<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದುಕೊಂಡಿರುವುದಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ಏಕೈಕ ಶಾಸಕ ಮೆಹ್ರಾಜ್ ಮಲಿಕ್ ತಿಳಿಸಿದ್ದಾರೆ.</p><p>ಮಲಿಕ್ ಅವರು ಬೆಂಬಲ ಹಿಂತೆಗೆದುಕೊಂಡಿರುವುದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಏಕೆಂದರೆ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು ಸ್ಪಷ್ಟ ಬಹುಮತವನ್ನು ಹೊಂದಿದೆ.</p><p>90 ಸ್ಥಾನಗಳ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ 42 ಶಾಸಕರು ಮತ್ತು ಕಾಂಗ್ರೆಸ್ ಆರು ಶಾಸಕರನ್ನು ಹೊಂದಿದೆ. ಜತೆಗೆ ಒಮರ್ ಸರ್ಕಾರಕ್ಕೆ ಐದು ಪಕ್ಷೇತರ ಶಾಸಕರ ಬೆಂಬಲವೂ ಇದೆ.</p><p>‘ದೋಡಾದ ಎಎಪಿ ಶಾಸಕನಾದ ನಾನು, ನ್ಯಾಷನಲ್ ಕಾನ್ಫರೆನ್ಸ್ ನೇತೃತ್ವದ ಮೈತ್ರಿಕೂಟಕ್ಕೆ ನೀಡಿದ್ದ ನನ್ನ ಬೆಂಬಲವನ್ನು ಹಿಂತೆಗೆದುಕೊಳ್ಳುತ್ತಿದ್ದೇನೆ. ಜಮ್ಮು ಮತ್ತು ಕಾಶ್ಮೀರದ ನನ್ನ ಜನರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಜನರ ನಂಬಿಕೆ ಮತ್ತು ಕಲ್ಯಾಣವು ಯಾವಾಗಲೂ ನನ್ನ ಪ್ರಮುಖ ಆದ್ಯತೆಯಾಗಿರುತ್ತದೆ’ ಎಂದು ಮೆಹ್ರಾಜ್ ಮಲಿಕ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>ಕಳೆದ ವರ್ಷದ ನಡೆದ ವಿಧಾನಸಭೆ ಚುನಾವಣೆಯಲ್ಲಿ ದೋಡಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮೆಹ್ರಾಜ್ ಮಲಿಕ್, ಬಿಜೆಪಿಯ ಗಜಯ್ ಸಿಂಗ್ ರಾಣಾ ಅವರನ್ನು 4,538 ಮತಗಳಿಂದ ಸೋಲಿಸುವ ಮೂಲಕ ಗೆಲುವಿನ ನಗೆ ಬೀರಿದ್ದರು. ಜತೆಗೆ, ಜಮ್ಮು-ಕಾಶ್ಮೀರದಲ್ಲಿ ಗೆದ್ದಂತಹ ಎಎಪಿಯ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. </p><p>ಇದೇ ವರ್ಷ ಮಾರ್ಚ್ 21ರಂದು ಮೆಹ್ರಾಜ್ ಮಲಿಕ್ ಅವರನ್ನು ಎಎಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದುಕೊಂಡಿರುವುದಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ಏಕೈಕ ಶಾಸಕ ಮೆಹ್ರಾಜ್ ಮಲಿಕ್ ತಿಳಿಸಿದ್ದಾರೆ.</p><p>ಮಲಿಕ್ ಅವರು ಬೆಂಬಲ ಹಿಂತೆಗೆದುಕೊಂಡಿರುವುದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಏಕೆಂದರೆ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು ಸ್ಪಷ್ಟ ಬಹುಮತವನ್ನು ಹೊಂದಿದೆ.</p><p>90 ಸ್ಥಾನಗಳ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ 42 ಶಾಸಕರು ಮತ್ತು ಕಾಂಗ್ರೆಸ್ ಆರು ಶಾಸಕರನ್ನು ಹೊಂದಿದೆ. ಜತೆಗೆ ಒಮರ್ ಸರ್ಕಾರಕ್ಕೆ ಐದು ಪಕ್ಷೇತರ ಶಾಸಕರ ಬೆಂಬಲವೂ ಇದೆ.</p><p>‘ದೋಡಾದ ಎಎಪಿ ಶಾಸಕನಾದ ನಾನು, ನ್ಯಾಷನಲ್ ಕಾನ್ಫರೆನ್ಸ್ ನೇತೃತ್ವದ ಮೈತ್ರಿಕೂಟಕ್ಕೆ ನೀಡಿದ್ದ ನನ್ನ ಬೆಂಬಲವನ್ನು ಹಿಂತೆಗೆದುಕೊಳ್ಳುತ್ತಿದ್ದೇನೆ. ಜಮ್ಮು ಮತ್ತು ಕಾಶ್ಮೀರದ ನನ್ನ ಜನರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಜನರ ನಂಬಿಕೆ ಮತ್ತು ಕಲ್ಯಾಣವು ಯಾವಾಗಲೂ ನನ್ನ ಪ್ರಮುಖ ಆದ್ಯತೆಯಾಗಿರುತ್ತದೆ’ ಎಂದು ಮೆಹ್ರಾಜ್ ಮಲಿಕ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>ಕಳೆದ ವರ್ಷದ ನಡೆದ ವಿಧಾನಸಭೆ ಚುನಾವಣೆಯಲ್ಲಿ ದೋಡಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮೆಹ್ರಾಜ್ ಮಲಿಕ್, ಬಿಜೆಪಿಯ ಗಜಯ್ ಸಿಂಗ್ ರಾಣಾ ಅವರನ್ನು 4,538 ಮತಗಳಿಂದ ಸೋಲಿಸುವ ಮೂಲಕ ಗೆಲುವಿನ ನಗೆ ಬೀರಿದ್ದರು. ಜತೆಗೆ, ಜಮ್ಮು-ಕಾಶ್ಮೀರದಲ್ಲಿ ಗೆದ್ದಂತಹ ಎಎಪಿಯ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. </p><p>ಇದೇ ವರ್ಷ ಮಾರ್ಚ್ 21ರಂದು ಮೆಹ್ರಾಜ್ ಮಲಿಕ್ ಅವರನ್ನು ಎಎಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>