ಕೆಸಿಆರ್ ಅವರ ನೇತೃತ್ವದಲ್ಲಿ ಬಿಆರ್ಎಸ್ ಪಕ್ಷವು ತೆಲಂಗಾಣದ ಜನರ ಒಳಿತಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ರಾಮ ರಾವ್ ಅವರು ಹೇಳಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆ ಹೇಳಿರುವ ರಾಮ ರಾವ್, ಹೊಸ ಸರ್ಕಾರಕ್ಕೆ ಎಲ್ಲ ಬಗೆಯ ಸಹಕಾರವನ್ನು ತಮ್ಮ ಪಕ್ಷ ನೀಡಲಿದೆ ಎಂದು ತಿಳಿಸಿದ್ದಾರೆ. ಬಿಆರ್ಎಸ್ ಪಕ್ಷವು ರಚನಾತ್ಮಕ ವಿರೋಧ ಪಕ್ಷದ ಕೆಲಸವನ್ನು ನಿರ್ವಹಿಸಲಿದೆ ಎಂದು ಹೇಳಿದ್ದಾರೆ.