ಹೈದರಾಬಾದ್: ‘ಅವಧಿಗೆ ಮುನ್ನವೇ ವಿಧಾನಸಭೆ ಚುನಾವಣೆಗೆ ಹೋಗುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ತೆಲಂಗಾಣ ಮುಖ್ಯಮಂತ್ರಿ, ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಹೇಳಿದ್ದಾರೆ.
ಹೈದರಾಬಾದ್ನ ಹೊರವಲಯದಲ್ಲಿ ನಡೆದ ‘ಪ್ರಗತಿ ನಿವೇದನಾ ಸಭಾ’ದಲ್ಲಿ ಅವರು ಮಾತನಾಡಿದರು. ವಿಧಾನಸಭೆ ವಿಸರ್ಜಿಸಿ ಬೇಗನೆ ಚುನಾವಣೆಗೆ ಹೋಗುವ ಘೋಷಣೆಯನ್ನು ಈ ಸಭೆಯಲ್ಲಿ ಅವರು ಮಾಡಬಹುದು ಎಂಬ ವರದಿಗಳು ಪ್ರಕಟವಾಗಿದ್ದವು.