<p><strong>ಹೈದರಾಬಾದ್</strong>: ರಾಷ್ಟ್ರೀಯ ಹಂತದಲ್ಲಿ ತೃತೀಯ ರಂಗ ನಿರ್ಮಾಣ ಅಷ್ಟಾಗಿ ಯಶಸ್ಸು ಕಾಣದ ಹಿನ್ನೆಲೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು, ಹೊಸ ರಾಷ್ಟ್ರೀಯ ಪಕ್ಷ ಆರಂಭಿಸುವ ಚಿಂತನೆಯಲ್ಲಿದ್ದಾರೆ. ಜೂನ್ 19ರಂದು ಟಿಆರ್ಎಸ್ ಕಾರ್ಯಕಾರಿಣಿ ಸಭೆಯಲ್ಲಿ ಈ ಕುರಿತಂತೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.</p>.<p>ಶುಕ್ರವಾರ, ರಾಜ್ಯದ ಸಚಿವರು ಮತ್ತು ಪಕ್ಷದ ಹಿರಿಯ ನಾಯಕರೊಂದಿಗೆ ಮ್ಯಾರಥಾನ್ ಚರ್ಚೆ ನಡೆಸಿದ ಟಿಆರ್ಎಸ್ ಮುಖ್ಯಸ್ಥರು, ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.</p>.<p>ಚುನಾವಣಾ ಆಯೋಗದಲ್ಲಿ ಹೊಸ ಪಕ್ಷದ ನೋಂದಣಿ ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗುವ ಸಾಧ್ಯತೆ ಇದೆ. ಈ ತಿಂಗಳಾಂತ್ಯದಲ್ಲಿ ನವದೆಹಲಿಯಲ್ಲಿ ಕೆಸಿಆರ್ ಅವರು ಹೊಸ ರಾಷ್ಟ್ರೀಯ ಪಕ್ಷದ ಘೋಷಣೆ ಮಾಡಬಹುದು ಎಂದು ತಿಳಿದುಬಂದಿದೆ.</p>.<p>ಕಾರನ್ನು ರಾಷ್ಟ್ರೀಯ ಪಕ್ಷದ ಚಿಹ್ನೆಯಾಗಿ ಇಟ್ಟುಕೊಳ್ಳಲು ಟಿಆರ್ಎಸ್ ನಾಯಕತ್ವ ಮುಂದಾಗಿದೆ. ರಾಷ್ಟ್ರೀಯ ಪಕ್ಷದ ಕೇಂದ್ರ ಕಚೇರಿ ನವದೆಹಲಿಯಲ್ಲಿ ನಿರ್ಮಾಣವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p>ದೇಶದ ರಾಜಕಾರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಇಚ್ಛೆ ವ್ಯಕ್ತಪಡಿಸಿರುವ ಕೆಸಿಆರ್, ತಮ್ಮ ಆಪ್ತರ ಜೊತೆ ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ಸತತ 6 ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಪಕ್ಷದ ಶಾಸಕರೊಬ್ಬರು ಸೂಚಿಸಿದ ‘ಬಿಆರ್ಎಸ್’ ಹೆಸರನ್ನೇ ಅಂತಿಮಗೊಳಿಸಲು ಅವರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.<br /><br />ಕಳೆದ ತಿಂಗಳು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಜೊತೆ ಚರ್ಚಿಸಿರುವ ಕೆಸಿಆರ್, ಅಂತಿಮವಾಗಿ ಈ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.</p>.