<p><strong>ಶ್ರೀನಗರ:</strong> ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳನ್ನು ನಡೆಸಲಾಯಿತು.</p><p>ಕಾಶ್ಮೀರದ ಧರ್ಮಗುರು, ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವಾಯಿಜ್ ಉಮರ್ ಫಾರೂಕ್ ಅವರು ಕಾಶ್ಮೀರದಾದ್ಯಂತ ಸೋಮವಾರ ಬಂದ್ಗೆ ಕರೆ ನೀಡಿದ್ದಾರೆ.</p><p>ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ ಮತ್ತು ಮಂಗಳವಾರ ಶಾಲೆ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಲಾಲ್ ಚೌಕ್ ಸೇರಿದಂತೆ ಶ್ರೀನಗರದ ಮಧ್ಯಭಾಗದಲ್ಲಿ ಖಮೇನಿ ಭಾವಚಿತ್ರಗಳನ್ನು ಹಿಡಿದಿದ್ದ ನೂರಾರು ಪ್ರತಿಭಟನಕಾರರು ಕಪ್ಪು ಬಾವುಟಗಳನ್ನು ಬೀಸುತ್ತಾ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.</p><p>ಪ್ರತಿಭಟನೆಯಿಂದಾಗಿ ಅಂಗಡಿ–ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಕೆಲವೆಡೆ ಸಂಚಾರ ದಟ್ಟನೆ ಉಂಟಾಗಿತ್ತು ಎಂದು ವರದಿಯಾಗಿದೆ. ಸುನ್ನಿ ನಾಯಕರು ಮತ್ತು ರಾಜಕಾರಣಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪಿಡಿಪಿ ನಾಯಕ ವಹೀದ್ ಪಾರಾ ಮತ್ತು ಜುಹೈಬ್ ಯೂಸುಫ್ ಮಿರ್ ಅವರು ಲಾಲ್ ಚೌಕ್ನಲ್ಲಿ ಪ್ರತಿಭಟನಕಾರರೊಂದಿಗೆ ಕಾಣಿಸಿಕೊಂಡಿದ್ದರು.</p><p>ಇಸ್ರೇಲ್ನ ಕ್ರಮಗಳಿಗೆ ಅಂತರರಾಷ್ಟ್ರೀಯ ಹೊಣೆಗಾರಿಕೆಯ ಕೊರತೆ ಇದೆ ಎಂದು ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವಾಯಿಜ್ ಉಮರ್ ಫಾರೂಕ್ ಟೀಕಿಸಿದ್ದಾರೆ. ಹಾಗೆಯೇ ಶಾಂತಿಯುತ ಬಂದ್ ಆಚರಿಸಲು ಮತ್ತು ಖಮೇನಿ ಪರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಅವರು ಮನವಿ ಮಾಡಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಇರಾನ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ‘ಇಸ್ರೇಲ್ನ ಮತ್ತೊಂದು ಆಕ್ರಮಣಕಾರಿ ಕೃತ್ಯವನ್ನು ಎದುರಿಸುತ್ತಿರುವ ಇರಾನ್ ಮತ್ತು ಅಲ್ಲಿನ ಜನರಿಗಾಗಿ ನಾನು ಪ್ರಾರ್ಥನೆ ಸಲ್ಲಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.</p><p>ಇರಾನ್ ಅನ್ನು ‘ಮುಸ್ಲಿಂ ಸಮುದಾಯದ ನಿರ್ಣಾಯಕ ಧ್ವನಿ’ ಎಂದು ಬಣ್ಣಿಸಿರುವ ಮುಫ್ತಿ, ಯಾವುದೇ ಕ್ಷಿಪಣಿ ಅಥವಾ ಬೆದರಿಕೆ ಅದರ ಸಾರ್ವಭೌಮತ್ವವನ್ನು ನಂದಿಸಲು ಅಥವಾ ಚೈತನ್ಯವನ್ನು ಮುರಿಯಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.</p><p>ಶ್ರೀನಗರ, ಬುಡ್ಗಾಮ್ ಮತ್ತು ಬಂಡಿಪೋರಾದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವದಂತಿ ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಕಣಿವೆಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಹಗಲಿನಲ್ಲಿ ಸ್ಥಗಿತಗೊಳಿಸಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.</p><p>2019ರಲ್ಲಿ ಜಮ್ಮು–ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನ ರದ್ದುಪಡಿಸಿದ್ದನ್ನು ಖಂಡಿಸಿ ಕಾಶ್ಮೀರದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು.</p>.ಖಮೇನಿ ಹತ್ಯೆ ಖಂಡಿಸಿ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ.ಖಮೇನಿ ಹತ್ಯೆಗೆ ಸೇಡು ತೀರಿಸಿಕೊಳ್ಳುವುದು ಕಾನೂನುಬದ್ಧ ಕರ್ತವ್ಯ: ಇರಾನ್ ಅಧ್ಯಕ್ಷ.ಖಮೇನಿ ಮಗನಿಗಿಲ್ಲ ಸರ್ವೋಚ್ಚ ನಾಯಕನ ಪಟ್ಟ: ಇರಾನ್ ಆಡಳಿತದ ಚುಕ್ಕಾಣಿ ಈತನ ಕೈಗೆ!.ಅಯಾತೊಲ್ಲಾ ಖಮೇನಿ ಇದ್ದ ಜಾಗದ ಮೇಲೆ ಇಸ್ರೇಲ್ ನಡೆಸಿದ ಭೀಕರ ದಾಳಿ ವಿಡಿಯೊ ಬಹಿರಂಗ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳನ್ನು ನಡೆಸಲಾಯಿತು.