<p><strong>ಜಮ್ಮು</strong>: ಜಮ್ಮು ಮತ್ತು ಕಾಶ್ಮೀರದ ಕಠುವಾ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ನಾಲ್ಕು ಎನ್ಕೌಂಟರ್ಗಳಿಂದಾಗಿ, ಭಯೋತ್ಪಾದಕರು ಅಂತರರಾಷ್ಟ್ರೀಯ ಗಡಿ (ಐಬಿ) ದಾಟಿ ಭಾರತಕ್ಕೆ ನುಸುಳುತ್ತಿದ್ದ ಮಾರ್ಗ ಗುರುತಿಸಲಾಗಿದೆ ಎಂದು ಕಠುವಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೋಭಿತ್ ಸಕ್ಸೇನಾ ತಿಳಿಸಿದ್ದಾರೆ.</p>.<p>ಈ ಮಾರ್ಗವನ್ನು ಮತ್ತೆ ಯಾರಿಗೂ ಬಳಸಲು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.</p>.<p>ಈ ಎನ್ಕೌಂಟರ್ಗಳ ಬಳಿಕ ಭಯೋತ್ಪಾದಕರಿಂದ ಅಪಾರ ಪ್ರಮಾಣದ ಸ್ಫೋಟಕ, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಇದು ಉಗ್ರರು ಯೋಜಿಸಿದ್ದ ದೊಡ್ಡ ಯೋಜನೆಯನ್ನು ವಿಫಲಗೊಳಿಸಿದೆ ಎಂದು ತಿಳಿಸಿದ್ದಾರೆ.</p>.<p>ಭಯೋತ್ಪಾದಕರಿಗೆ ಸಹಕಾರ ನೀಡುತ್ತಿದ್ದ 30 ಜನರನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಸಾರ್ವಜನಿಕ ಸುರಕ್ಷಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ವಿವರಿಸಿದ್ದಾರೆ.</p>.<p>ಮಾರ್ಚ್ 27ರ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಯಿತು. ಈ ಗುಂಡಿನ ಚಕಮಕಿಯಲ್ಲಿ ನಾಲ್ವರು ಪೊಲೀಸರು ಮೃತಪಟ್ಟಿದ್ದರು. ತಪ್ಪಿಸಿಕೊಂಡಿರುವ ಕೆಲ ಭಯೋತ್ಪಾದಕರ ಶೋಧಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ಜಮ್ಮು ಮತ್ತು ಕಾಶ್ಮೀರದ ಕಠುವಾ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ನಾಲ್ಕು ಎನ್ಕೌಂಟರ್ಗಳಿಂದಾಗಿ, ಭಯೋತ್ಪಾದಕರು ಅಂತರರಾಷ್ಟ್ರೀಯ ಗಡಿ (ಐಬಿ) ದಾಟಿ ಭಾರತಕ್ಕೆ ನುಸುಳುತ್ತಿದ್ದ ಮಾರ್ಗ ಗುರುತಿಸಲಾಗಿದೆ ಎಂದು ಕಠುವಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೋಭಿತ್ ಸಕ್ಸೇನಾ ತಿಳಿಸಿದ್ದಾರೆ.</p>.<p>ಈ ಮಾರ್ಗವನ್ನು ಮತ್ತೆ ಯಾರಿಗೂ ಬಳಸಲು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.</p>.<p>ಈ ಎನ್ಕೌಂಟರ್ಗಳ ಬಳಿಕ ಭಯೋತ್ಪಾದಕರಿಂದ ಅಪಾರ ಪ್ರಮಾಣದ ಸ್ಫೋಟಕ, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಇದು ಉಗ್ರರು ಯೋಜಿಸಿದ್ದ ದೊಡ್ಡ ಯೋಜನೆಯನ್ನು ವಿಫಲಗೊಳಿಸಿದೆ ಎಂದು ತಿಳಿಸಿದ್ದಾರೆ.</p>.<p>ಭಯೋತ್ಪಾದಕರಿಗೆ ಸಹಕಾರ ನೀಡುತ್ತಿದ್ದ 30 ಜನರನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಸಾರ್ವಜನಿಕ ಸುರಕ್ಷಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ವಿವರಿಸಿದ್ದಾರೆ.</p>.<p>ಮಾರ್ಚ್ 27ರ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಯಿತು. ಈ ಗುಂಡಿನ ಚಕಮಕಿಯಲ್ಲಿ ನಾಲ್ವರು ಪೊಲೀಸರು ಮೃತಪಟ್ಟಿದ್ದರು. ತಪ್ಪಿಸಿಕೊಂಡಿರುವ ಕೆಲ ಭಯೋತ್ಪಾದಕರ ಶೋಧಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>