<p><strong>ಏಕತಾ ನಗರ:</strong> 'ರಾಜಪ್ರಭುತ್ವದ ಸಂಸ್ಥಾನಗಳನ್ನು ಒಟ್ಟುಗೂಡಿಸಿದಂತೆ ಸರ್ದಾರ್ ವಲ್ಲಭಭಾಯಿ ಪಟೇಲ್, ಇಡೀ ಕಾಶ್ಮೀರವನ್ನು ಭಾರತದೊಂದಿಗೆ ಒಗ್ಗೂಡಿಸಲು ಬಯಸಿದ್ದರು. ಆದರೆ ಆಗಿನ ಪ್ರಧಾನಿ ಜವಹರಲಾಲ್ ನೆಹರೂ ಅದಕ್ಕೆ ಅವಕಾಶ ನೀಡಲಿಲ್ಲ' ಎಂದು ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ಆಪಾದಿಸಿದ್ದಾರೆ. </p><p>ಗುಜರಾತ್ನ ಏಕತಾ ನಗರದಲ್ಲಿ 'ಏಕತಾ ಪ್ರತಿಮೆ' ಬಳಿ ನಡೆದ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ಇತಿಹಾಸ ಬರೆಯಲು ಸಮಯವನ್ನು ವ್ಯರ್ಥ ಮಾಡಬಾರದು. ಆದರೆ ಇತಿಹಾಸ ರಚಿಸಲು ನಾವು ಶ್ರಮ ವಹಿಸಬೇಕು ಎಂಬುದರಲ್ಲಿ ಸರ್ದಾರ್ ಪಟೇಲ್ ನಂಬಿಕೆ ಇಟ್ಟಿದ್ದರು' ಎಂದು ಹೇಳಿದ್ದಾರೆ. </p><p>'ಕಾಶ್ಮೀರವನ್ನು ಭಾರತದೊಂದಿಗೆ ಒಗ್ಗೂಡಿಸುವ ಸರ್ದಾರ್ ಅವರ ಬಯಕೆಯನ್ನು ಈಡೇರಲು ನೆಹರೂ ಬಿಡಲಿಲ್ಲ. ಬದಲಾಗಿ ಕಾಶ್ಮೀರವನ್ನು ವಿಭಜಿಸಲಾಯಿತು. ಪ್ರತ್ಯೇಕ ಸಂವಿಧಾನ ಹಾಗೂ ಧ್ವಜವನ್ನು ನೀಡಲಾಯಿತು. ಅಲ್ಲದೆ ಕಾಂಗ್ರೆಸ್ನ ತಪ್ಪಿನಿಂದಾಗಿ ದೇಶವು ದಶಕಗಳ ಕಾಲ ಬಳಲಿತ್ತು' ಎಂದು ಮೋದಿ ಆಪಾದಿಸಿದ್ದಾರೆ. </p><p>ಸರ್ದಾರ್ ಪಟೇಲ್ ರೂಪಿಸಿದ ನೀತಿ, ನಿರ್ಣಯಗಳು ಹೊಸ ಇತಿಹಾಸವನ್ನು ನಿರ್ಮಿಸಿದವು ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ. </p><p>'ಸ್ವಾತಂತ್ರ್ಯದ ನಂತರ 550ಕ್ಕೂ ಹೆಚ್ಚು ರಾಜಪ್ರಭುತ್ವದ ಸಂಸ್ಥಾನಗಳನ್ನು ಒಗ್ಗೂಡಿಸುವುದು ಅಸಾಧ್ಯದ ಕೆಲಸವಾಗಿತ್ತು. ಆದರೆ ಸರ್ದಾರ್ ಪಟೇಲ್ ಅವರಿಂದ ಸಾಧ್ಯವಾಯಿತು. 'ಏಕ ಭಾರತ, ಶ್ರೇಷ್ಠ ಭಾರತ' ಕಲ್ಪನೆಯು ಅವರ ಪಾಲಿಗೆ ಮಹತ್ವದ್ದಾಗಿತ್ತು' ಎಂದು ಹೇಳಿದ್ದಾರೆ. </p>.ಏಕತಾ ದಿನ 2025: ಸರ್ದಾರ್ ಪಟೇಲ್ ದೂರದೃಷ್ಟಿ & ಇಂದಿನ ರಾಷ್ಟ್ರೀಯ ಏಕತೆಯ ಅರ್ಥ.ಒಂದು ಕೋಟಿ ಉದ್ಯೋಗ, ₹ 50 ಲಕ್ಷ ಕೋಟಿ ಹೂಡಿಕೆ: ಬಿಹಾರಕ್ಕೆ NDA ‘ಸಂಕಲ್ಪ ಪತ್ರ’
