<p><strong>ಜಮ್ಮು ಮತ್ತು ಕಾಶ್ಮೀರ:</strong> ಕಣಿವೆ ರಾಜ್ಯ ಕಾಶ್ಮೀರದಲ್ಲಿ ಅಕಾಲಿಕವಾಗಿ ತೀವ್ರ ಬಿಸಿ ಅಲೆ ಬೀಸುತ್ತಿದ್ದು, ತಾಪಮಾನ ಸಾಮಾನ್ಯಕ್ಕಿಂತ ಏರಿಕೆಯಾಗುತ್ತಿದೆ. ಇದು ಸ್ಥಳೀಯರ ಮತ್ತು ಅಧಿಕಾರಿಗಳಿಗೆ ಕಳವಳವನ್ನುಂಟು ಮಾಡಿದೆ.</p><p>ಶ್ರೀನಗರದ ಹವಾಮಾನ ಇಲಾಖೆ, ಕಣಿವೆಯ ಹಲವು ಪ್ರದೇಶಗಳಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಿದ್ದು, ಮುಂದಿನ ಕೆಲವು ದಿನಗಳವರೆಗೂ ತಾಪಮಾನದಲ್ಲಿ ಏರಿಕೆಯಾಗಲಿದೆ ಎಂದು ಹೇಳಿದೆ.</p><p>ತಾಪಮಾನ ಏರಿಕೆಯಿಂದಾಗಿ ಕಣಿವೆ ರಾಜ್ಯದ ಜನರ ನಿತ್ಯ ಜೀವನ ಅಸ್ತವ್ಯಸ್ತಗೊಂಡಿದೆ. ಶಾಲೆಗಳಲ್ಲಿ ಸಮಯ ಬದಲಾವಣೆ ಮಾಡಲಾಗಿದೆ. ನಿರ್ಜಲೀಕರಣದಿಂದ ರಕ್ಷಿಸಿಕೊಳ್ಳಿ, ಮಧ್ಯಾಹ್ನದ ಬಳಿಕ ಬಿಸಿಲಿನಿಂದ ದೂರವಿರಿ ಎಂದು ಹವಾಮಾನ ಇಲಾಖೆ ಸೂಚಿಸಿದೆ.</p><p>ಶ್ರೀನಗರ ಹವಾಮಾನ ಇಲಾಖೆಯ ಅಧಿಕಾರಿ ಫಾರೂಕ್ ಅಹಮದ್ ಭಟ್ ಸುದ್ದಿ ಸಂಸ್ಥೆ ಎಎನ್ಐ ಜತೆ ಮಾತನಾಡಿ, ‘ಕಾಶ್ಮೀರದಲ್ಲಿ ಕೆಲವು ದಿನ ಬಿಸಿಗಾಳಿ ಸ್ಥಿತಿ ಮುಂದುವರಿಯಲಿದೆ. ತಾಪಮಾನ ಸಾಮಾನ್ಯಕ್ಕಿಂತ ಒಂದೆರಡು ಡಿಗ್ರಿ ಹೆಚ್ಚಾಗಲಿದೆ. ಶೀಘ್ರದಲ್ಲೇ ಈ ವಾತಾವರಣ ಬದಲಾಗಲಿದೆ. ಮೇ 28ರ ಬಳಿಕ ತುಂತುರು ಮಳೆಯಾಗುವ ಸಾಧ್ಯತೆಯಿದ್ದು, ಬಿಸಿಗಾಳಿ ಸ್ಥಿತಿ ಒಂದು ವಾರದಲ್ಲಿ ಸರಿಯಾಗಲಿದೆ’ ಎಂದು ಮಾಹಿತಿ ನೀಡಿದ್ದಾರೆ.</p><p>‘ಮೇನಲ್ಲಿ ತಾಪಮಾನ 36 ಡಿಗ್ರಿ ಸೆಲ್ಸಿಯಸ್ಗೆ ತಲುಪಿತ್ತು. ಇದು ಅಸಾಮಾನ್ಯ ಸ್ಥಿತಿಯಾಗಿದೆ. ಪೂರ್ವ ಮುಂಗಾರು ಹಗಲು ಮತ್ತು ರಾತ್ರಿ ತಾಪಮಾನದ ನಡುವೆ ದೊಡ್ಡ ವ್ಯತ್ಯಾಸವನ್ನು ಉಂಟುಮಾಡುತ್ತದೆ. ಶುಷ್ಕ ಹವಾಮಾನ ಮುಂದುವರಿದಾಗ, ಹಗಲಿನ ತಾಪಮಾನವು ತೀವ್ರವಾಗಿ ಏರುತ್ತದೆ, ತಾಪಮಾನ 30-33 ಡಿಗ್ರಿ ಸೆಲ್ಸಿಯಸ್ ದಾಟುತ್ತದೆ, ಇದು ಬಿಸಿಗಾಳಿಗೆ ಕಾರಣವಾಗುತ್ತದೆ ಎಂದೂ ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು ಮತ್ತು ಕಾಶ್ಮೀರ:</strong> ಕಣಿವೆ ರಾಜ್ಯ ಕಾಶ್ಮೀರದಲ್ಲಿ ಅಕಾಲಿಕವಾಗಿ ತೀವ್ರ ಬಿಸಿ ಅಲೆ ಬೀಸುತ್ತಿದ್ದು, ತಾಪಮಾನ ಸಾಮಾನ್ಯಕ್ಕಿಂತ ಏರಿಕೆಯಾಗುತ್ತಿದೆ. ಇದು ಸ್ಥಳೀಯರ ಮತ್ತು ಅಧಿಕಾರಿಗಳಿಗೆ ಕಳವಳವನ್ನುಂಟು ಮಾಡಿದೆ.</p><p>ಶ್ರೀನಗರದ ಹವಾಮಾನ ಇಲಾಖೆ, ಕಣಿವೆಯ ಹಲವು ಪ್ರದೇಶಗಳಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಿದ್ದು, ಮುಂದಿನ ಕೆಲವು ದಿನಗಳವರೆಗೂ ತಾಪಮಾನದಲ್ಲಿ ಏರಿಕೆಯಾಗಲಿದೆ ಎಂದು ಹೇಳಿದೆ.</p><p>ತಾಪಮಾನ ಏರಿಕೆಯಿಂದಾಗಿ ಕಣಿವೆ ರಾಜ್ಯದ ಜನರ ನಿತ್ಯ ಜೀವನ ಅಸ್ತವ್ಯಸ್ತಗೊಂಡಿದೆ. ಶಾಲೆಗಳಲ್ಲಿ ಸಮಯ ಬದಲಾವಣೆ ಮಾಡಲಾಗಿದೆ. ನಿರ್ಜಲೀಕರಣದಿಂದ ರಕ್ಷಿಸಿಕೊಳ್ಳಿ, ಮಧ್ಯಾಹ್ನದ ಬಳಿಕ ಬಿಸಿಲಿನಿಂದ ದೂರವಿರಿ ಎಂದು ಹವಾಮಾನ ಇಲಾಖೆ ಸೂಚಿಸಿದೆ.</p><p>ಶ್ರೀನಗರ ಹವಾಮಾನ ಇಲಾಖೆಯ ಅಧಿಕಾರಿ ಫಾರೂಕ್ ಅಹಮದ್ ಭಟ್ ಸುದ್ದಿ ಸಂಸ್ಥೆ ಎಎನ್ಐ ಜತೆ ಮಾತನಾಡಿ, ‘ಕಾಶ್ಮೀರದಲ್ಲಿ ಕೆಲವು ದಿನ ಬಿಸಿಗಾಳಿ ಸ್ಥಿತಿ ಮುಂದುವರಿಯಲಿದೆ. ತಾಪಮಾನ ಸಾಮಾನ್ಯಕ್ಕಿಂತ ಒಂದೆರಡು ಡಿಗ್ರಿ ಹೆಚ್ಚಾಗಲಿದೆ. ಶೀಘ್ರದಲ್ಲೇ ಈ ವಾತಾವರಣ ಬದಲಾಗಲಿದೆ. ಮೇ 28ರ ಬಳಿಕ ತುಂತುರು ಮಳೆಯಾಗುವ ಸಾಧ್ಯತೆಯಿದ್ದು, ಬಿಸಿಗಾಳಿ ಸ್ಥಿತಿ ಒಂದು ವಾರದಲ್ಲಿ ಸರಿಯಾಗಲಿದೆ’ ಎಂದು ಮಾಹಿತಿ ನೀಡಿದ್ದಾರೆ.</p><p>‘ಮೇನಲ್ಲಿ ತಾಪಮಾನ 36 ಡಿಗ್ರಿ ಸೆಲ್ಸಿಯಸ್ಗೆ ತಲುಪಿತ್ತು. ಇದು ಅಸಾಮಾನ್ಯ ಸ್ಥಿತಿಯಾಗಿದೆ. ಪೂರ್ವ ಮುಂಗಾರು ಹಗಲು ಮತ್ತು ರಾತ್ರಿ ತಾಪಮಾನದ ನಡುವೆ ದೊಡ್ಡ ವ್ಯತ್ಯಾಸವನ್ನು ಉಂಟುಮಾಡುತ್ತದೆ. ಶುಷ್ಕ ಹವಾಮಾನ ಮುಂದುವರಿದಾಗ, ಹಗಲಿನ ತಾಪಮಾನವು ತೀವ್ರವಾಗಿ ಏರುತ್ತದೆ, ತಾಪಮಾನ 30-33 ಡಿಗ್ರಿ ಸೆಲ್ಸಿಯಸ್ ದಾಟುತ್ತದೆ, ಇದು ಬಿಸಿಗಾಳಿಗೆ ಕಾರಣವಾಗುತ್ತದೆ ಎಂದೂ ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>