<p>ರಾಷ್ಟ್ರೀಯ ಹಂತದಲ್ಲಿ ಬಿಜೆಪಿಯೇತರ ಮತ್ತು ಕಾಂಗ್ರೆಸ್ಯೇತರ ತೃತೀಯ ರಂಗ ಕಟ್ಟುವ ಕೆಸಿಆರ್ ಅವರ ಪ್ರಯತ್ನ ಅಷ್ಟಾಗಿ ಫಲ ನೀಡದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ರಾಷ್ಟ್ರೀಯ ಹಂತದಲ್ಲಿ ತೃತೀಯ ರಂಗ ನಿರ್ಮಾಣ ಅಷ್ಟಾಗಿ ಯಶಸ್ಸು ಕಾಣದ ಹಿನ್ನೆಲೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು, ಹೊಸ ರಾಷ್ಟ್ರೀಯ ಪಕ್ಷ ಆರಂಭಿಸುವ ಚಿಂತನೆಯಲ್ಲಿದ್ದಾರೆ. ಜೂನ್ 19ರಂದು ಟಿಆರ್ಎಸ್ ಕಾರ್ಯಕಾರಿಣಿ ಸಭೆಯಲ್ಲಿ ಈ ಕುರಿತಂತೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.</p>.<p>ಶುಕ್ರವಾರ, ರಾಜ್ಯದ ಸಚಿವರು ಮತ್ತು ಪಕ್ಷದ ಹಿರಿಯ ನಾಯಕರೊಂದಿಗೆ ಮ್ಯಾರಥಾನ್ ಚರ್ಚೆ ನಡೆಸಿದ ಟಿಆರ್ಎಸ್ ಮುಖ್ಯಸ್ಥರು, ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.</p>.<p>ಚುನಾವಣಾ ಆಯೋಗದಲ್ಲಿ ಹೊಸ ಪಕ್ಷದ ನೋಂದಣಿ ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗುವ ಸಾಧ್ಯತೆ ಇದೆ. ಈ ತಿಂಗಳಾಂತ್ಯದಲ್ಲಿ ನವದೆಹಲಿಯಲ್ಲಿ ಕೆಸಿಆರ್ ಅವರು ಹೊಸ ರಾಷ್ಟ್ರೀಯ ಪಕ್ಷದ ಘೋಷಣೆ ಮಾಡಬಹುದು ಎಂದು ತಿಳಿದುಬಂದಿದೆ.</p>.<p>ಕಾರನ್ನು ರಾಷ್ಟ್ರೀಯ ಪಕ್ಷದ ಚಿಹ್ನೆಯಾಗಿ ಇಟ್ಟುಕೊಳ್ಳಲು ಟಿಆರ್ಎಸ್ ನಾಯಕತ್ವ ಮುಂದಾಗಿದೆ. ರಾಷ್ಟ್ರೀಯ ಪಕ್ಷದ ಕೇಂದ್ರ ಕಚೇರಿ ನವದೆಹಲಿಯಲ್ಲಿ ನಿರ್ಮಾಣವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p>ದೇಶದ ರಾಜಕಾರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಇಚ್ಛೆ ವ್ಯಕ್ತಪಡಿಸಿರುವ ಕೆಸಿಆರ್, ತಮ್ಮ ಆಪ್ತರ ಜೊತೆ ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ಸತತ 6 ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಪಕ್ಷದ ಶಾಸಕರೊಬ್ಬರು ಸೂಚಿಸಿದ ‘ಬಿಆರ್ಎಸ್’ ಹೆಸರನ್ನೇ ಅಂತಿಮಗೊಳಿಸಲು ಅವರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.<br /><br />ಕಳೆದ ತಿಂಗಳು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಜೊತೆ ಚರ್ಚಿಸಿರುವ ಕೆಸಿಆರ್, ಅಂತಿಮವಾಗಿ ಈ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.</p>.<p>ರಾಷ್ಟ್ರೀಯ ಹಂತದಲ್ಲಿ ಬಿಜೆಪಿಯೇತರ ಮತ್ತು ಕಾಂಗ್ರೆಸ್ಯೇತರ ತೃತೀಯ ರಂಗ ಕಟ್ಟುವ ಕೆಸಿಆರ್ ಅವರ ಪ್ರಯತ್ನ ಅಷ್ಟಾಗಿ ಫಲ ನೀಡದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>