<p><strong>ಶ್ರೀನಗರ</strong>: ಆಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದ ಕಾರಣ ಅವುಗಳನ್ನು ನಿಯಂತ್ರಿಸಲು ವಿಧಿಸಿದ್ದ ನಿರ್ಬಂಧವು ಬುಧವಾರವೂ ಮುಂದುವರಿದಿತ್ತು.</p>.<p>ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳಿಗೆ ಶನಿವಾರದವರೆಗೆ ರಜೆ ನೀಡಲಾಗಿದೆ. ಮೊಬೈಲ್ ಇಂಟರ್ನೆಟ್ ಸೇವೆಯ ವೇಗವನ್ನು ಕಡಿತಗೊಳಿಸಲಾಗಿದೆ. ಕಾಶ್ಮೀರದ ಹಲವೆಡೆ ಜನರು ಗುಂಪು ಸೇರಲು, ಪ್ರತಿಭಟನೆ ಮಾಡಲು ನಿರ್ಬಂಧ ವಿಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p class="bodytext">‘ಶಿಯಾ ಮುಸ್ಲಿಮರು ಹೆಚ್ಚಾಗಿರುವ ಸ್ಥಳಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ನಗರದಾದ್ಯಂತ ಭಾರಿ ಸಂಖ್ಯೆಯಲ್ಲಿ ಪೊಲೀಸ್ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ’ ಎಂದು ಹೇಳಿದರು.</p>.<p>‘ಲಾಲ್ಚೌಕ್ ಸೇರಿದಂತೆ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಜಿಲ್ಲಾ ಕೇಂದ್ರಗಳಲ್ಲೂ ಇದೇ ರೀತಿಯ ವಾತಾವರಣ ಇದೆ’ ಎಂದು ಹೇಳಿದರು.</p>.<p>ಈ ಮಧ್ಯೆ, ಪ್ರತಿಭಟನೆಗೆ ಸಂಬಂಧಿಸಿದ ಸಾಮಾಜಿಕ ಜಾಲತಾಣ ಪೋಸ್ಟ್ಗೆ ಸಂಬಂಧಿಸಿದಂತೆ ಶ್ರೀನಗರ ಸಂಸದ ಆಗಾ ರುಹುಲ್ಲಾ ಮತ್ತು ಮಾಜಿ ಮೇಯರ್ ಜುನೈದ್ ಆಜಿಂ ಮಟ್ಟು ಮತ್ತಿತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಆಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದ ಕಾರಣ ಅವುಗಳನ್ನು ನಿಯಂತ್ರಿಸಲು ವಿಧಿಸಿದ್ದ ನಿರ್ಬಂಧವು ಬುಧವಾರವೂ ಮುಂದುವರಿದಿತ್ತು.</p>.<p>ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳಿಗೆ ಶನಿವಾರದವರೆಗೆ ರಜೆ ನೀಡಲಾಗಿದೆ. ಮೊಬೈಲ್ ಇಂಟರ್ನೆಟ್ ಸೇವೆಯ ವೇಗವನ್ನು ಕಡಿತಗೊಳಿಸಲಾಗಿದೆ. ಕಾಶ್ಮೀರದ ಹಲವೆಡೆ ಜನರು ಗುಂಪು ಸೇರಲು, ಪ್ರತಿಭಟನೆ ಮಾಡಲು ನಿರ್ಬಂಧ ವಿಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p class="bodytext">‘ಶಿಯಾ ಮುಸ್ಲಿಮರು ಹೆಚ್ಚಾಗಿರುವ ಸ್ಥಳಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ನಗರದಾದ್ಯಂತ ಭಾರಿ ಸಂಖ್ಯೆಯಲ್ಲಿ ಪೊಲೀಸ್ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ’ ಎಂದು ಹೇಳಿದರು.</p>.<p>‘ಲಾಲ್ಚೌಕ್ ಸೇರಿದಂತೆ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಜಿಲ್ಲಾ ಕೇಂದ್ರಗಳಲ್ಲೂ ಇದೇ ರೀತಿಯ ವಾತಾವರಣ ಇದೆ’ ಎಂದು ಹೇಳಿದರು.</p>.<p>ಈ ಮಧ್ಯೆ, ಪ್ರತಿಭಟನೆಗೆ ಸಂಬಂಧಿಸಿದ ಸಾಮಾಜಿಕ ಜಾಲತಾಣ ಪೋಸ್ಟ್ಗೆ ಸಂಬಂಧಿಸಿದಂತೆ ಶ್ರೀನಗರ ಸಂಸದ ಆಗಾ ರುಹುಲ್ಲಾ ಮತ್ತು ಮಾಜಿ ಮೇಯರ್ ಜುನೈದ್ ಆಜಿಂ ಮಟ್ಟು ಮತ್ತಿತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>