<p><strong>ಏಕತಾ ನಗರ:</strong> 'ರಾಜಪ್ರಭುತ್ವದ ಸಂಸ್ಥಾನಗಳನ್ನು ಒಟ್ಟುಗೂಡಿಸಿದಂತೆ ಸರ್ದಾರ್ ವಲ್ಲಭಭಾಯಿ ಪಟೇಲ್, ಇಡೀ ಕಾಶ್ಮೀರವನ್ನು ಭಾರತದೊಂದಿಗೆ ಒಗ್ಗೂಡಿಸಲು ಬಯಸಿದ್ದರು. ಆದರೆ ಆಗಿನ ಪ್ರಧಾನಿ ಜವಹರಲಾಲ್ ನೆಹರೂ ಅದಕ್ಕೆ ಅವಕಾಶ ನೀಡಲಿಲ್ಲ' ಎಂದು ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ಆಪಾದಿಸಿದ್ದಾರೆ. </p><p>ಗುಜರಾತ್ನ ಏಕತಾ ನಗರದಲ್ಲಿ 'ಏಕತಾ ಪ್ರತಿಮೆ' ಬಳಿ ನಡೆದ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ಇತಿಹಾಸ ಬರೆಯಲು ಸಮಯವನ್ನು ವ್ಯರ್ಥ ಮಾಡಬಾರದು. ಆದರೆ ಇತಿಹಾಸ ರಚಿಸಲು ನಾವು ಶ್ರಮ ವಹಿಸಬೇಕು ಎಂಬುದರಲ್ಲಿ ಸರ್ದಾರ್ ಪಟೇಲ್ ನಂಬಿಕೆ ಇಟ್ಟಿದ್ದರು' ಎಂದು ಹೇಳಿದ್ದಾರೆ. </p><p>'ಕಾಶ್ಮೀರವನ್ನು ಭಾರತದೊಂದಿಗೆ ಒಗ್ಗೂಡಿಸುವ ಸರ್ದಾರ್ ಅವರ ಬಯಕೆಯನ್ನು ಈಡೇರಲು ನೆಹರೂ ಬಿಡಲಿಲ್ಲ. ಬದಲಾಗಿ ಕಾಶ್ಮೀರವನ್ನು ವಿಭಜಿಸಲಾಯಿತು. ಪ್ರತ್ಯೇಕ ಸಂವಿಧಾನ ಹಾಗೂ ಧ್ವಜವನ್ನು ನೀಡಲಾಯಿತು. ಅಲ್ಲದೆ ಕಾಂಗ್ರೆಸ್ನ ತಪ್ಪಿನಿಂದಾಗಿ ದೇಶವು ದಶಕಗಳ ಕಾಲ ಬಳಲಿತ್ತು' ಎಂದು ಮೋದಿ ಆಪಾದಿಸಿದ್ದಾರೆ. </p><p>ಸರ್ದಾರ್ ಪಟೇಲ್ ರೂಪಿಸಿದ ನೀತಿ, ನಿರ್ಣಯಗಳು ಹೊಸ ಇತಿಹಾಸವನ್ನು ನಿರ್ಮಿಸಿದವು ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ. </p><p>'ಸ್ವಾತಂತ್ರ್ಯದ ನಂತರ 550ಕ್ಕೂ ಹೆಚ್ಚು ರಾಜಪ್ರಭುತ್ವದ ಸಂಸ್ಥಾನಗಳನ್ನು ಒಗ್ಗೂಡಿಸುವುದು ಅಸಾಧ್ಯದ ಕೆಲಸವಾಗಿತ್ತು. ಆದರೆ ಸರ್ದಾರ್ ಪಟೇಲ್ ಅವರಿಂದ ಸಾಧ್ಯವಾಯಿತು. 'ಏಕ ಭಾರತ, ಶ್ರೇಷ್ಠ ಭಾರತ' ಕಲ್ಪನೆಯು ಅವರ ಪಾಲಿಗೆ ಮಹತ್ವದ್ದಾಗಿತ್ತು' ಎಂದು ಹೇಳಿದ್ದಾರೆ. </p>.ಏಕತಾ ದಿನ 2025: ಸರ್ದಾರ್ ಪಟೇಲ್ ದೂರದೃಷ್ಟಿ & ಇಂದಿನ ರಾಷ್ಟ್ರೀಯ ಏಕತೆಯ ಅರ್ಥ.ಒಂದು ಕೋಟಿ ಉದ್ಯೋಗ, ₹ 50 ಲಕ್ಷ ಕೋಟಿ ಹೂಡಿಕೆ: ಬಿಹಾರಕ್ಕೆ NDA ‘ಸಂಕಲ್ಪ ಪತ್ರ’