<p><strong>ಕೇದಾರನಾಥ</strong>: ಚಳಿಗಾಲ ಮುಗಿದ ಕಾರಣ ಚಾರ್ಧಾಮ್ ಯಾತ್ರಾ ಸ್ಥಳಗಳಲ್ಲಿ ಒಂದಾದ ಕೇದಾರನಾಥ ದೇಗುಲದ ಬಾಗಿಲು ತೆರೆಯಲು ಸಜ್ಜಾಗಿದೆ. ಶುಕ್ರವಾರ ಬೆಳಿಗ್ಗೆ ದೇಗುಲದ ಬಾಗಿಲು ತೆರೆಯಲಿದೆ.</p><p>ದೇಗುಲವನ್ನು 150 ಸ್ವಯಂ ಸೇವಕರು ದೇಶ, ವಿದೇಶಗಳಿಂದ ತರಿಸಲಾದ 108 ಕ್ವಿಂಟಲ್ ಹೂವುಗಳಿಂದ ಅಲಂಕರಿಸಿದ್ದಾರೆ.</p><p>ಸಮುದ್ರ ಮಟ್ಟದಿಂದ 11 ಸಾವಿರ ಅಡಿ ಎತ್ತರದಲ್ಲಿರುವ ಕೇದಾರನಾಥ ದೇಗುಲ ಉತ್ತರಾಖಂಡ್ನ ರುದ್ರಪ್ರಯಾಗ ಜಿಲ್ಲೆಯಲ್ಲಿದೆ.</p><p>ದೇಗುಲವನ್ನು ಗುಲಾಬಿ, ಸೇವಂತಿಗೆ ಸೇರಿ ಒಟ್ಟು 54 ವಿವಿಧ ಹೂವುಗಳಿಂದ ಅಲಂಕರಿಸಲಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಮಾತ್ರವಲ್ಲದೆ ನೇಪಾಳ, ಥಾಯ್ಲೆಂಡ್ ಮತ್ತು ಶ್ರೀಲಂಕಾದಿಂದಲೂ ಹೂವುಗಳನ್ನು ತರಿಸಲಾಗಿದೆ.</p><p>ಚಳಿಗಾಲದಲ್ಲಿ ಕೇದಾರನಾಥದಿಂದ ಶಿವನ ವಿಗ್ರಹವನ್ನು ಉಖಿಮಠದಲ್ಲಿರುವ ಓಂಕಾರೇಶ್ವರ ದೇಗುಲದಲ್ಲಿ ಇರಿಸಲಾಗುತ್ತದೆ. ಚಳಿಗಾಲದ ಅಂತ್ಯವಾದ ಮೇಲೆ ಗೌರಿಕುಂಡ್ ಹಾದಿಯಲ್ಲಿ ದೇಗುಲದ ಆಡಳಿತ ಕಮಿಟಿ ಸದಸ್ಯರು ವಿಗ್ರಹವನ್ನು ಭುಜದ ಮೇಲೆ ಹೊತ್ತು ಕೇದಾರನಾಥಕ್ಕೆ ತಂದು ಸ್ಥಾಪಿಸುತ್ತಾರೆ. </p><p>ನಾಳೆ ಬೆಳಿಗ್ಗೆ 6 ಗಂಟೆಯಿಂದ ವಿಧಿವಿಧಾನಗಳು ಆರಂಭವಾಗಿ 7 ಗಂಟೆಗೆ ದೇಗುಲ ಬಾಗಿಲು ತೆರೆಯಲಿದೆ ಎಂದು ದೇಗುಲದ ಪ್ರಧಾನ ಅರ್ಚಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೇದಾರನಾಥ</strong>: ಚಳಿಗಾಲ ಮುಗಿದ ಕಾರಣ ಚಾರ್ಧಾಮ್ ಯಾತ್ರಾ ಸ್ಥಳಗಳಲ್ಲಿ ಒಂದಾದ ಕೇದಾರನಾಥ ದೇಗುಲದ ಬಾಗಿಲು ತೆರೆಯಲು ಸಜ್ಜಾಗಿದೆ. ಶುಕ್ರವಾರ ಬೆಳಿಗ್ಗೆ ದೇಗುಲದ ಬಾಗಿಲು ತೆರೆಯಲಿದೆ.</p><p>ದೇಗುಲವನ್ನು 150 ಸ್ವಯಂ ಸೇವಕರು ದೇಶ, ವಿದೇಶಗಳಿಂದ ತರಿಸಲಾದ 108 ಕ್ವಿಂಟಲ್ ಹೂವುಗಳಿಂದ ಅಲಂಕರಿಸಿದ್ದಾರೆ.</p><p>ಸಮುದ್ರ ಮಟ್ಟದಿಂದ 11 ಸಾವಿರ ಅಡಿ ಎತ್ತರದಲ್ಲಿರುವ ಕೇದಾರನಾಥ ದೇಗುಲ ಉತ್ತರಾಖಂಡ್ನ ರುದ್ರಪ್ರಯಾಗ ಜಿಲ್ಲೆಯಲ್ಲಿದೆ.</p><p>ದೇಗುಲವನ್ನು ಗುಲಾಬಿ, ಸೇವಂತಿಗೆ ಸೇರಿ ಒಟ್ಟು 54 ವಿವಿಧ ಹೂವುಗಳಿಂದ ಅಲಂಕರಿಸಲಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಮಾತ್ರವಲ್ಲದೆ ನೇಪಾಳ, ಥಾಯ್ಲೆಂಡ್ ಮತ್ತು ಶ್ರೀಲಂಕಾದಿಂದಲೂ ಹೂವುಗಳನ್ನು ತರಿಸಲಾಗಿದೆ.</p><p>ಚಳಿಗಾಲದಲ್ಲಿ ಕೇದಾರನಾಥದಿಂದ ಶಿವನ ವಿಗ್ರಹವನ್ನು ಉಖಿಮಠದಲ್ಲಿರುವ ಓಂಕಾರೇಶ್ವರ ದೇಗುಲದಲ್ಲಿ ಇರಿಸಲಾಗುತ್ತದೆ. ಚಳಿಗಾಲದ ಅಂತ್ಯವಾದ ಮೇಲೆ ಗೌರಿಕುಂಡ್ ಹಾದಿಯಲ್ಲಿ ದೇಗುಲದ ಆಡಳಿತ ಕಮಿಟಿ ಸದಸ್ಯರು ವಿಗ್ರಹವನ್ನು ಭುಜದ ಮೇಲೆ ಹೊತ್ತು ಕೇದಾರನಾಥಕ್ಕೆ ತಂದು ಸ್ಥಾಪಿಸುತ್ತಾರೆ. </p><p>ನಾಳೆ ಬೆಳಿಗ್ಗೆ 6 ಗಂಟೆಯಿಂದ ವಿಧಿವಿಧಾನಗಳು ಆರಂಭವಾಗಿ 7 ಗಂಟೆಗೆ ದೇಗುಲ ಬಾಗಿಲು ತೆರೆಯಲಿದೆ ಎಂದು ದೇಗುಲದ ಪ್ರಧಾನ ಅರ್ಚಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>