<p><strong>ರುದ್ರಪ್ರಯಾಗ್</strong>: ಚಳಿಗಾಲದ ಕಾರಣದಿಂದ ಆರು ತಿಂಗಳುಗಳ ಕಾಲ ಬಾಗಿಲು ಮುಚ್ಚಿರುವ ಕೇದಾರನಾಥ ದೇಗುಲದ ಬಾಗಿಲನ್ನು ಏಪ್ರಿಲ್ 22ರಂದು ತೆರೆಯಲಾಗುತ್ತದೆ ಎಂದು ದೇವಾಲಯದ ಸಮಿತಿ ಭಾನುವಾರ ತಿಳಿಸಿದೆ.</p><p>12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇಗುಲದ ಬಾಗಿಲು ಏಪ್ರಿಲ್ 22ರಂದು ಬೆಳಿಗ್ಗೆ 8 ಗಂಟೆಗೆ ತೆರೆಯಲಿದೆ. ಈ ಮೂಲಕ ಚಾರ್ಧಾಮ್ ಯಾತ್ರೆ ಆರಂಭವಾಗಲಿದೆ. </p>.ಚಳಿಗಾಲ ಆರಂಭ: ಮುಚ್ಚಿದ ಕೇದಾರನಾಥ ದೇಗುಲದ ಬಾಗಿಲು.<p>ಚಾರ್ದಾಮ್ ಕ್ಷೇತ್ರಗಳಾದ ಕೇದಾರನಾಥ ಏ.22ರಂದು ಬಾಗಿಲು ತೆರೆದರೆ, ಬದರಿನಾಥ ದೇಗುಲ ಏ.23ರಂದು ಬಾಗಿಲು ತೆರೆಯಲಿದೆ. ಗಂಗೋತ್ರಿ ಮತ್ತು ಯಮುನೋತ್ರಿ ದೇಗುಲಗಳು ಏ.19ರಂದು ಅಕ್ಷಯ ತೃತೀಯದಂದು ಬಾಗಿಲು ತೆರೆಯಲಿವೆ.</p><p>ಚಳಿಗಾಲದಲ್ಲಿ ದೇಗುಲ ಹಿಮದಿಂದ ಆವೃತವಾಗುವ ಕಾರಣ ನವೆಂಬರ್ನಲ್ಲಿ ಕೇದಾರನಾಥ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಗುತ್ತದೆ. ದೇಗುಲದ ಬಾಗಿಲುಗಳನ್ನು ಮುಚ್ಚುವ ಮುನ್ನ ಅಲ್ಲಿರುವ ಶಿವನ ವಿಗ್ರಹವನ್ನು ಪಲ್ಲಕ್ಕಿ ಮೂಲಕ ಹೊರತರಲಾಗುತ್ತದೆ. ಚಳಿಗಾಲ ಮುಗಿಯುವವರೆಗೆ ರುದ್ರಪ್ರಯಾಗದಲ್ಲಿನ ಉಖಿಮಠದ ಓಂಕಾರೇಶ್ವರ ದೇಗುಲದಲ್ಲಿ ವಿಗ್ರಹವನ್ನಿಟ್ಟು ಪೂಜಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರುದ್ರಪ್ರಯಾಗ್</strong>: ಚಳಿಗಾಲದ ಕಾರಣದಿಂದ ಆರು ತಿಂಗಳುಗಳ ಕಾಲ ಬಾಗಿಲು ಮುಚ್ಚಿರುವ ಕೇದಾರನಾಥ ದೇಗುಲದ ಬಾಗಿಲನ್ನು ಏಪ್ರಿಲ್ 22ರಂದು ತೆರೆಯಲಾಗುತ್ತದೆ ಎಂದು ದೇವಾಲಯದ ಸಮಿತಿ ಭಾನುವಾರ ತಿಳಿಸಿದೆ.</p><p>12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇಗುಲದ ಬಾಗಿಲು ಏಪ್ರಿಲ್ 22ರಂದು ಬೆಳಿಗ್ಗೆ 8 ಗಂಟೆಗೆ ತೆರೆಯಲಿದೆ. ಈ ಮೂಲಕ ಚಾರ್ಧಾಮ್ ಯಾತ್ರೆ ಆರಂಭವಾಗಲಿದೆ. </p>.ಚಳಿಗಾಲ ಆರಂಭ: ಮುಚ್ಚಿದ ಕೇದಾರನಾಥ ದೇಗುಲದ ಬಾಗಿಲು.<p>ಚಾರ್ದಾಮ್ ಕ್ಷೇತ್ರಗಳಾದ ಕೇದಾರನಾಥ ಏ.22ರಂದು ಬಾಗಿಲು ತೆರೆದರೆ, ಬದರಿನಾಥ ದೇಗುಲ ಏ.23ರಂದು ಬಾಗಿಲು ತೆರೆಯಲಿದೆ. ಗಂಗೋತ್ರಿ ಮತ್ತು ಯಮುನೋತ್ರಿ ದೇಗುಲಗಳು ಏ.19ರಂದು ಅಕ್ಷಯ ತೃತೀಯದಂದು ಬಾಗಿಲು ತೆರೆಯಲಿವೆ.</p><p>ಚಳಿಗಾಲದಲ್ಲಿ ದೇಗುಲ ಹಿಮದಿಂದ ಆವೃತವಾಗುವ ಕಾರಣ ನವೆಂಬರ್ನಲ್ಲಿ ಕೇದಾರನಾಥ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಗುತ್ತದೆ. ದೇಗುಲದ ಬಾಗಿಲುಗಳನ್ನು ಮುಚ್ಚುವ ಮುನ್ನ ಅಲ್ಲಿರುವ ಶಿವನ ವಿಗ್ರಹವನ್ನು ಪಲ್ಲಕ್ಕಿ ಮೂಲಕ ಹೊರತರಲಾಗುತ್ತದೆ. ಚಳಿಗಾಲ ಮುಗಿಯುವವರೆಗೆ ರುದ್ರಪ್ರಯಾಗದಲ್ಲಿನ ಉಖಿಮಠದ ಓಂಕಾರೇಶ್ವರ ದೇಗುಲದಲ್ಲಿ ವಿಗ್ರಹವನ್ನಿಟ್ಟು ಪೂಜಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>