<p><strong>ನವದೆಹಲಿ</strong>: ಅಂಬೇಡ್ಕರ್ ಕುರಿತ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಯಾಗಿ ‘ಅಂಬೇಡ್ಕರ್ ಸಮ್ಮಾನ್ ವಿದ್ಯಾರ್ಥಿವೇತನ’ ಯೋಜನೆ ಘೋಷಿಸಿರುವ ಆಮ್ ಆದ್ಮಿ ಪಕ್ಷ(ಎಎಪಿ), ವಿದೇಶದಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವ ದೆಹಲಿಯ ದಲಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯಲು ಈ ಯೋಜನೆಯಡಿ ಅವಕಾಶ ಕಲ್ಪಿಸಿದೆ.</p><p>‘ಅಂಬೇಡ್ಕರ್ ಸಮ್ಮಾನ್ ವಿದ್ಯಾರ್ಥಿವೇತನ’ ಯೋಜನೆಯಡಿ ದಲಿತ ವಿದ್ಯಾರ್ಥಿಗಳಿಗೆ ಉಚಿತ ವಿದೇಶಿ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದು ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.</p><p>ಈ ಯೋಜನೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಸತ್ತಿನಲ್ಲಿ ಅಂಬೇಡ್ಕರ್ ಅವರಿಗೆ ಬಿಜೆಪಿ ಅವಮಾನ ಮಾಡಿರುವುದಕ್ಕೆ ಪ್ರತಿಕ್ರಿಯೆಯಾಗಿ ಈ ಯೋಜನೆಯನ್ನು ಘೋಷಿಸಲಾಗಿದೆ’ ಎಂದಿದ್ದಾರೆ.</p><p>‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ನಲ್ಲಿ ಅಂಬೇಡ್ಕರ್ ಅವರನ್ನು ಅಪಹಾಸ್ಯ ಮಾಡುವ ಮೂಲಕ ಅವಮಾನಿಸಿದ್ದಾರೆ. ಅಂಬೇಡ್ಕರ್ ಅವರನ್ನು ಪ್ರೀತಿಸುವ ಕೋಟ್ಯಾಂತರ ಜನರಿಗೆ ಇದರಿಂದ ನೋವುಂಟಾಗಿದೆ’ ಎಂದು ಹೇಳಿದ್ದಾರೆ.</p><p>‘ಶಿಕ್ಷಣವು ಭವಿಷ್ಯದ ಹಾದಿ ಎಂದು ಹೇಳಿದ್ದ ಅಂಬೇಡ್ಕರ್ ಅವರು ಎಲ್ಲಾ ವೈರುಧ್ಯಗಳನ್ನು ಮೆಟ್ಟಿ ಅಮೆರಿಕದಲ್ಲಿ ಪಿಎಚ್ಡಿ ಪಡೆದಿದ್ದರು’ ಎಂದು ಇದೇ ವೇಳೆ ನೆನಸಿಕೊಂಡಿದ್ದಾರೆ.</p><p>ಈ ವಿದ್ಯಾರ್ಥಿವೇತನವು ಸಂವಿಧಾನ ಶಿಲ್ಪಿಗೆ ಬಿಜೆಪಿ ಮಾಡಿದ ಅವಮಾನಕ್ಕೆ ಪ್ರತಿಕ್ರಿಯೆಯಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>‘ಈ ಯೋಜನೆಯಡಿಯಲ್ಲಿ ದೆಹಲಿಯ ಯಾವುದೇ ದಲಿತ ವಿದ್ಯಾರ್ಥಿಯು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತದೆ. ಅಂತಹ ಯಾವುದೇ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಯ ಶಿಕ್ಷಣ, ಪ್ರಯಾಣ ಮತ್ತು ವಸತಿ ವೆಚ್ಚವನ್ನು ದೆಹಲಿ ಸರ್ಕಾರ ಭರಿಸಲಿದೆ’ ಎಂದು ಯೋಜನೆಗೆ ಬಗ್ಗೆ ಮಾಹಿತಿ ನೀಡಿದ್ದಾರೆ.