ಇದುವರೆಗೆ ಮೂರು ಮೃತದೇಹಗಳು ಪತ್ತೆಯಾಗಿದ್ದು, 17 ಮಂದಿ ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವಾರ್ ತಿಳಿಸಿದ್ದಾರೆ. ಆದರೆ, ನಾಲ್ಕು ಮೃತದೇಹಗಳು ಪತ್ತೆಯಾಗಿವೆ ಎಂದು ಜಿಲ್ಲಾಡಳಿತ ಶುಕ್ರವಾರ ತಿಳಿಸಿತ್ತು.
ಸ್ಥಳೀಯ ಆಡಳಿತ ತಂಡದೊಂದಿಗೆ ಸುಮಾರು 100 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಸಿಬ್ಬಂದಿಗಳು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಡ್ರೋನ್ಗಳನ್ನು ಸಹ ಬಳಸಲಾಗುತ್ತಿದೆ ಎಂದು ರಾಜ್ವಾರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಲು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಕೇದಾರನಾಥಕ್ಕೆ ಹೋಗುವ ಮಾರ್ಗದ ಗೌರಿಕುಂಡ್ ಬಳಿಯ ದಾಟ್ ಪುಲಿಯಾ ಎಂಬಲ್ಲಿ ಪ್ರವಾಹದಿಂದ ಉಂಟಾದ ಭೂಕುಸಿತದಲ್ಲಿ ಮೂರು ಅಂಗಡಿಗಳು ಕೊಚ್ಚಿ ಹೋಗಿದ್ದು, 20 ಜನರು ನಾಪತ್ತೆಯಾಗಿದ್ದಾರೆ.
ಅಂಗಡಿಗಳಿರುವ ಸ್ಥಳದಿಂದ ಸುಮಾರು 50 ಮೀಟರ್ ಕೆಳಗೆ ಮಂದಾಕಿನಿ ನದಿ ಹರಿಯುತ್ತದೆ