<p><strong>ಶ್ರೀನಗರ</strong>: ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವವರ ಜಾಲವನ್ನು ಭೇದಿಸಲು ಮುಂದಾಗಿರುವ ಜಮ್ಮು–ಕಾಶ್ಮೀರ ಪೊಲೀಸರು ಕಣಿವೆ ಪ್ರದೇಶದಲ್ಲಿ ಕಳೆದ ಮೂರು ದಿನಗಳಲ್ಲಿ 1500 ಜನರನ್ನು ವಶಕ್ಕೆ ಪಡೆದಿದ್ದಾರೆ.</p>.<p>‘ಗಡಿಯಾಚೆಯಿಂದ ಭಯೋತ್ಪಾದನೆ ಕೃತ್ಯ ನಡೆಸುತ್ತಿರುವ ಶಂಕಿತ ಬಂಡುಕೋರರ ಕುಟುಂಬಸ್ಥರು, ಭೂಗತ ಚಟುವಟಿಕೆ ನಡೆಸುತ್ತಿರುವವರು ಸೇರಿದಂತೆ 1500 ಶಂಕಿತರನ್ನು ವಶಕ್ಕೆ ಪಡೆದಿದ್ದೇವೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="title">‘ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ವ್ಯವಸ್ಥೆಗೆ ಬೆಂಬಲ ನೀಡುತ್ತಿರುವ ಶಂಕಿತ ವ್ಯಕ್ತಿಗಳನ್ನು ತಟಸ್ಥಗೊಳಿಸುವ ಪ್ರಕ್ರಿಯೆಯ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p class="title">ಶಾಂತಿಭಂಗಗೊಳಿಸಲು ಭಯೋತ್ಪಾದಕರು ಯತ್ನಿಸುತ್ತಿದ್ದಾರೆ ಎಂದು ನಂಬಲರ್ಹ ಗುಪ್ತಚರ ಮೂಲಗಳು ನೀಡಿದ ಮಾಹಿತಿಯ ಆಧಾರದಲ್ಲಿ ಶ್ರೀನಗರ, ಪುಲ್ವಾಮ, ಶೋಫಿಯಾ, ಕುಲ್ಗಾಂ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p class="title">‘ಪರಿಶೀಲನೆಯ ಬಳಿಕ ಹಲವರನ್ನು ಬಿಡುಗಡೆ ಮಾಡಲಾಗುವುದು, ಉಳಿದವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಸಮಾಜದ ಮುಖ್ಯವಾಹಿನಿಯಲ್ಲಿ ಉತ್ತಮ ಕೆಲಸಗಳಲ್ಲಿದ್ದು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ನೀಡುತ್ತಿರುವವರನ್ನು ನಿಗ್ರಹಿಸುವ ಕಾರ್ಯವನ್ನು ಭದ್ರತಾಪಡೆಗಳು ನಡೆಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವವರ ಜಾಲವನ್ನು ಭೇದಿಸಲು ಮುಂದಾಗಿರುವ ಜಮ್ಮು–ಕಾಶ್ಮೀರ ಪೊಲೀಸರು ಕಣಿವೆ ಪ್ರದೇಶದಲ್ಲಿ ಕಳೆದ ಮೂರು ದಿನಗಳಲ್ಲಿ 1500 ಜನರನ್ನು ವಶಕ್ಕೆ ಪಡೆದಿದ್ದಾರೆ.</p>.<p>‘ಗಡಿಯಾಚೆಯಿಂದ ಭಯೋತ್ಪಾದನೆ ಕೃತ್ಯ ನಡೆಸುತ್ತಿರುವ ಶಂಕಿತ ಬಂಡುಕೋರರ ಕುಟುಂಬಸ್ಥರು, ಭೂಗತ ಚಟುವಟಿಕೆ ನಡೆಸುತ್ತಿರುವವರು ಸೇರಿದಂತೆ 1500 ಶಂಕಿತರನ್ನು ವಶಕ್ಕೆ ಪಡೆದಿದ್ದೇವೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="title">‘ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ವ್ಯವಸ್ಥೆಗೆ ಬೆಂಬಲ ನೀಡುತ್ತಿರುವ ಶಂಕಿತ ವ್ಯಕ್ತಿಗಳನ್ನು ತಟಸ್ಥಗೊಳಿಸುವ ಪ್ರಕ್ರಿಯೆಯ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p class="title">ಶಾಂತಿಭಂಗಗೊಳಿಸಲು ಭಯೋತ್ಪಾದಕರು ಯತ್ನಿಸುತ್ತಿದ್ದಾರೆ ಎಂದು ನಂಬಲರ್ಹ ಗುಪ್ತಚರ ಮೂಲಗಳು ನೀಡಿದ ಮಾಹಿತಿಯ ಆಧಾರದಲ್ಲಿ ಶ್ರೀನಗರ, ಪುಲ್ವಾಮ, ಶೋಫಿಯಾ, ಕುಲ್ಗಾಂ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p class="title">‘ಪರಿಶೀಲನೆಯ ಬಳಿಕ ಹಲವರನ್ನು ಬಿಡುಗಡೆ ಮಾಡಲಾಗುವುದು, ಉಳಿದವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಸಮಾಜದ ಮುಖ್ಯವಾಹಿನಿಯಲ್ಲಿ ಉತ್ತಮ ಕೆಲಸಗಳಲ್ಲಿದ್ದು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ನೀಡುತ್ತಿರುವವರನ್ನು ನಿಗ್ರಹಿಸುವ ಕಾರ್ಯವನ್ನು ಭದ್ರತಾಪಡೆಗಳು ನಡೆಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>