<p><strong>ರುದ್ರಪ್ರಯಾಗ:</strong> ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಟೇಕ್–ಆಫ್ ಆಗುವಾಗ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ ಮಾಡಿದ ಘಟನೆಯು ಶನಿವಾರ ರುದ್ರಪ್ರಯಾಗದಲ್ಲಿ ಜರುಗಿದೆ.</p><p>ಘಟನೆಯಲ್ಲಿ ಯಾವುದೇ ತೊಂದರೆಯಾಗಿಲ್ಲ. ಎಲ್ಲಾ ಪ್ರಯಾಣಿಕರು ಹಾಗೂ ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಹೆಲಿಕಾಪ್ಟರ್ ಹೆದ್ದಾರಿ ಮಧ್ಯದಲ್ಲಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಘಟನೆ ನಡೆದ ಸ್ಥಳದ ಬಳಿಯೇ ದೊಡ್ಡ ಕಟ್ಟಡವಿದ್ದು ಕೂದಲೆಳೆ ಅಂತರದಲ್ಲಿ ದೊಡ್ಡ ಅಪಘಾತ ತಪ್ಪಿದೆ. ಆದರೆ, ಹೆಲಿಕಾಪ್ಟರ್ನ ಹಿಂಭಾಗಕ್ಕೆ (ಬಾಲ) ಮತ್ತು ಒಂದು ಕಾರಿಗೆ ಸ್ವಲ್ಪ ಹಾನಿಯಾಗಿದೆ. ಈ ಹೆಲಿಕಾಪ್ಟರ್ ಕೆಸ್ಟ್ರೆಲ್ ವಿಮಾನಯಾನ ಸಂಸ್ಥೆಗೆ ಸೇರಿದೆ.</p>.<p>ಹೆಲಿಕಾಪ್ಟರ್ನಲ್ಲಿ ಪೈಲಟ್ ಸೇರಿದಂತೆ ಆರು ಜನ ಯಾತ್ರಿಕರಿದ್ದರು. ಘಟನೆಯಲ್ಲಿ ಪೈಲಟ್ಗೆ ಸ್ಪಲ್ಪ ಪ್ರಮಾಣದ ಗಾಯವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಹೆದ್ದಾರಿಯಿಂದ ಹೆಲಿಕಾಪ್ಟರ್ ಸ್ಥಳಾಂತರಿಸಲಾಗುತ್ತಿದ್ದು, ಘಟನೆಯಿಂದ ಕೇದಾರನಾಥ ಹೆಲಿಕಾಪ್ಟರ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರುದ್ರಪ್ರಯಾಗ:</strong> ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಟೇಕ್–ಆಫ್ ಆಗುವಾಗ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ ಮಾಡಿದ ಘಟನೆಯು ಶನಿವಾರ ರುದ್ರಪ್ರಯಾಗದಲ್ಲಿ ಜರುಗಿದೆ.</p><p>ಘಟನೆಯಲ್ಲಿ ಯಾವುದೇ ತೊಂದರೆಯಾಗಿಲ್ಲ. ಎಲ್ಲಾ ಪ್ರಯಾಣಿಕರು ಹಾಗೂ ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಹೆಲಿಕಾಪ್ಟರ್ ಹೆದ್ದಾರಿ ಮಧ್ಯದಲ್ಲಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಘಟನೆ ನಡೆದ ಸ್ಥಳದ ಬಳಿಯೇ ದೊಡ್ಡ ಕಟ್ಟಡವಿದ್ದು ಕೂದಲೆಳೆ ಅಂತರದಲ್ಲಿ ದೊಡ್ಡ ಅಪಘಾತ ತಪ್ಪಿದೆ. ಆದರೆ, ಹೆಲಿಕಾಪ್ಟರ್ನ ಹಿಂಭಾಗಕ್ಕೆ (ಬಾಲ) ಮತ್ತು ಒಂದು ಕಾರಿಗೆ ಸ್ವಲ್ಪ ಹಾನಿಯಾಗಿದೆ. ಈ ಹೆಲಿಕಾಪ್ಟರ್ ಕೆಸ್ಟ್ರೆಲ್ ವಿಮಾನಯಾನ ಸಂಸ್ಥೆಗೆ ಸೇರಿದೆ.</p>.<p>ಹೆಲಿಕಾಪ್ಟರ್ನಲ್ಲಿ ಪೈಲಟ್ ಸೇರಿದಂತೆ ಆರು ಜನ ಯಾತ್ರಿಕರಿದ್ದರು. ಘಟನೆಯಲ್ಲಿ ಪೈಲಟ್ಗೆ ಸ್ಪಲ್ಪ ಪ್ರಮಾಣದ ಗಾಯವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಹೆದ್ದಾರಿಯಿಂದ ಹೆಲಿಕಾಪ್ಟರ್ ಸ್ಥಳಾಂತರಿಸಲಾಗುತ್ತಿದ್ದು, ಘಟನೆಯಿಂದ ಕೇದಾರನಾಥ ಹೆಲಿಕಾಪ್ಟರ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>