<p><strong>ಹೈದರಾಬಾದ್</strong>: ಕಾಳೇಶ್ವರಂ ನೀರಾವರಿ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ವಿಚಾರಣೆ ನಡೆಸುತ್ತಿರುವ ನಡೆಸುತ್ತಿರುವ ನ್ಯಾಯಾಂಗದ ಆಯೋಗದ ಮುಂದೆ ಬುಧವಾರ ಹಾಜರಾದ ಬಿಆರ್ಎಸ್ ಅಧ್ಯಕ್ಷ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ವಿಚಾರಣೆ ಎದುರಿಸಿದರು. </p>.<p> ಕಾಳೇಶ್ವರಂ ನೀರಾವರಿ ಯೋಜನೆಯ ಅವ್ಯವಹಾರಗಳ ತನಿಖೆಗೆ ಸುಪ್ರೀಂಕೋರ್ಟ್ನ ಮಾಜಿ ನ್ಯಾಯಮೂರ್ತಿ ಪಿ.ಸಿ.ಘೋಷ್ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಲಾಗಿದೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ಆಯೋಗದ ಕಚೇರಿಗೆ ಬಂದ ಚಂದ್ರಶೇಖರ ರಾವ್, ಮಧ್ಯಾಹ್ನ 1ಗಂಟೆಯವರೆಗೆ ವಿಚಾರಣೆ ಎದುರಿಸಿದರು. ಆಯೋಗವು ಈಗಾಗಲೇ ಈ ಯೋಜನೆಗೆ ಸಂಬಂಧಿಸಿದಂತೆ ಕೆಲವು ಅಧಿಕಾರಿಗಳು, ಎಂಜಿನಿಯರ್ಗಳನ್ನು ವಿಚಾರಣೆಗೆ ಒಳಪಡಿಸಿದೆ. </p>.<p>‘ಕೆಸಿಆರ್‘ ವಿಚಾರಣೆಗೆ ಹಾಜರಾಗುವ ಕಾರಣದಿಂದ ಇಲ್ಲಿನ ಬಿಆರ್ಎಸ್ ಭವನದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಜಮಾಯಿಸಿದ್ದರು. ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. </p>.<p>ಹಿಂದಿನ ಬಿಆರ್ಎಸ್ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದ ಕೆಸಿಆರ್ ಸಂಬಂಧಿ, ಟಿ.ಹರೀಶ್ ರಾವ್ ಹಾಗೂ ಹಣಕಾಸು ಸಚಿವರಾಗಿದ್ದ ಇ. ರಾಜೇಂದರ್ ಕಳೆದ ವಾರ ಆಯೋಗದ ಮುಂದೆ ವಿಚಾರಣೆಗೆ ಹಾಜರಾಗಿದ್ದರು.</p>.<p>‘ತೆಲಂಗಾಣದ ಕಾಂಗ್ರೆಸ್ ಸರ್ಕಾರವು ರಾಜಕೀಯ ದುರುದ್ದೇಶದಿಂದ ಆಯೋಗದ ಮುಂದೆ ಹಾಜರಾಗುವಂತೆ ತಂದೆಗೆ ನೋಟಿಸ್ ಜಾರಿಗೊಳಿಸಿದೆ. ಅಂತಿಮವಾಗಿ ಸತ್ಯಕ್ಕೆ ಜಯ ಲಭಿಸುತ್ತದೆ’ ಎಂದು ಕೆಸಿಆರ್ ಅವರ ಪುತ್ರ, ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಹೇಳಿದರು. </p>.<p>ಕಾಳೇಶ್ವರಂ ನೀರಾವರಿ ಯೋಜನೆ ಅವ್ಯವಹಾರ ಪ್ರಕರಣವು 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಮುಖ ಚರ್ಚಾ ವಿಷಯ ಆಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಕಾಳೇಶ್ವರಂ ನೀರಾವರಿ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ವಿಚಾರಣೆ ನಡೆಸುತ್ತಿರುವ ನಡೆಸುತ್ತಿರುವ ನ್ಯಾಯಾಂಗದ ಆಯೋಗದ ಮುಂದೆ ಬುಧವಾರ ಹಾಜರಾದ ಬಿಆರ್ಎಸ್ ಅಧ್ಯಕ್ಷ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ವಿಚಾರಣೆ ಎದುರಿಸಿದರು. </p>.<p> ಕಾಳೇಶ್ವರಂ ನೀರಾವರಿ ಯೋಜನೆಯ ಅವ್ಯವಹಾರಗಳ ತನಿಖೆಗೆ ಸುಪ್ರೀಂಕೋರ್ಟ್ನ ಮಾಜಿ ನ್ಯಾಯಮೂರ್ತಿ ಪಿ.ಸಿ.ಘೋಷ್ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಲಾಗಿದೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ಆಯೋಗದ ಕಚೇರಿಗೆ ಬಂದ ಚಂದ್ರಶೇಖರ ರಾವ್, ಮಧ್ಯಾಹ್ನ 1ಗಂಟೆಯವರೆಗೆ ವಿಚಾರಣೆ ಎದುರಿಸಿದರು. ಆಯೋಗವು ಈಗಾಗಲೇ ಈ ಯೋಜನೆಗೆ ಸಂಬಂಧಿಸಿದಂತೆ ಕೆಲವು ಅಧಿಕಾರಿಗಳು, ಎಂಜಿನಿಯರ್ಗಳನ್ನು ವಿಚಾರಣೆಗೆ ಒಳಪಡಿಸಿದೆ. </p>.<p>‘ಕೆಸಿಆರ್‘ ವಿಚಾರಣೆಗೆ ಹಾಜರಾಗುವ ಕಾರಣದಿಂದ ಇಲ್ಲಿನ ಬಿಆರ್ಎಸ್ ಭವನದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಜಮಾಯಿಸಿದ್ದರು. ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. </p>.<p>ಹಿಂದಿನ ಬಿಆರ್ಎಸ್ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದ ಕೆಸಿಆರ್ ಸಂಬಂಧಿ, ಟಿ.ಹರೀಶ್ ರಾವ್ ಹಾಗೂ ಹಣಕಾಸು ಸಚಿವರಾಗಿದ್ದ ಇ. ರಾಜೇಂದರ್ ಕಳೆದ ವಾರ ಆಯೋಗದ ಮುಂದೆ ವಿಚಾರಣೆಗೆ ಹಾಜರಾಗಿದ್ದರು.</p>.<p>‘ತೆಲಂಗಾಣದ ಕಾಂಗ್ರೆಸ್ ಸರ್ಕಾರವು ರಾಜಕೀಯ ದುರುದ್ದೇಶದಿಂದ ಆಯೋಗದ ಮುಂದೆ ಹಾಜರಾಗುವಂತೆ ತಂದೆಗೆ ನೋಟಿಸ್ ಜಾರಿಗೊಳಿಸಿದೆ. ಅಂತಿಮವಾಗಿ ಸತ್ಯಕ್ಕೆ ಜಯ ಲಭಿಸುತ್ತದೆ’ ಎಂದು ಕೆಸಿಆರ್ ಅವರ ಪುತ್ರ, ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಹೇಳಿದರು. </p>.<p>ಕಾಳೇಶ್ವರಂ ನೀರಾವರಿ ಯೋಜನೆ ಅವ್ಯವಹಾರ ಪ್ರಕರಣವು 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಮುಖ ಚರ್ಚಾ ವಿಷಯ ಆಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>