<p><strong>ಶ್ರೀನಗರ:</strong> ಮಳೆಯಿಂದಾಗಿ ಬಂದ್ ಆಗಿರುವ ಹೆದ್ದಾರಿಗಳ ತೆರವಿಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ, ಇದರಿಂದಾಗಿ ₹10 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ ಬೆಳೆ ಹಾಳಾಗುವ ಅಪಾಯದಲ್ಲಿದೆ ಎಂದು ಕಾಶ್ಮೀರದ ಸೇಬು ಬೆಳೆಗಾರರು ಮತ್ತು ವ್ಯಾಪಾರಿಗಳು ಪ್ರತಿಭಟನೆ ಕೈಗೊಂಡಿದ್ದಾರೆ. </p><p>ಬಾರಾಮುಲ್ಲಾ ಮತ್ತು ಕುಪ್ವಾರಾದಲ್ಲಿ ಹಣ್ಣಿನ ಉದ್ಯಮವನ್ನೇ ನೆಚ್ಚಿಕೊಂಡಿರುವ ಹಲವರು ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟಿಸಿದರು.</p><p>ಪ್ರತಿಭಟನೆಯ ಭಾಗವಾಗಿ ಕಣಿವೆಯಾದ್ಯಂತ ಎರಡು ದಿನಗಳ ಕಾಲ ಹಣ್ಣಿನ ಅಂಗಡಿಗಳನ್ನು ಮುಚ್ಚಲಾಗಿದೆ. ಜಮ್ಮು –ಶ್ರೀನಗರದ ರಾಷ್ಟ್ರೀಯ ಹೆದ್ದಾರಿ ಕಳೆದ 4 ವಾರಗಳಿಂದ ಬಂದ್ ಆಗಿದೆ. ಹೀಗಾಗಿ ಸೇಬು ತುಂಬಿದ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಸಬೇಕು ಎಂದು ಕುಲ್ಗಾಮ್ನ ಸೇಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಜಹೂರ್ ಅಹಮದ್ ಹೇಳಿದ್ದಾರೆ.</p><p>‘ತೋಟಗಾರಿಕೆ ಕಾಶ್ಮೀರ ಆರ್ಥಿಕತೆಯ ಬೆನ್ನೆಲುಬಾಗಿದೆ. ಸಾರಿಗೆ ಸಮಸ್ಯೆಯಿಂದಾಗಿ ನಾವು ಕೋಟಿಗಟ್ಟಲೇ ನಷ್ಟ ಅನುಭವಿಸುವಂತಾಗಿದೆ. ಸೇಬು ಬೇಗನೆ ಹಾಳಾಗುವ ಹಣ್ಣು. ಗುಣಮಟ್ಟವನ್ನು ಕಾಪಾಡಿಕೊಳ್ಳಲು ಮತ್ತು ತಕ್ಕ ಬೆಲೆಯನ್ನು ಪಡೆಯಲು ಸಮಯಕ್ಕೆ ಸರಿಯಾಗಿ ಮಾರುಕಟ್ಟೆಗೆ ತಲುಪಿಸುವುದು ಮುಖ್ಯವಾಗಿದೆ’ ಎಂದು ಅಹಮದ್ ಅಳಲು ತೋಡಿಕೊಂಡಿದ್ದಾರೆ.</p><p>ಈ ಮಧ್ಯೆ ಲೆ.ಗವರ್ನರ್ ಮೋನಜ್ ಸಿನ್ಹಾ ಸೋಮವಾರ ಕಾಶ್ಮೀರದಿಂದ ದೆಹಲಿಗೆ ಸೇಬು ಹಣ್ಣುಗಳ ಸಾಗಣೆಗೆ ಕಾರ್ಗೋ ಸರಕು ರೈಲಿನ ವ್ಯವಸ್ಥೆಗೆ ಚಾಲನೆ ನೀಡಿದ್ದು, 23–24 ಟನ್ಗಳಷ್ಟು ಸೇಬು ಹಣ್ಣುಗಳನ್ನು ದಿನನಿತ್ಯ ದೆಹಲಿಗೆ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಮಳೆಯಿಂದಾಗಿ ಬಂದ್ ಆಗಿರುವ ಹೆದ್ದಾರಿಗಳ ತೆರವಿಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ, ಇದರಿಂದಾಗಿ ₹10 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ ಬೆಳೆ ಹಾಳಾಗುವ ಅಪಾಯದಲ್ಲಿದೆ ಎಂದು ಕಾಶ್ಮೀರದ ಸೇಬು ಬೆಳೆಗಾರರು ಮತ್ತು ವ್ಯಾಪಾರಿಗಳು ಪ್ರತಿಭಟನೆ ಕೈಗೊಂಡಿದ್ದಾರೆ. </p><p>ಬಾರಾಮುಲ್ಲಾ ಮತ್ತು ಕುಪ್ವಾರಾದಲ್ಲಿ ಹಣ್ಣಿನ ಉದ್ಯಮವನ್ನೇ ನೆಚ್ಚಿಕೊಂಡಿರುವ ಹಲವರು ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟಿಸಿದರು.</p><p>ಪ್ರತಿಭಟನೆಯ ಭಾಗವಾಗಿ ಕಣಿವೆಯಾದ್ಯಂತ ಎರಡು ದಿನಗಳ ಕಾಲ ಹಣ್ಣಿನ ಅಂಗಡಿಗಳನ್ನು ಮುಚ್ಚಲಾಗಿದೆ. ಜಮ್ಮು –ಶ್ರೀನಗರದ ರಾಷ್ಟ್ರೀಯ ಹೆದ್ದಾರಿ ಕಳೆದ 4 ವಾರಗಳಿಂದ ಬಂದ್ ಆಗಿದೆ. ಹೀಗಾಗಿ ಸೇಬು ತುಂಬಿದ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಸಬೇಕು ಎಂದು ಕುಲ್ಗಾಮ್ನ ಸೇಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಜಹೂರ್ ಅಹಮದ್ ಹೇಳಿದ್ದಾರೆ.</p><p>‘ತೋಟಗಾರಿಕೆ ಕಾಶ್ಮೀರ ಆರ್ಥಿಕತೆಯ ಬೆನ್ನೆಲುಬಾಗಿದೆ. ಸಾರಿಗೆ ಸಮಸ್ಯೆಯಿಂದಾಗಿ ನಾವು ಕೋಟಿಗಟ್ಟಲೇ ನಷ್ಟ ಅನುಭವಿಸುವಂತಾಗಿದೆ. ಸೇಬು ಬೇಗನೆ ಹಾಳಾಗುವ ಹಣ್ಣು. ಗುಣಮಟ್ಟವನ್ನು ಕಾಪಾಡಿಕೊಳ್ಳಲು ಮತ್ತು ತಕ್ಕ ಬೆಲೆಯನ್ನು ಪಡೆಯಲು ಸಮಯಕ್ಕೆ ಸರಿಯಾಗಿ ಮಾರುಕಟ್ಟೆಗೆ ತಲುಪಿಸುವುದು ಮುಖ್ಯವಾಗಿದೆ’ ಎಂದು ಅಹಮದ್ ಅಳಲು ತೋಡಿಕೊಂಡಿದ್ದಾರೆ.</p><p>ಈ ಮಧ್ಯೆ ಲೆ.ಗವರ್ನರ್ ಮೋನಜ್ ಸಿನ್ಹಾ ಸೋಮವಾರ ಕಾಶ್ಮೀರದಿಂದ ದೆಹಲಿಗೆ ಸೇಬು ಹಣ್ಣುಗಳ ಸಾಗಣೆಗೆ ಕಾರ್ಗೋ ಸರಕು ರೈಲಿನ ವ್ಯವಸ್ಥೆಗೆ ಚಾಲನೆ ನೀಡಿದ್ದು, 23–24 ಟನ್ಗಳಷ್ಟು ಸೇಬು ಹಣ್ಣುಗಳನ್ನು ದಿನನಿತ್ಯ ದೆಹಲಿಗೆ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>