</p><p>ಕಾಶ್ಮೀರದ ಧರ್ಮಗುರು, ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವಾಯಿಜ್ ಉಮರ್ ಫಾರೂಕ್ ಅವರು ಕಾಶ್ಮೀರದಾದ್ಯಂತ ಸೋಮವಾರ ಬಂದ್ಗೆ ಕರೆ ನೀಡಿದ್ದಾರೆ.</p><p>ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ ಮತ್ತು ಮಂಗಳವಾರ ಶಾಲೆ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಲಾಲ್ ಚೌಕ್ ಸೇರಿದಂತೆ ಶ್ರೀನಗರದ ಮಧ್ಯಭಾಗದಲ್ಲಿ ಖಮೇನಿ ಭಾವಚಿತ್ರಗಳನ್ನು ಹಿಡಿದಿದ್ದ ನೂರಾರು ಪ್ರತಿಭಟನಕಾರರು ಕಪ್ಪು ಬಾವುಟಗಳನ್ನು ಬೀಸುತ್ತಾ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.</p><p>ಪ್ರತಿಭಟನೆಯಿಂದಾಗಿ ಅಂಗಡಿ–ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಕೆಲವೆಡೆ ಸಂಚಾರ ದಟ್ಟನೆ ಉಂಟಾಗಿತ್ತು ಎಂದು ವರದಿಯಾಗಿದೆ. ಸುನ್ನಿ ನಾಯಕರು ಮತ್ತು ರಾಜಕಾರಣಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪಿಡಿಪಿ ನಾಯಕ ವಹೀದ್ ಪಾರಾ ಮತ್ತು ಜುಹೈಬ್ ಯೂಸುಫ್ ಮಿರ್ ಅವರು ಲಾಲ್ ಚೌಕ್ನಲ್ಲಿ ಪ್ರತಿಭಟನಕಾರರೊಂದಿಗೆ ಕಾಣಿಸಿಕೊಂಡಿದ್ದರು.</p><p>ಇಸ್ರೇಲ್ನ ಕ್ರಮಗಳಿಗೆ ಅಂತರರಾಷ್ಟ್ರೀಯ ಹೊಣೆಗಾರಿಕೆಯ ಕೊರತೆ ಇದೆ ಎಂದು ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವಾಯಿಜ್ ಉಮರ್ ಫಾರೂಕ್ ಟೀಕಿಸಿದ್ದಾರೆ. ಹಾಗೆಯೇ ಶಾಂತಿಯುತ ಬಂದ್ ಆಚರಿಸಲು ಮತ್ತು ಖಮೇನಿ ಪರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಅವರು ಮನವಿ ಮಾಡಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಇರಾನ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ‘ಇಸ್ರೇಲ್ನ ಮತ್ತೊಂದು ಆಕ್ರಮಣಕಾರಿ ಕೃತ್ಯವನ್ನು ಎದುರಿಸುತ್ತಿರುವ ಇರಾನ್ ಮತ್ತು ಅಲ್ಲಿನ ಜನರಿಗಾಗಿ ನಾನು ಪ್ರಾರ್ಥನೆ ಸಲ್ಲಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.</p><p>ಇರಾನ್ ಅನ್ನು ‘ಮುಸ್ಲಿಂ ಸಮುದಾಯದ ನಿರ್ಣಾಯಕ ಧ್ವನಿ’ ಎಂದು ಬಣ್ಣಿಸಿರುವ ಮುಫ್ತಿ, ಯಾವುದೇ ಕ್ಷಿಪಣಿ ಅಥವಾ ಬೆದರಿಕೆ ಅದರ ಸಾರ್ವಭೌಮತ್ವವನ್ನು ನಂದಿಸಲು ಅಥವಾ ಚೈತನ್ಯವನ್ನು ಮುರಿಯಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.</p><p>ಶ್ರೀನಗರ, ಬುಡ್ಗಾಮ್ ಮತ್ತು ಬಂಡಿಪೋರಾದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವದಂತಿ ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಕಣಿವೆಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಹಗಲಿನಲ್ಲಿ ಸ್ಥಗಿತಗೊಳಿಸಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.</p><p>2019ರಲ್ಲಿ ಜಮ್ಮು–ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನ ರದ್ದುಪಡಿಸಿದ್ದನ್ನು ಖಂಡಿಸಿ ಕಾಶ್ಮೀರದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು.</p>.ಖಮೇನಿ ಹತ್ಯೆ ಖಂಡಿಸಿ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ.ಖಮೇನಿ ಹತ್ಯೆಗೆ ಸೇಡು ತೀರಿಸಿಕೊಳ್ಳುವುದು ಕಾನೂನುಬದ್ಧ ಕರ್ತವ್ಯ: ಇರಾನ್ ಅಧ್ಯಕ್ಷ.ಖಮೇನಿ ಮಗನಿಗಿಲ್ಲ ಸರ್ವೋಚ್ಚ ನಾಯಕನ ಪಟ್ಟ: ಇರಾನ್ ಆಡಳಿತದ ಚುಕ್ಕಾಣಿ ಈತನ ಕೈಗೆ!.ಅಯಾತೊಲ್ಲಾ ಖಮೇನಿ ಇದ್ದ ಜಾಗದ ಮೇಲೆ ಇಸ್ರೇಲ್ ನಡೆಸಿದ ಭೀಕರ ದಾಳಿ ವಿಡಿಯೊ ಬಹಿರಂಗ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>