<p><strong>ರುದ್ರಪ್ರಯಾಗ (ಉತ್ತರಾಖಂಡ):</strong> ಕೇದಾರನಾಥ ದೇಗುಲದ ಚಾರಣ ಮಾರ್ಗದಲ್ಲಿರುವ ಸೋನ್ಪ್ರಯಾಗ ಬಳಿಯ ಮುಂಕಟಿಯಾದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಮುಂಕಟಿಯಾ ಪ್ರದೇಶದಲ್ಲಿ ಮಣ್ಣು ಮತ್ತು ಕಲ್ಲುಗಳಿಂದ ರಸ್ತೆ ಸಂಪೂರ್ಣವಾಗಿ ಮುಚ್ಚಿಹೋಗಿದ್ದು, ಸ್ಥಳೀಯ ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಗೌರಿಕುಂಡ–ಕೇದಾರನಾಥ ಚಾರಣ ಮಾರ್ಗದಲ್ಲಿ ಯಾತ್ರಿಗಳು ಸಿಲುಕಿಕೊಂಡಿದ್ದಾರೆ. ಈ ಮಾರ್ಗದ ಸುಮಾರು 20–25 ಮೀಟರ್ ಉದ್ದದ ರಸ್ತೆ ಮಾರ್ಗವು ಭೂಕುಸಿತದಿಂದ ಹಾನಿಗೊಳಗಾಗಿದೆ. ಸಂಚಾರ ರದ್ದುಗೊಂಡಿದೆ. ಯಾತ್ರಿಕರನ್ನು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ರಕ್ಷಣೆ ಮಾಡಿದ್ದು, ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದೆ.</p><p>ಚಾರ್ ಧಾಮ್ ಯಾತ್ರೆಯ ನಾಲ್ಕು ದೇಗುಲಗಳಲ್ಲಿ ಮೂರನೇ ದೇವಾಲಯವಾಗಿರುವ ಕೇದಾರನಾಥವು ಪ್ರಮುಖವಾದದ್ದು. ಅಪಾರ ಸಂಖ್ಯೆಯ ಭಕ್ತರನ್ನು ತನ್ನತ್ತ ಆಕರ್ಷಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರುದ್ರಪ್ರಯಾಗ (ಉತ್ತರಾಖಂಡ):</strong> ಕೇದಾರನಾಥ ದೇಗುಲದ ಚಾರಣ ಮಾರ್ಗದಲ್ಲಿರುವ ಸೋನ್ಪ್ರಯಾಗ ಬಳಿಯ ಮುಂಕಟಿಯಾದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಮುಂಕಟಿಯಾ ಪ್ರದೇಶದಲ್ಲಿ ಮಣ್ಣು ಮತ್ತು ಕಲ್ಲುಗಳಿಂದ ರಸ್ತೆ ಸಂಪೂರ್ಣವಾಗಿ ಮುಚ್ಚಿಹೋಗಿದ್ದು, ಸ್ಥಳೀಯ ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಗೌರಿಕುಂಡ–ಕೇದಾರನಾಥ ಚಾರಣ ಮಾರ್ಗದಲ್ಲಿ ಯಾತ್ರಿಗಳು ಸಿಲುಕಿಕೊಂಡಿದ್ದಾರೆ. ಈ ಮಾರ್ಗದ ಸುಮಾರು 20–25 ಮೀಟರ್ ಉದ್ದದ ರಸ್ತೆ ಮಾರ್ಗವು ಭೂಕುಸಿತದಿಂದ ಹಾನಿಗೊಳಗಾಗಿದೆ. ಸಂಚಾರ ರದ್ದುಗೊಂಡಿದೆ. ಯಾತ್ರಿಕರನ್ನು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ರಕ್ಷಣೆ ಮಾಡಿದ್ದು, ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದೆ.</p><p>ಚಾರ್ ಧಾಮ್ ಯಾತ್ರೆಯ ನಾಲ್ಕು ದೇಗುಲಗಳಲ್ಲಿ ಮೂರನೇ ದೇವಾಲಯವಾಗಿರುವ ಕೇದಾರನಾಥವು ಪ್ರಮುಖವಾದದ್ದು. ಅಪಾರ ಸಂಖ್ಯೆಯ ಭಕ್ತರನ್ನು ತನ್ನತ್ತ ಆಕರ್ಷಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>