<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಪ್ರದೇಶಕ್ಕೆ ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಗುರೆಜ್ ಪ್ರದೇಶದ ಜನರು ಇದುವರೆಗೂ ವಿದ್ಯುತ್ಗಾಗಿ ಡಿಸೇಲ್ ಜನರೇಟರ್ ಬಳಸುತ್ತಿದ್ದರು.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕಾಶ್ಮೀರ ವಿದ್ಯುತ್ ವಿತರಣಾ ನಿಗಮ ನಿಯಮಿತ (ಕೆಪಿಡಿಸಿಎಲ್) ಪೋಸ್ಟ್ ಹಂಚಿಕೊಂಡಿದೆ.</p><p>ಸವಾಲಿನ ಭೂ ಪ್ರದೇಶಲ್ಲಿ ವಿದ್ಯುತ್ಗಾಗಿ ಡಿಸೇಲ್ ಜನರೇಟರ್ಗಳ ಅವಲಂಬಿತವಾಗಿದ್ದ ವಿದ್ಯುತ್ ಸಂಪರ್ಕವನ್ನು ಕಲ್ಪಿಸಿರುವುದು ಒಂದು ಮೈಲುಗಲ್ಲು ಹಾಗೂ ಈ ವಿಷಯವನ್ನು ಹಂಚಿಕೊಳ್ಳಲು ಸಂತೋಷವಾಗಿದೆ ಎಂದು ಹೇಳಿದೆ.</p><p>ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮಾತನಾಡಿ, ವಿದ್ಯುತ್ಗಾಗಿ ತೊಂದರೆ ಎದುರಿಸುತ್ತಿದ್ದ ಗುರೆಜ್ ಪ್ರದೇಶವು ಇಂದು ವಿದ್ಯುತ್ ಸಂಪರ್ಕ ಪಡೆದಿದೆ. ಈ ಮೂಲಕ ವಿವಿಧ ಪಂಚಾಯತ್ಗಳ ಸುಮಾರು 1,500 ಗ್ರಾಹಕರಿಗೆ ಇದರಿಂದ ಪ್ರಯೋಜನವಾಗಲಿದೆ. ಇದೊಂದು ಐತಿಹಾಸಿಕ ಮೈಲುಗಲ್ಲು ಎಂದು ಭಾನುವಾರ ಹೇಳಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಪ್ರದೇಶಕ್ಕೆ ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಗುರೆಜ್ ಪ್ರದೇಶದ ಜನರು ಇದುವರೆಗೂ ವಿದ್ಯುತ್ಗಾಗಿ ಡಿಸೇಲ್ ಜನರೇಟರ್ ಬಳಸುತ್ತಿದ್ದರು.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕಾಶ್ಮೀರ ವಿದ್ಯುತ್ ವಿತರಣಾ ನಿಗಮ ನಿಯಮಿತ (ಕೆಪಿಡಿಸಿಎಲ್) ಪೋಸ್ಟ್ ಹಂಚಿಕೊಂಡಿದೆ.</p><p>ಸವಾಲಿನ ಭೂ ಪ್ರದೇಶಲ್ಲಿ ವಿದ್ಯುತ್ಗಾಗಿ ಡಿಸೇಲ್ ಜನರೇಟರ್ಗಳ ಅವಲಂಬಿತವಾಗಿದ್ದ ವಿದ್ಯುತ್ ಸಂಪರ್ಕವನ್ನು ಕಲ್ಪಿಸಿರುವುದು ಒಂದು ಮೈಲುಗಲ್ಲು ಹಾಗೂ ಈ ವಿಷಯವನ್ನು ಹಂಚಿಕೊಳ್ಳಲು ಸಂತೋಷವಾಗಿದೆ ಎಂದು ಹೇಳಿದೆ.</p><p>ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮಾತನಾಡಿ, ವಿದ್ಯುತ್ಗಾಗಿ ತೊಂದರೆ ಎದುರಿಸುತ್ತಿದ್ದ ಗುರೆಜ್ ಪ್ರದೇಶವು ಇಂದು ವಿದ್ಯುತ್ ಸಂಪರ್ಕ ಪಡೆದಿದೆ. ಈ ಮೂಲಕ ವಿವಿಧ ಪಂಚಾಯತ್ಗಳ ಸುಮಾರು 1,500 ಗ್ರಾಹಕರಿಗೆ ಇದರಿಂದ ಪ್ರಯೋಜನವಾಗಲಿದೆ. ಇದೊಂದು ಐತಿಹಾಸಿಕ ಮೈಲುಗಲ್ಲು ಎಂದು ಭಾನುವಾರ ಹೇಳಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>