<p><strong>ಶ್ಯೋಪುರ್ (ಮಧ್ಯಪ್ರದೇಶ):</strong> ‘ಕೌನ್ ಬನೇಗಾ ಕರೋಡ್ಪತಿ’ (ಕೆಬಿಸಿ) ಟಿವಿ ಶೋನಲ್ಲಿ ₹ 50 ಲಕ್ಷ ಗೆಲ್ಲುವ ಮೂಲಕ ದೇಶದ ಗಮನ ಸೆಳೆದಿದ್ದ ಮಧ್ಯಪ್ರದೇಶದ ಮಹಿಳಾ ತಹಶೀಲ್ದಾರ್ ₹2.5 ಕೋಟಿ ಹಗರಣದಲ್ಲಿ ಜೈಲು ಪಾಲಾಗಿದ್ದಾರೆ.</p>.<p>ಅಮಿತಾ ಸಿಂಗ್ ತೋಮರ್ ಬಂಧಿತ ತಹಶೀಲ್ದಾರ್. 2021ರಲ್ಲಿ ಬರೋಡಾ ತಾಲೂಕಿನ ಪ್ರವಾಹ ಪರಿಹಾರ ಹಂಚಿಕೆಯಲ್ಲಿ ನಡೆದಿದ್ದ ಅಕ್ರಮಗಳಿಗೆ ಸಂಬಂಧಿಸಿ ಗ್ವಾಲಿಯರ್ನಲ್ಲಿ ಗುರುವಾರ ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಶಿವಪುರಿ ಜೈಲಿನಲ್ಲಿ ಇರಿಸಲಾಗಿದೆ.</p>.<p>‘ವಿಜಯಪುರ್ನಲ್ಲಿ ಸದ್ಯ ತಹಶೀಲ್ದಾರ್ ಆಗಿದ್ದ ಅಮಿತಾ ಅವರನ್ನು ಬುಧವಾರವೇ ಜಿಲ್ಲಾಧಿಕಾರಿ ಅರ್ಪಿತ್ ವರ್ಮಾ ಹುದ್ದೆಯಿಂದ ವಜಾ ಮಾಡಿದ್ದರು. ಅಮಿತಾ ಅವರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅವು ವಜಾ ಆಗಿದ್ದವು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘2.5 ಕೋಟಿ ಹಣವನ್ನು ನಕಲಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಒಬ್ಬ ತಹಶೀಲ್ದಾರ್ ಮತ್ತು 22 ಕಂದಾಯ ಅಧಿಕಾರಿಗಳನ್ನು ಬಂಧಿಸಲಾಗಿದೆ’ ಎಂದು ಶ್ಯೋಪುರ್ ಎಸ್ಪಿ ಸುಧೀರ್ ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.</p>.<p>ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ನಡೆಸಿಕೊಡುತ್ತಿದ್ದ ಹಿಂದಿಯ ‘ಕೌನ್ ಬನೇಗಾ ಕರೋಡ್ಪತಿ’ ಶೋನಲ್ಲಿ ಅಮಿತಾ ಅವರು ಸ್ಪರ್ಧಿಯಾಗಿ ಪಾಲ್ಗೊಂಡು ₹ 50 ಲಕ್ಷ ಗೆದ್ದುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ಯೋಪುರ್ (ಮಧ್ಯಪ್ರದೇಶ):</strong> ‘ಕೌನ್ ಬನೇಗಾ ಕರೋಡ್ಪತಿ’ (ಕೆಬಿಸಿ) ಟಿವಿ ಶೋನಲ್ಲಿ ₹ 50 ಲಕ್ಷ ಗೆಲ್ಲುವ ಮೂಲಕ ದೇಶದ ಗಮನ ಸೆಳೆದಿದ್ದ ಮಧ್ಯಪ್ರದೇಶದ ಮಹಿಳಾ ತಹಶೀಲ್ದಾರ್ ₹2.5 ಕೋಟಿ ಹಗರಣದಲ್ಲಿ ಜೈಲು ಪಾಲಾಗಿದ್ದಾರೆ.</p>.<p>ಅಮಿತಾ ಸಿಂಗ್ ತೋಮರ್ ಬಂಧಿತ ತಹಶೀಲ್ದಾರ್. 2021ರಲ್ಲಿ ಬರೋಡಾ ತಾಲೂಕಿನ ಪ್ರವಾಹ ಪರಿಹಾರ ಹಂಚಿಕೆಯಲ್ಲಿ ನಡೆದಿದ್ದ ಅಕ್ರಮಗಳಿಗೆ ಸಂಬಂಧಿಸಿ ಗ್ವಾಲಿಯರ್ನಲ್ಲಿ ಗುರುವಾರ ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಶಿವಪುರಿ ಜೈಲಿನಲ್ಲಿ ಇರಿಸಲಾಗಿದೆ.</p>.<p>‘ವಿಜಯಪುರ್ನಲ್ಲಿ ಸದ್ಯ ತಹಶೀಲ್ದಾರ್ ಆಗಿದ್ದ ಅಮಿತಾ ಅವರನ್ನು ಬುಧವಾರವೇ ಜಿಲ್ಲಾಧಿಕಾರಿ ಅರ್ಪಿತ್ ವರ್ಮಾ ಹುದ್ದೆಯಿಂದ ವಜಾ ಮಾಡಿದ್ದರು. ಅಮಿತಾ ಅವರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅವು ವಜಾ ಆಗಿದ್ದವು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘2.5 ಕೋಟಿ ಹಣವನ್ನು ನಕಲಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಒಬ್ಬ ತಹಶೀಲ್ದಾರ್ ಮತ್ತು 22 ಕಂದಾಯ ಅಧಿಕಾರಿಗಳನ್ನು ಬಂಧಿಸಲಾಗಿದೆ’ ಎಂದು ಶ್ಯೋಪುರ್ ಎಸ್ಪಿ ಸುಧೀರ್ ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.</p>.<p>ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ನಡೆಸಿಕೊಡುತ್ತಿದ್ದ ಹಿಂದಿಯ ‘ಕೌನ್ ಬನೇಗಾ ಕರೋಡ್ಪತಿ’ ಶೋನಲ್ಲಿ ಅಮಿತಾ ಅವರು ಸ್ಪರ್ಧಿಯಾಗಿ ಪಾಲ್ಗೊಂಡು ₹ 50 ಲಕ್ಷ ಗೆದ್ದುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>