</p><p>‘ಸರ್ಕಾರಿ ನೌಕರರ ಮಕ್ಕಳು ಕೂಡ ಈ ಯೋಜನೆಯಡಿ ಅರ್ಹತೆ ಪಡೆಯಲಿದ್ದಾರೆ’ ಎಂದು ತಿಳಿಸಿದ ಅವರು, ಯೋಜನೆ ಹೇಗೆ ಮತ್ತು ಯಾವಾಗ ಕಾರ್ಯರೂಪಕ್ಕೆ ಬರಲಿದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಂಬೇಡ್ಕರ್ ಕುರಿತ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಯಾಗಿ ‘ಅಂಬೇಡ್ಕರ್ ಸಮ್ಮಾನ್ ವಿದ್ಯಾರ್ಥಿವೇತನ’ ಯೋಜನೆ ಘೋಷಿಸಿರುವ ಆಮ್ ಆದ್ಮಿ ಪಕ್ಷ(ಎಎಪಿ), ವಿದೇಶದಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವ ದೆಹಲಿಯ ದಲಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯಲು ಈ ಯೋಜನೆಯಡಿ ಅವಕಾಶ ಕಲ್ಪಿಸಿದೆ.</p><p>‘ಅಂಬೇಡ್ಕರ್ ಸಮ್ಮಾನ್ ವಿದ್ಯಾರ್ಥಿವೇತನ’ ಯೋಜನೆಯಡಿ ದಲಿತ ವಿದ್ಯಾರ್ಥಿಗಳಿಗೆ ಉಚಿತ ವಿದೇಶಿ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದು ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.</p><p>ಈ ಯೋಜನೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಸತ್ತಿನಲ್ಲಿ ಅಂಬೇಡ್ಕರ್ ಅವರಿಗೆ ಬಿಜೆಪಿ ಅವಮಾನ ಮಾಡಿರುವುದಕ್ಕೆ ಪ್ರತಿಕ್ರಿಯೆಯಾಗಿ ಈ ಯೋಜನೆಯನ್ನು ಘೋಷಿಸಲಾಗಿದೆ’ ಎಂದಿದ್ದಾರೆ.</p><p>‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ನಲ್ಲಿ ಅಂಬೇಡ್ಕರ್ ಅವರನ್ನು ಅಪಹಾಸ್ಯ ಮಾಡುವ ಮೂಲಕ ಅವಮಾನಿಸಿದ್ದಾರೆ. ಅಂಬೇಡ್ಕರ್ ಅವರನ್ನು ಪ್ರೀತಿಸುವ ಕೋಟ್ಯಾಂತರ ಜನರಿಗೆ ಇದರಿಂದ ನೋವುಂಟಾಗಿದೆ’ ಎಂದು ಹೇಳಿದ್ದಾರೆ.</p><p>‘ಶಿಕ್ಷಣವು ಭವಿಷ್ಯದ ಹಾದಿ ಎಂದು ಹೇಳಿದ್ದ ಅಂಬೇಡ್ಕರ್ ಅವರು ಎಲ್ಲಾ ವೈರುಧ್ಯಗಳನ್ನು ಮೆಟ್ಟಿ ಅಮೆರಿಕದಲ್ಲಿ ಪಿಎಚ್ಡಿ ಪಡೆದಿದ್ದರು’ ಎಂದು ಇದೇ ವೇಳೆ ನೆನಸಿಕೊಂಡಿದ್ದಾರೆ.</p><p>ಈ ವಿದ್ಯಾರ್ಥಿವೇತನವು ಸಂವಿಧಾನ ಶಿಲ್ಪಿಗೆ ಬಿಜೆಪಿ ಮಾಡಿದ ಅವಮಾನಕ್ಕೆ ಪ್ರತಿಕ್ರಿಯೆಯಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>‘ಈ ಯೋಜನೆಯಡಿಯಲ್ಲಿ ದೆಹಲಿಯ ಯಾವುದೇ ದಲಿತ ವಿದ್ಯಾರ್ಥಿಯು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತದೆ. ಅಂತಹ ಯಾವುದೇ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಯ ಶಿಕ್ಷಣ, ಪ್ರಯಾಣ ಮತ್ತು ವಸತಿ ವೆಚ್ಚವನ್ನು ದೆಹಲಿ ಸರ್ಕಾರ ಭರಿಸಲಿದೆ’ ಎಂದು ಯೋಜನೆಗೆ ಬಗ್ಗೆ ಮಾಹಿತಿ ನೀಡಿದ್ದಾರೆ.</p><p>‘ಸರ್ಕಾರಿ ನೌಕರರ ಮಕ್ಕಳು ಕೂಡ ಈ ಯೋಜನೆಯಡಿ ಅರ್ಹತೆ ಪಡೆಯಲಿದ್ದಾರೆ’ ಎಂದು ತಿಳಿಸಿದ ಅವರು, ಯೋಜನೆ ಹೇಗೆ ಮತ್ತು ಯಾವಾಗ ಕಾರ್ಯರೂಪಕ್ಕೆ ಬರಲಿದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>