<p><strong>ನವದೆಹಲಿ:</strong> ‘ಕಾಶ್ಮೀರವು ಭಾರತ ಮತ್ತು ಪಾಕಿಸ್ತಾನದ ನಡುವಣ ವಿವಾದವಾಗಿದ್ದು, ಈ ಕುರಿತು ದ್ವಿಪಕ್ಷೀಯ ಚರ್ಚೆ ಮಾತ್ರ ಸಾಧ್ಯ. ಈ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಭಾರತ ಮಂಗಳವಾರ ಮತ್ತೆ ಪುನರುಚ್ಚರಿಸಿದೆ.</p>.<p>ಕಾಶ್ಮೀರ ವಿವಾದವನ್ನು ಇತ್ಯರ್ಥಪಡಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಭಾರತ ಈ ಮಾತು ಹೇಳಿದೆ.</p>.<p class="title">‘ಕಾಶ್ಮೀರ ವಿವಾದಕ್ಕೆ ಸಂಬಂಧಿಸಿ ಭಾರತ– ಪಾಕಿಸ್ತಾನವೇ ದ್ವೀಪಕ್ಷೀಯ ಚರ್ಚೆ ನಡೆಸಬೇಕು ಎಂಬುದು ಭಾರತದ ದೀರ್ಘ ಕಾಲದ ನಿಲುವು. ಇದರಲ್ಲಿ ಬದಲಾವಣೆ ಇಲ್ಲ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದರು.</p>.<p>ಅಣ್ವಸ್ತ್ರ ಯುದ್ಧ ಕುರಿತ ಟ್ರಂಪ್ ಅವರ ಹೇಳಿಕೆಗೆ ಜೈಸ್ವಾಲ್ ಅವರು, ‘ಪಾಕಿಸ್ತಾನದ ವಿದೇಶಾಂಗ ಸಚಿವರೂ ಕೂಡಾ ಅಣ್ವಸ್ತ್ರ ಯುದ್ಧ ಕುರಿತ ಆಯಾಮವನ್ನು ಅಧಿಕೃತವಾಗಿಯೇ ತಳ್ಳಿಹಾಕಿದ್ದಾರೆ’ ಎಂದು ಪ್ರತಿಕ್ರಿಯಿಸಿದರು. </p>.<p>‘ಅಲ್ಲದೆ, ಅಣ್ವಸ್ತ್ರ ಬೆದರಿಕೆಗೆ ಜಗ್ಗುವುದಿಲ್ಲ ಮತ್ತು ಗಡಿಯಾಚೆಗಿನ ಭಯೋತ್ಪಾದನೆ ಕೃತ್ಯಗಳಿಗೂ ಅವಕಾಶ ನೀಡುವುದಿಲ್ಲ ಎಂಬ ತನ್ನ ನಿಲುವನ್ನು ಈಗಾಗಲೇ ದೃಢವಾಗಿ ಹೇಳಿದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕಾಶ್ಮೀರವು ಭಾರತ ಮತ್ತು ಪಾಕಿಸ್ತಾನದ ನಡುವಣ ವಿವಾದವಾಗಿದ್ದು, ಈ ಕುರಿತು ದ್ವಿಪಕ್ಷೀಯ ಚರ್ಚೆ ಮಾತ್ರ ಸಾಧ್ಯ. ಈ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಭಾರತ ಮಂಗಳವಾರ ಮತ್ತೆ ಪುನರುಚ್ಚರಿಸಿದೆ.</p>.<p>ಕಾಶ್ಮೀರ ವಿವಾದವನ್ನು ಇತ್ಯರ್ಥಪಡಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಭಾರತ ಈ ಮಾತು ಹೇಳಿದೆ.</p>.<p class="title">‘ಕಾಶ್ಮೀರ ವಿವಾದಕ್ಕೆ ಸಂಬಂಧಿಸಿ ಭಾರತ– ಪಾಕಿಸ್ತಾನವೇ ದ್ವೀಪಕ್ಷೀಯ ಚರ್ಚೆ ನಡೆಸಬೇಕು ಎಂಬುದು ಭಾರತದ ದೀರ್ಘ ಕಾಲದ ನಿಲುವು. ಇದರಲ್ಲಿ ಬದಲಾವಣೆ ಇಲ್ಲ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದರು.</p>.<p>ಅಣ್ವಸ್ತ್ರ ಯುದ್ಧ ಕುರಿತ ಟ್ರಂಪ್ ಅವರ ಹೇಳಿಕೆಗೆ ಜೈಸ್ವಾಲ್ ಅವರು, ‘ಪಾಕಿಸ್ತಾನದ ವಿದೇಶಾಂಗ ಸಚಿವರೂ ಕೂಡಾ ಅಣ್ವಸ್ತ್ರ ಯುದ್ಧ ಕುರಿತ ಆಯಾಮವನ್ನು ಅಧಿಕೃತವಾಗಿಯೇ ತಳ್ಳಿಹಾಕಿದ್ದಾರೆ’ ಎಂದು ಪ್ರತಿಕ್ರಿಯಿಸಿದರು. </p>.<p>‘ಅಲ್ಲದೆ, ಅಣ್ವಸ್ತ್ರ ಬೆದರಿಕೆಗೆ ಜಗ್ಗುವುದಿಲ್ಲ ಮತ್ತು ಗಡಿಯಾಚೆಗಿನ ಭಯೋತ್ಪಾದನೆ ಕೃತ್ಯಗಳಿಗೂ ಅವಕಾಶ ನೀಡುವುದಿಲ್ಲ ಎಂಬ ತನ್ನ ನಿಲುವನ್ನು ಈಗಾಗಲೇ ದೃಢವಾಗಿ ಹೇಳಿದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>