<p><strong>ನವದೆಹಲಿ</strong>: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ (ಸೆ.17) ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದು, ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.</p><p>ಮುಂಬರುವ ಚುನಾವಣೆಯಲ್ಲಿ ಜನರು ‘ನಾವು ಪ್ರಾಮಾಣಿಕರು’ ಎಂದು ಹೇಳಿದಾಗ ಮತ್ತೆ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರಿವಾಲ್ ಹಾಗೂ ಉಪಮುಖ್ಯಮಂತ್ರಿಯಾಗಿ ಮನೀಶ್ ಸಿಸೋಡಿಯಾ ಅಧಿಕಾರ ಸ್ವೀಕರಿಸುತ್ತಾರೆ ಎಂದು ಎಎಪಿ ತಿಳಿಸಿದೆ.</p>.ಪರೀಕ್ಷಾರ್ಥಿಯ ಖಾಸಗಿ ಭಾಗಗಳನ್ನು ತಪಾಸಣೆ ನಡೆಸಿದ ಕಾನ್ಸ್ಟೆಬಲ್: ತನಿಖೆಗೆ ಆದೇಶ.ಸದ್ಯ ಇರುವ ಸಂವಿಧಾನದಲ್ಲಿ ಒಂದು ದೇಶ, ಒಂದು ಚುನಾವಣೆ ಅಸಾಧ್ಯ: ಚಿದಂಬರಂ. <p>‘ಜನರು ಪ್ರಾಮಾಣಿಕತೆಯ ಪ್ರಮಾಣ ಪತ್ರವನ್ನು ನೀಡಿದಾಗ ನಾನು ಮತ್ತೆ ಮುಖ್ಯಮಂತ್ರಿ ಹುದ್ದೆಯಲ್ಲಿ ಕುಳಿತುಕೊಳ್ಳುತ್ತೇನೆ‘. ಇನ್ನೆರಡು ದಿನದಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಭಾನುವಾರ ಕೇಜ್ರಿವಾಲ್ ಹೇಳಿದ್ದರು.</p><p>ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರು ಜಾಮೀನು ಪಡೆದು ಶುಕ್ರವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಎಎಪಿ ಶಾಸಕರ ಸಭೆಯನ್ನು ಇನ್ನು ಎರಡು ದಿನಗಳಲ್ಲಿ ನಡೆಸಲಾಗುತ್ತದೆ. ಪಕ್ಷದ ನಾಯಕರೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಾರೆ ಎಂದು ಕೇಜ್ರಿವಾಲ್ ಪ್ರಕಟಿಸಿದ್ದರು.</p>.Manipur Violence | ಮಣಿಪುರ ಸಚಿವರ ನಿವಾಸದ ಮೇಲೆ ಗ್ರೆನೇಡ್ ದಾಳಿ.ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದರೆ ₹11 ಲಕ್ಷ ಬಹುಮಾನ:ಶಿವಸೇನಾ ಶಾಸಕ ಗಾಯಕ್ವಾಡ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ (ಸೆ.17) ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದು, ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.</p><p>ಮುಂಬರುವ ಚುನಾವಣೆಯಲ್ಲಿ ಜನರು ‘ನಾವು ಪ್ರಾಮಾಣಿಕರು’ ಎಂದು ಹೇಳಿದಾಗ ಮತ್ತೆ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರಿವಾಲ್ ಹಾಗೂ ಉಪಮುಖ್ಯಮಂತ್ರಿಯಾಗಿ ಮನೀಶ್ ಸಿಸೋಡಿಯಾ ಅಧಿಕಾರ ಸ್ವೀಕರಿಸುತ್ತಾರೆ ಎಂದು ಎಎಪಿ ತಿಳಿಸಿದೆ.</p>.ಪರೀಕ್ಷಾರ್ಥಿಯ ಖಾಸಗಿ ಭಾಗಗಳನ್ನು ತಪಾಸಣೆ ನಡೆಸಿದ ಕಾನ್ಸ್ಟೆಬಲ್: ತನಿಖೆಗೆ ಆದೇಶ.ಸದ್ಯ ಇರುವ ಸಂವಿಧಾನದಲ್ಲಿ ಒಂದು ದೇಶ, ಒಂದು ಚುನಾವಣೆ ಅಸಾಧ್ಯ: ಚಿದಂಬರಂ. <p>‘ಜನರು ಪ್ರಾಮಾಣಿಕತೆಯ ಪ್ರಮಾಣ ಪತ್ರವನ್ನು ನೀಡಿದಾಗ ನಾನು ಮತ್ತೆ ಮುಖ್ಯಮಂತ್ರಿ ಹುದ್ದೆಯಲ್ಲಿ ಕುಳಿತುಕೊಳ್ಳುತ್ತೇನೆ‘. ಇನ್ನೆರಡು ದಿನದಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಭಾನುವಾರ ಕೇಜ್ರಿವಾಲ್ ಹೇಳಿದ್ದರು.</p><p>ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರು ಜಾಮೀನು ಪಡೆದು ಶುಕ್ರವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಎಎಪಿ ಶಾಸಕರ ಸಭೆಯನ್ನು ಇನ್ನು ಎರಡು ದಿನಗಳಲ್ಲಿ ನಡೆಸಲಾಗುತ್ತದೆ. ಪಕ್ಷದ ನಾಯಕರೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಾರೆ ಎಂದು ಕೇಜ್ರಿವಾಲ್ ಪ್ರಕಟಿಸಿದ್ದರು.</p>.Manipur Violence | ಮಣಿಪುರ ಸಚಿವರ ನಿವಾಸದ ಮೇಲೆ ಗ್ರೆನೇಡ್ ದಾಳಿ.ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದರೆ ₹11 ಲಕ್ಷ ಬಹುಮಾನ:ಶಿವಸೇನಾ ಶಾಸಕ ಗಾಯಕ್ವಾಡ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>