<p>ಶ್ರೀನಗರದ ರೈನಾವಾರಿ ಪ್ರದೇಶದಲ್ಲಿ ಬುಧವಾರ ಮುಂಜಾನೆ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಭಯೋತ್ಪಾದಕರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಕೊಲೆಯಾದ ಉಗ್ರರಲ್ಲಿ ಒಬ್ಬನನ್ನು ರಯೀಸ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಅನಂತನಾಗ್ ಮೂಲದ ಆನ್ಲೈನ್ ನ್ಯೂಸ್ ಪೋರ್ಟಲ್ ‘ವ್ಯಾಲಿ ನ್ಯೂಸ್ ಸರ್ವಿಸ್’ನಲ್ಲಿ ಪ್ರಧಾನ ಸಂಪಾದಕನಾಗಿರಯೀಸ್ ಭಟ್ ಕಾರ್ಯನಿರ್ವಹಿಸುತ್ತಿದ್ದನು. ಕಳೆದ ವರ್ಷ ಆಗಸ್ಟ್ನಲ್ಲಿ ಲಷ್ಕರ್-ಎ-ತೈಯ್ಬಾ ಸಂಘಟನೆಗೆ ಸೇರ್ಪಡೆಯಾಗಿದ್ದನೆಂದು ಪೊಲೀಸರು ಹೇಳಿದ್ದಾರೆ.</p>.<p>ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಭಟ್ ವಿರುದ್ಧ ಎರಡು ಎಫ್ಐಆರ್ಗಳು ದಾಖಲಾಗಿವೆ. ಮಾಜಿ ಪತ್ರಕರ್ತರೊಬ್ಬ ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾಗಿರುವುದು ಮಾಧ್ಯಮಗಳ ದುರುಪಯೋಗವನ್ನು ಸೂಚಿಸುತ್ತದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.</p>.<p>ಎನ್ಕೌಂಟರ್ನಲ್ಲಿ ಹತನಾದ ಮತ್ತೊಬ್ಬ ಭಯೋತ್ಪಾದಕನನ್ನು ಬಿಜ್ಬೆಹರಾ ನಿವಾಸಿ ಹಿಲಾಲ್ ಅಹ್ಮದ್ ಎಂದು ಗುರುತಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಗರದ ರೈನಾವಾರಿ ಪ್ರದೇಶದಲ್ಲಿ ಬುಧವಾರ ಮುಂಜಾನೆ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಭಯೋತ್ಪಾದಕರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಕೊಲೆಯಾದ ಉಗ್ರರಲ್ಲಿ ಒಬ್ಬನನ್ನು ರಯೀಸ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಅನಂತನಾಗ್ ಮೂಲದ ಆನ್ಲೈನ್ ನ್ಯೂಸ್ ಪೋರ್ಟಲ್ ‘ವ್ಯಾಲಿ ನ್ಯೂಸ್ ಸರ್ವಿಸ್’ನಲ್ಲಿ ಪ್ರಧಾನ ಸಂಪಾದಕನಾಗಿರಯೀಸ್ ಭಟ್ ಕಾರ್ಯನಿರ್ವಹಿಸುತ್ತಿದ್ದನು. ಕಳೆದ ವರ್ಷ ಆಗಸ್ಟ್ನಲ್ಲಿ ಲಷ್ಕರ್-ಎ-ತೈಯ್ಬಾ ಸಂಘಟನೆಗೆ ಸೇರ್ಪಡೆಯಾಗಿದ್ದನೆಂದು ಪೊಲೀಸರು ಹೇಳಿದ್ದಾರೆ.</p>.<p>ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಭಟ್ ವಿರುದ್ಧ ಎರಡು ಎಫ್ಐಆರ್ಗಳು ದಾಖಲಾಗಿವೆ. ಮಾಜಿ ಪತ್ರಕರ್ತರೊಬ್ಬ ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾಗಿರುವುದು ಮಾಧ್ಯಮಗಳ ದುರುಪಯೋಗವನ್ನು ಸೂಚಿಸುತ್ತದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.</p>.<p>ಎನ್ಕೌಂಟರ್ನಲ್ಲಿ ಹತನಾದ ಮತ್ತೊಬ್ಬ ಭಯೋತ್ಪಾದಕನನ್ನು ಬಿಜ್ಬೆಹರಾ ನಿವಾಸಿ ಹಿಲಾಲ್ ಅಹ್ಮದ್ ಎಂದು ಗುರುತಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>