<p><strong>ಕಣ್ಣೂರು</strong>: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿರುವ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ವಿರುದ್ಧ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. </p><p>ದೇಶದ ಯುವಜನತೆಯಲ್ಲಿ ಹೆಚ್ಚುತ್ತಿರುವ ಆಕ್ರೋಶದ ಪ್ರತಿಬಿಂಬವಾಗಿರುವ ಇಂತಹ ವೇದಿಕೆಗಳನ್ನು ಬಲವಂತವಾಗಿ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಅವರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.</p>.ಒಂದೇ ಏಟಿಗೆ ನಾಲ್ವರು ಮಹಿಳೆಯರನ್ನು ಕೊಂದಿದ್ದ ನರಭಕ್ಷಕ ಹುಲಿ ಅಂತೂ ಸೆರೆ!.ಕೆಂಪುಕೋಟೆ ಬಾಂಬ್ ಸ್ಫೋಟ ಪ್ರಕರಣ: ಭಯೋತ್ಪಾದನೆಗೆ ಎಐ ವೇದಿಕೆ ದುರುಪಯೋಗ. <p> 'ಸಿಜೆಪಿ' ಚಳವಳಿಯು ಯುವ ಪೀಳಿಗೆಯ ಭಾವನೆಗಳ ಅಭಿವ್ಯಕ್ತಿಯಾಗಿದೆ. ಅವರ ಕಳಕಳಿ ಮತ್ತು ಸಮಸ್ಯೆಗಳನ್ನು ಸರ್ಕಾರ ಹೀಗೆಯೇ ನಿರ್ಲಕ್ಷಿಸುತ್ತಾ ಹೋದರೆ, ಈ ಡಿಜಿಟಲ್ ಪ್ರತಿಭಟನೆ ಮುಂದಿನ ದಿನಗಳಲ್ಲಿ ದೊಡ್ಡ ರಾಜಕೀಯ ಚಳವಳಿಯಾಗಿ ರೂಪಾಂತರಗೊಳ್ಳಬಹುದು ಎಂದು ವೇಣುಗೋಪಾಲ್ ಹೇಳಿದ್ದಾರೆ.</p><p>ದೇಶದ ಇಂದಿನ ಅತಿ ದೊಡ್ಡ ಸಮಸ್ಯೆ ಎಂದರೆ ಜನರ ಕಷ್ಟಗಳಿಗೆ ಸ್ಪಂದಿಸುವ ಸರ್ಕಾರ ಅಧಿಕಾರದಲ್ಲಿಲ್ಲದಿರುವುದು. ಯುವಜನರು ತಮ್ಮ ಭಾವನೆಗಳನ್ನು ಗೌರವಿಸುವ ಆಡಳಿತವನ್ನು ಬಯಸುತ್ತಾರೆ. ಅದನ್ನು ಬಿಟ್ಟು ಇಂತಹ ಚಳವಳಿಗಳನ್ನು ಹತ್ತಿಕ್ಕಲು ನೋಡಿದರೆ, ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.</p><p>ದೇಶದಲ್ಲಿ ನಿರುದ್ಯೋಗ ಸಮಸ್ಯೆ ಮತ್ತು ದಿನಬಳಕೆ ವಸ್ತುಗಳ ಬೆಲೆ ಏರಿಕೆ ಗಗನಕ್ಕೇರುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿದಿನ ಹೆಚ್ಚುತ್ತಿದ್ದು, ಮುಂಬರುವ ದಿನಗಳು ದೇಶದ ಜನರಿಗೆ ಮತ್ತಷ್ಟು ಕಷ್ಟಕರವಾಗಲಿವೆ. ಈ ನಿರಾಸೆಯೇ ಯುವಕರನ್ನು ಪ್ರತಿಭಟನೆಯತ್ತ ತಳ್ಳುತ್ತಿದೆ ಎಂದಿದ್ದಾರೆ.</p>.ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಆರೋಪಿ ಶುಭಂ ಜೂ.6ರವರೆಗೆ ನ್ಯಾಯಾಂಗ ವಶಕ್ಕೆ.ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ಮನೆಗೆ ಪೊಲೀಸ್ ಭದ್ರತೆ. <p>ಪ್ರಧಾನಮಂತ್ರಿಯವರು ದೇಶದ ಆಂತರಿಕ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನ ಹರಿಸುವ ಬದಲು, ವಿದೇಶಿ ಪ್ರವಾಸಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂದು ವೇಣುಗೋಪಾಲ್ ಆರೋಪಿಸಿದ್ದಾರೆ.</p><p>ಸಾಮಾಜಿಕ ಜಾಲತಾಣದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಎಂಬ ವಿಡಂಬನಾತ್ಮಕ ಖಾತೆಯು ಯುವಜನರ ಗಮನ ಸೆಳೆದಿತ್ತು. ಕಳೆದ ಗುರುವಾರ ಈ ಎಕ್ಸ್ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಯಿತು. ಇದರ ಬೆನ್ನಲ್ಲೇ, ʼಕಾಕ್ರೋಚ್ ಈಸ್ ಬ್ಯಾಕ್ʼ ಎಂಬ ಟ್ಯಾಗ್ಲೈನ್ನೊಂದಿಗೆ ಮತ್ತೊಂದು ಹೊಸ ಖಾತೆ ಸೋಷಿಯಲ್ ಮೀಡಿಯಾದಲ್ಲಿ ಪ್ರತ್ಯಕ್ಷವಾಗಿ ಹರಿದಾಡುತ್ತಿದೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಣ್ಣೂರು</strong>: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿರುವ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ವಿರುದ್ಧ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. </p><p>ದೇಶದ ಯುವಜನತೆಯಲ್ಲಿ ಹೆಚ್ಚುತ್ತಿರುವ ಆಕ್ರೋಶದ ಪ್ರತಿಬಿಂಬವಾಗಿರುವ ಇಂತಹ ವೇದಿಕೆಗಳನ್ನು ಬಲವಂತವಾಗಿ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಅವರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.</p>.ಒಂದೇ ಏಟಿಗೆ ನಾಲ್ವರು ಮಹಿಳೆಯರನ್ನು ಕೊಂದಿದ್ದ ನರಭಕ್ಷಕ ಹುಲಿ ಅಂತೂ ಸೆರೆ!.ಕೆಂಪುಕೋಟೆ ಬಾಂಬ್ ಸ್ಫೋಟ ಪ್ರಕರಣ: ಭಯೋತ್ಪಾದನೆಗೆ ಎಐ ವೇದಿಕೆ ದುರುಪಯೋಗ. <p> 'ಸಿಜೆಪಿ' ಚಳವಳಿಯು ಯುವ ಪೀಳಿಗೆಯ ಭಾವನೆಗಳ ಅಭಿವ್ಯಕ್ತಿಯಾಗಿದೆ. ಅವರ ಕಳಕಳಿ ಮತ್ತು ಸಮಸ್ಯೆಗಳನ್ನು ಸರ್ಕಾರ ಹೀಗೆಯೇ ನಿರ್ಲಕ್ಷಿಸುತ್ತಾ ಹೋದರೆ, ಈ ಡಿಜಿಟಲ್ ಪ್ರತಿಭಟನೆ ಮುಂದಿನ ದಿನಗಳಲ್ಲಿ ದೊಡ್ಡ ರಾಜಕೀಯ ಚಳವಳಿಯಾಗಿ ರೂಪಾಂತರಗೊಳ್ಳಬಹುದು ಎಂದು ವೇಣುಗೋಪಾಲ್ ಹೇಳಿದ್ದಾರೆ.</p><p>ದೇಶದ ಇಂದಿನ ಅತಿ ದೊಡ್ಡ ಸಮಸ್ಯೆ ಎಂದರೆ ಜನರ ಕಷ್ಟಗಳಿಗೆ ಸ್ಪಂದಿಸುವ ಸರ್ಕಾರ ಅಧಿಕಾರದಲ್ಲಿಲ್ಲದಿರುವುದು. ಯುವಜನರು ತಮ್ಮ ಭಾವನೆಗಳನ್ನು ಗೌರವಿಸುವ ಆಡಳಿತವನ್ನು ಬಯಸುತ್ತಾರೆ. ಅದನ್ನು ಬಿಟ್ಟು ಇಂತಹ ಚಳವಳಿಗಳನ್ನು ಹತ್ತಿಕ್ಕಲು ನೋಡಿದರೆ, ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.</p><p>ದೇಶದಲ್ಲಿ ನಿರುದ್ಯೋಗ ಸಮಸ್ಯೆ ಮತ್ತು ದಿನಬಳಕೆ ವಸ್ತುಗಳ ಬೆಲೆ ಏರಿಕೆ ಗಗನಕ್ಕೇರುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿದಿನ ಹೆಚ್ಚುತ್ತಿದ್ದು, ಮುಂಬರುವ ದಿನಗಳು ದೇಶದ ಜನರಿಗೆ ಮತ್ತಷ್ಟು ಕಷ್ಟಕರವಾಗಲಿವೆ. ಈ ನಿರಾಸೆಯೇ ಯುವಕರನ್ನು ಪ್ರತಿಭಟನೆಯತ್ತ ತಳ್ಳುತ್ತಿದೆ ಎಂದಿದ್ದಾರೆ.</p>.ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಆರೋಪಿ ಶುಭಂ ಜೂ.6ರವರೆಗೆ ನ್ಯಾಯಾಂಗ ವಶಕ್ಕೆ.ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ಮನೆಗೆ ಪೊಲೀಸ್ ಭದ್ರತೆ. <p>ಪ್ರಧಾನಮಂತ್ರಿಯವರು ದೇಶದ ಆಂತರಿಕ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನ ಹರಿಸುವ ಬದಲು, ವಿದೇಶಿ ಪ್ರವಾಸಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂದು ವೇಣುಗೋಪಾಲ್ ಆರೋಪಿಸಿದ್ದಾರೆ.</p><p>ಸಾಮಾಜಿಕ ಜಾಲತಾಣದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಎಂಬ ವಿಡಂಬನಾತ್ಮಕ ಖಾತೆಯು ಯುವಜನರ ಗಮನ ಸೆಳೆದಿತ್ತು. ಕಳೆದ ಗುರುವಾರ ಈ ಎಕ್ಸ್ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಯಿತು. ಇದರ ಬೆನ್ನಲ್ಲೇ, ʼಕಾಕ್ರೋಚ್ ಈಸ್ ಬ್ಯಾಕ್ʼ ಎಂಬ ಟ್ಯಾಗ್ಲೈನ್ನೊಂದಿಗೆ ಮತ್ತೊಂದು ಹೊಸ ಖಾತೆ ಸೋಷಿಯಲ್ ಮೀಡಿಯಾದಲ್ಲಿ ಪ್ರತ್ಯಕ್ಷವಾಗಿ ಹರಿದಾಡುತ್ತಿದೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>