ಪರಿಶಿಷ್ಟ ಪಂಗಡದವರ ಮೀಸಲಾತಿಯನ್ನು ಶೇ 10ಕ್ಕೆ ಹೆಚ್ಚಿಸುವ ಮಸೂದೆಗೆ ತೆಲಂಗಾಣ ವಿಧಾನ ಸಭೆಯಲ್ಲಿ 2017ರಲ್ಲಿ ಅವಿರೋಧವಾಗಿ ಅನುಮೋದನೆ ನೀಡಲಾಗಿತ್ತು. ಬಳಿಕ ಅದನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿತ್ತು. ಇದಕ್ಕೆ ಒಪ್ಪಿಗೆ ಪಡೆಯಲು ತೆಲಂಗಾಣ ಸರ್ಕಾರವು ಹಲವು ಬಾರಿ ನಿಯೋಗಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿತ್ತು. ಆದರೆ ಒಪ್ಪಿಗೆ ಸಿಕ್ಕಿಲ್ಲ.ಈ ಕಾರಣಕ್ಕೆ ಮುಖ್ಯಮಂತ್ರಿ ಈ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.