<p><strong>ಅಹಮದಾಬಾದ್:</strong> ‘ಗುಜರಾತ್ನ ಬುಡಕಟ್ಟು ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ₹50 ಕೋಟಿ ವೆಚ್ಚ ಮಾಡಿದ್ದು, ಈ ಪೈಕಿ ₹2 ಕೋಟಿಯನ್ನು ಸಮೋಸಗಳಿಗೆ ಖರ್ಚು ಮಾಡಲಾಗಿದೆ’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p>.<p>ದೇದಿಯಾಪಾಡ ಕ್ಷೇತ್ರದ ಎಎಪಿ ಶಾಸಕ ಚೈತರ್ ವಾಸವ ಅವರು ಆರ್ಟಿಐ ಅಡಿ ಪಡೆದ ಮಾಹಿತಿಯನ್ನು ಉಲ್ಲೇಖಿಸಿ ಕೇಜ್ರಿವಾಲ್ ಈ ಆರೋಪ ಮಾಡಿದ್ದಾರೆ.</p>.<p>ಮೂರು ದಿನಗಳ ಗುಜರಾತ್ ಭೇಟಿಯ ಕೊನೆಯ ದಿನವಾದ ವಡೋದರಾದಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ನವೆಂಬರ್ 15ರಂದು ಬಿರ್ಸಾ ಮುಂಡಾ ಅವರ 150ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ‘ಜನಜಾತೀಯ ಗೌರವ ದಿವಸ’ ಕಾರ್ಯಕ್ರಮಕ್ಕಾಗಿ ನರ್ಮದಾ ಜಿಲ್ಲಾಡಳಿತವು ಸುಮಾರು ₹50 ಕೋಟಿ ಖರ್ಚು ಮಾಡಿದೆ. ಈ ಪೈಕಿ ಪೆಂಡಾಲ್ಗಳಿಗೆ ₹5 ಕೋಟಿ, ಬಸ್ ವ್ಯವಸ್ಥೆಗೆ ₹7 ಕೋಟಿ, ಸಮೋಸಗಳಿಗೆ ₹2 ಕೋಟಿ ಖರ್ಚು ಮಾಡಲಾಗಿದೆ. ಬುಡಕಟ್ಟು ನಿಧಿಯಿಂದ ಪಡೆದ ₹2 ಕೋಟಿ ಮೊತ್ತದ ಸಮೋಸಗಳನ್ನು ಯಾರು ತಿಂದರು’ ಎಂದು ಪ್ರಶ್ನಿಸಿದ್ದಾರೆ.</p>.<p>‘ಮೋದಿ ಅವರು ಸಮೋಸಗಳಿಗೆ ₹20 ಕೋಟಿ ಅಥವಾ ₹30 ಕೋಟಿ ಖರ್ಚು ಮಾಡಬಹುದಿತ್ತು. ಆದರೆ, ಕೇಂದ್ರ ಸರ್ಕಾರದ ಹಣವನ್ನು ಏಕೆ ಖರ್ಚು ಮಾಡಲಿಲ್ಲ? ₹2 ಕೋಟಿ ಮೊತ್ತದಲ್ಲಿ ಬುಡಕಟ್ಟು ಪ್ರದೇಶಗಳಲ್ಲಿ ಅನೇಕ ಆಸ್ಪತ್ರೆಗಳು ಮತ್ತು ಶಾಲೆಗಳನ್ನು ನಿರ್ಮಿಸಬಹುದಿತ್ತು’ ಎಂದು ಹೇಳಿದ್ದಾರೆ.</p>.<p>‘ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದರೂ ಬುಡಕಟ್ಟು ಪ್ರದೇಶಗಳು ಏಕೆ ಹಿಂದುಳಿದಿವೆ? ನಾವು ಹಣವನ್ನು ಪ್ರಾಮಾಣಿಕವಾಗಿ ಖರ್ಚು ಮಾಡಿದರೆ ಸುಸಜ್ಜಿತ ಆಸ್ಪತ್ರೆಗಳು ಹಾಗೂ ಶಾಲೆಗಳನ್ನು ನಿರ್ಮಿಸಬಹುದು. ಉಚಿತ ವಿದ್ಯುತ್, ರಸ್ತೆ ಸೌಕರ್ಯ ಒದಗಿಸಬಹುದು’ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ‘ಗುಜರಾತ್ನ ಬುಡಕಟ್ಟು ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ₹50 ಕೋಟಿ ವೆಚ್ಚ ಮಾಡಿದ್ದು, ಈ ಪೈಕಿ ₹2 ಕೋಟಿಯನ್ನು ಸಮೋಸಗಳಿಗೆ ಖರ್ಚು ಮಾಡಲಾಗಿದೆ’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p>.<p>ದೇದಿಯಾಪಾಡ ಕ್ಷೇತ್ರದ ಎಎಪಿ ಶಾಸಕ ಚೈತರ್ ವಾಸವ ಅವರು ಆರ್ಟಿಐ ಅಡಿ ಪಡೆದ ಮಾಹಿತಿಯನ್ನು ಉಲ್ಲೇಖಿಸಿ ಕೇಜ್ರಿವಾಲ್ ಈ ಆರೋಪ ಮಾಡಿದ್ದಾರೆ.</p>.<p>ಮೂರು ದಿನಗಳ ಗುಜರಾತ್ ಭೇಟಿಯ ಕೊನೆಯ ದಿನವಾದ ವಡೋದರಾದಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ನವೆಂಬರ್ 15ರಂದು ಬಿರ್ಸಾ ಮುಂಡಾ ಅವರ 150ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ‘ಜನಜಾತೀಯ ಗೌರವ ದಿವಸ’ ಕಾರ್ಯಕ್ರಮಕ್ಕಾಗಿ ನರ್ಮದಾ ಜಿಲ್ಲಾಡಳಿತವು ಸುಮಾರು ₹50 ಕೋಟಿ ಖರ್ಚು ಮಾಡಿದೆ. ಈ ಪೈಕಿ ಪೆಂಡಾಲ್ಗಳಿಗೆ ₹5 ಕೋಟಿ, ಬಸ್ ವ್ಯವಸ್ಥೆಗೆ ₹7 ಕೋಟಿ, ಸಮೋಸಗಳಿಗೆ ₹2 ಕೋಟಿ ಖರ್ಚು ಮಾಡಲಾಗಿದೆ. ಬುಡಕಟ್ಟು ನಿಧಿಯಿಂದ ಪಡೆದ ₹2 ಕೋಟಿ ಮೊತ್ತದ ಸಮೋಸಗಳನ್ನು ಯಾರು ತಿಂದರು’ ಎಂದು ಪ್ರಶ್ನಿಸಿದ್ದಾರೆ.</p>.<p>‘ಮೋದಿ ಅವರು ಸಮೋಸಗಳಿಗೆ ₹20 ಕೋಟಿ ಅಥವಾ ₹30 ಕೋಟಿ ಖರ್ಚು ಮಾಡಬಹುದಿತ್ತು. ಆದರೆ, ಕೇಂದ್ರ ಸರ್ಕಾರದ ಹಣವನ್ನು ಏಕೆ ಖರ್ಚು ಮಾಡಲಿಲ್ಲ? ₹2 ಕೋಟಿ ಮೊತ್ತದಲ್ಲಿ ಬುಡಕಟ್ಟು ಪ್ರದೇಶಗಳಲ್ಲಿ ಅನೇಕ ಆಸ್ಪತ್ರೆಗಳು ಮತ್ತು ಶಾಲೆಗಳನ್ನು ನಿರ್ಮಿಸಬಹುದಿತ್ತು’ ಎಂದು ಹೇಳಿದ್ದಾರೆ.</p>.<p>‘ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದರೂ ಬುಡಕಟ್ಟು ಪ್ರದೇಶಗಳು ಏಕೆ ಹಿಂದುಳಿದಿವೆ? ನಾವು ಹಣವನ್ನು ಪ್ರಾಮಾಣಿಕವಾಗಿ ಖರ್ಚು ಮಾಡಿದರೆ ಸುಸಜ್ಜಿತ ಆಸ್ಪತ್ರೆಗಳು ಹಾಗೂ ಶಾಲೆಗಳನ್ನು ನಿರ್ಮಿಸಬಹುದು. ಉಚಿತ ವಿದ್ಯುತ್, ರಸ್ತೆ ಸೌಕರ್ಯ ಒದಗಿಸಬಹುದು’ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>