೆ ತನಿಖೆಗೆ ದಶಾಶ್ವಮೇಧ ಮತ್ತು ಚೌಕ ಪೊಲೀಸ್ ಠಾಣೆಯ ಪೊಲೀಸರನ್ನೊಳಗೊಂಡ ಜಂಟಿ ತಂಡ ರಚನೆ ಮಾಡಲಾಗಿತ್ತು. ತನಿಖೆ ನಡೆಸಿದ ವೇಳೆ ದಶಾಶ್ವಮೇಧ ಪೊಲೀಸರಿಗೆ 15 ಮಂದಿ ಹಾಗೂ ಚೌಕ ಠಾಣಾ ಪೊಲೀಸರಿಗೆ 6 ಜನ ನಕಲಿ ಅರ್ಚಕರು ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ನ್ಯಾಯಾಂಗ ಪ್ರಕ್ರಿಯೆ ನಡೆಸಲಾಗುತ್ತಿದೆ. ದೇಗುಲದ ಆವರಣದಲ್ಲಿ ನಮ್ಮ ತಂಡ ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಇನ್ನಷ್ಟು ಇರಬಹುದಾದ ನಕಲಿ ಅರ್ಚಕರನ್ನು ಬಂಧಿಸಲಾಗುವುದು ಎಂದು ಸ್ಥಳೀಯ ಎಸಿಪಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ:</strong> ಕಾಶಿ ವಿಶ್ವನಾಥ ದೇಗುಲದಲ್ಲಿ ಸುಗಮವಾಗಿ ಪೂಜೆ, ದರ್ಶನ ವ್ಯವಸ್ಥೆ ಮಾಡಿಸುತ್ತೇವೆಂದು ಅರ್ಚಕರ ಸೋಗಿನಲ್ಲಿ ಭಕ್ತರಿಂದ ಸುಲಿಗೆ ಮಾಡುತ್ತಿದ್ದ 21 ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p><p>ದೇಗುಲದ ಆವರಣದಲ್ಲಿ ಹಲವರು ಭಕ್ತರೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಹಾಗೂ ಪೂಜೆ, ದರ್ಶನಕ್ಕೆ ವ್ಯವಸ್ಥೆ ಮಾಡಿಸುತ್ತೇವೆ ಎಂದು ನಂಬಿಸಿ ಭಕ್ತರಿಂದ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಕಳೆದ ಕೆಲವು ದಿನಗಳಿಂದ ದೂರುಗಳು ಬರುತ್ತಿದ್ದವು. ಈ ಹಿನ್ನೆಲೆ ತನಿಖೆಗೆ ದಶಾಶ್ವಮೇಧ ಮತ್ತು ಚೌಕ ಪೊಲೀಸ್ ಠಾಣೆಯ ಪೊಲೀಸರನ್ನೊಳಗೊಂಡ ಜಂಟಿ ತಂಡ ರಚನೆ ಮಾಡಲಾಗಿತ್ತು. ತನಿಖೆ ನಡೆಸಿದ ವೇಳೆ ದಶಾಶ್ವಮೇಧ ಪೊಲೀಸರಿಗೆ 15 ಮಂದಿ ಹಾಗೂ ಚೌಕ ಠಾಣಾ ಪೊಲೀಸರಿಗೆ 6 ಜನ ನಕಲಿ ಅರ್ಚಕರು ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ನ್ಯಾಯಾಂಗ ಪ್ರಕ್ರಿಯೆ ನಡೆಸಲಾಗುತ್ತಿದೆ. ದೇಗುಲದ ಆವರಣದಲ್ಲಿ ನಮ್ಮ ತಂಡ ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಇನ್ನಷ್ಟು ಇರಬಹುದಾದ ನಕಲಿ ಅರ್ಚಕರನ್ನು ಬಂಧಿಸಲಾಗುವುದು ಎಂದು ಸ್ಥಳೀಯ ಎಸಿಪಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>