<p><strong>ಭೋಪಾಲ್:</strong> ಅಲ್ಪ ಸಂಖ್ಯಾತ ಸಮುದಾಯದ ಶೇ. 90ರಷ್ಟು ಮತಗಳು ಕಾಂಗ್ರೆಸ್ಗೆ ಸಿಗುವಂತೆಮುಸ್ಲಿಂ ನಾಯಕರು ಪ್ರಯತ್ನಿಸಬೇಕುಎಂದು ಕಾಂಗ್ರೆಸ್ ನಾಯಕ ಕಮಲ್ ನಾಥ್ ಹೇಳಿದ್ದರು.ಕಮಲ್ ನಾಥ್ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ,'ನಿಮ್ಮ ಅಲಿ ನಿಮ್ಮಲ್ಲಿಯೇ ಇರಲಿ, ನಮಗೆ ಬಜರಂಗ ಬಲಿ ಸಾಕು' ಎಂದಿದ್ದಾರೆ.</p>.<p>ಶನಿವಾರ ಮಧ್ಯಪ್ರದೇಶದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಷಣ ಮಾಡಿದ ಆದಿತ್ಯನಾಥ, ಕಾಂಗ್ರೆಸ್ನವರಿಗೆ ಎಸ್ಸಿ/ ಎಸ್ಟಿ ಮತಗಳು ಬೇಡ.ಅವರಿಗೆ ಮುಸ್ಲಿಮರ ಮತ ಸಾಕು ಎಂದು ಕಮಲ್ ನಾಥ್ ಹೇಳಿಕೆ ನೀಡಿರುವುದನ್ನು ನಾನು ಇತ್ತೀಚೆಗೆ ಓದಿದ್ದೆ. ಏತನ್ಮಧ್ಯೆ, ಪ್ರವಾದಿ ಮೊಹಮ್ಮದ್ನ ಉತ್ತರಾಧಿಕಾರಿಯಾದ ಅಲಿ ಮುಸ್ಲಿಮರಿಗೆ ಇದ್ದರೆ, ಬಜರಂಗ ಬಲಿ (ಹನುಮಾನ್) ನಮಗಿದ್ದಾರೆ ಎಂದಿದ್ದಾರೆ.</p>.<p>ಕಮಲ್ ನಾಥ್ ಅವರು ಮತ ಬ್ಯಾಂಕ್ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದಾಗ್ಯೂ, ಮತ ಪಡೆಯಲು ಈ ರೀತಿ ಹೇಳುವುದರಲ್ಲಿ ತಪ್ಪೇನಿಲ್ಲ ಎಂದು ಕಾಂಗ್ರೆಸ್ ಸಮಜಾಯಿಷಿ ನೀಡಿದೆ.</p>.<p>ರ್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ ಯೋಗಿ, ಮಧ್ಯಪ್ರದೇಶ ಮತ್ತು ಚತ್ತೀಸ್ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ, 10 ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಾರೆ.ಆದರೆ ಪಂಜಾಬ್ನಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್, ಅಲ್ಲಿ ಯಾಕೆ ಏನೂ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.</p>.<p>ನವೆಂಬರ್ 28ರಂದು ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು, ಇನ್ನೊಂದು ಬಾರಿ ಅಧಿಕಾರಕ್ಕೇರಲು ಬಿಜೆಪಿ ಹವಣಿಸುತ್ತಿದೆ. ಇತ್ತ 15 ವರ್ಷಗಳ ನಂತರ ಅಧಿಕಾರಕ್ಕೇರಲು ಕಾಂಗ್ರೆಸ್ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಅಲ್ಪ ಸಂಖ್ಯಾತ ಸಮುದಾಯದ ಶೇ. 90ರಷ್ಟು ಮತಗಳು ಕಾಂಗ್ರೆಸ್ಗೆ ಸಿಗುವಂತೆಮುಸ್ಲಿಂ ನಾಯಕರು ಪ್ರಯತ್ನಿಸಬೇಕುಎಂದು ಕಾಂಗ್ರೆಸ್ ನಾಯಕ ಕಮಲ್ ನಾಥ್ ಹೇಳಿದ್ದರು.ಕಮಲ್ ನಾಥ್ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ,'ನಿಮ್ಮ ಅಲಿ ನಿಮ್ಮಲ್ಲಿಯೇ ಇರಲಿ, ನಮಗೆ ಬಜರಂಗ ಬಲಿ ಸಾಕು' ಎಂದಿದ್ದಾರೆ.</p>.<p>ಶನಿವಾರ ಮಧ್ಯಪ್ರದೇಶದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಷಣ ಮಾಡಿದ ಆದಿತ್ಯನಾಥ, ಕಾಂಗ್ರೆಸ್ನವರಿಗೆ ಎಸ್ಸಿ/ ಎಸ್ಟಿ ಮತಗಳು ಬೇಡ.ಅವರಿಗೆ ಮುಸ್ಲಿಮರ ಮತ ಸಾಕು ಎಂದು ಕಮಲ್ ನಾಥ್ ಹೇಳಿಕೆ ನೀಡಿರುವುದನ್ನು ನಾನು ಇತ್ತೀಚೆಗೆ ಓದಿದ್ದೆ. ಏತನ್ಮಧ್ಯೆ, ಪ್ರವಾದಿ ಮೊಹಮ್ಮದ್ನ ಉತ್ತರಾಧಿಕಾರಿಯಾದ ಅಲಿ ಮುಸ್ಲಿಮರಿಗೆ ಇದ್ದರೆ, ಬಜರಂಗ ಬಲಿ (ಹನುಮಾನ್) ನಮಗಿದ್ದಾರೆ ಎಂದಿದ್ದಾರೆ.</p>.<p>ಕಮಲ್ ನಾಥ್ ಅವರು ಮತ ಬ್ಯಾಂಕ್ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದಾಗ್ಯೂ, ಮತ ಪಡೆಯಲು ಈ ರೀತಿ ಹೇಳುವುದರಲ್ಲಿ ತಪ್ಪೇನಿಲ್ಲ ಎಂದು ಕಾಂಗ್ರೆಸ್ ಸಮಜಾಯಿಷಿ ನೀಡಿದೆ.</p>.<p>ರ್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ ಯೋಗಿ, ಮಧ್ಯಪ್ರದೇಶ ಮತ್ತು ಚತ್ತೀಸ್ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ, 10 ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಾರೆ.ಆದರೆ ಪಂಜಾಬ್ನಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್, ಅಲ್ಲಿ ಯಾಕೆ ಏನೂ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.</p>.<p>ನವೆಂಬರ್ 28ರಂದು ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು, ಇನ್ನೊಂದು ಬಾರಿ ಅಧಿಕಾರಕ್ಕೇರಲು ಬಿಜೆಪಿ ಹವಣಿಸುತ್ತಿದೆ. ಇತ್ತ 15 ವರ್ಷಗಳ ನಂತರ ಅಧಿಕಾರಕ್ಕೇರಲು ಕಾಂಗ್ರೆಸ್ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>