<p><strong>ನವದೆಹಲಿ</strong>: ದೆಹಲಿ–ಎನ್ಸಿಆರ್ ಪ್ರದೇಶದಲ್ಲಿ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿರುವುದನ್ನು ಪರಿಗಣಿಸಿ ಗಾಳಿ ಮತ್ತು ನೀರು ಶುದ್ಧೀಕರಣ ಯಂತ್ರಗಳ ಮೇಲೆ ವಿಧಿಸಲಾಗುತ್ತಿರುವ ಶೇ 18ರಷ್ಟು ಜಿಎಸ್ಟಿಯನ್ನು ತೆಗೆದುಹಾಕುವಂತೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p><p>ಶುದ್ಧ ಗಾಳಿ ಮತ್ತು ಶುದ್ಧ ನೀರು ಎಲ್ಲ ನಾಗರಿಕರ ಮೂಲಭೂತ ಹಕ್ಕುಗಳು ಎಂದು ಅವರು ಎಕ್ಸ್ ಪೋಸ್ಟ್ನಲ್ಲಿ ಪ್ರತಿಪಾದಿಸಿದ್ದಾರೆ.</p><p>‘ದೆಹಲಿ ಮತ್ತು ಉತ್ತರ ಭಾರತದಾದ್ಯಂತ ಗಾಳಿ ಗುಣಮಟ್ಟ ಮಾರಣಾಂತಿಕವಾಗಿದೆ. ಈ ಸಮಸ್ಯೆಗೆ ಪರಿಹಾರ ನೀಡುವ ಬದಲು ಕೇಂದ್ರ ಸರ್ಕಾರವು ಅಧಿಕ ತೆರಿಗೆ ಸಂಗ್ರಹಿಸುವತ್ತ ನಿರತವಾಗಿದೆ’ ಎಂದು ಅವರು ಕಿಡಿಕಾರಿದ್ದಾರೆ.</p><p>ಮಾಲಿನ್ಯದಿಂದ ತಮ್ಮ ಕುಟುಂಬಗಳನ್ನು ರಕ್ಷಿಸಲು ಜನರು ಗಾಳಿ ಶುದ್ಧೀಕರಣ ಯಂತ್ರಗಳನ್ನು ಖರೀದಿಸಲು ಹೋದಾಗ, ಸರ್ಕಾರವು ಅವರ ಮೇಲೆ ಶೇ 18ರಷ್ಟು ಜಿಎಸ್ಟಿ ವಿಧಿಸುತ್ತಿದೆ. ಇದು ಸಂಪೂರ್ಣ ಅನ್ಯಾಯವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ;</p><p>ಗಾಳಿ ಮತ್ತು ನೀರು ಶುದ್ಧೀಕರಣ ಯಂತ್ರಗಳ ಮೇಲೆ ವಿಧಿಸಲಾಗುತ್ತಿರುವ ಜಿಎಸ್ಟಿಯನ್ನು ಕೇಂದ್ರವು ತಕ್ಷಣ ತೆಗೆದುಹಾಕಬೇಕೆಂದು ಎಎಪಿ ಮುಖ್ಯಸ್ಥ ಒತ್ತಾಯಿಸಿದ್ದಾರೆ. ನಿಮಗೆ ಕಲುಷಿತ ಗಾಳಿಯಿಂದ ಪರಿಹಾರ ಒದಗಿಸಲು ಸಾಧ್ಯವಾಗದಿದ್ದರೆ, ಕನಿಷ್ಠ ಜನರ ಜೇಬಿನ ಮೇಲೆ ಹೊರೆ ಹಾಕುವುದನ್ನು ನಿಲ್ಲಿಸಿ ಎಂದು ಅವರು ಹೇಳಿದ್ದಾರೆ.</p><p>ಮುನ್ಸೂಚನೆಯ ಪ್ರಕಾರ, ಮುಂಬರುವ ವಾರದಲ್ಲೂ ದೆಹಲಿಯ ಗಾಳಿ ಗುಣಮಟ್ಟ 'ತುಂಬಾ ಕಳಪೆ'ಯಾಗಿಯೇ ಉಳಿಯುವ ಸಾಧ್ಯತೆಯಿದೆ.</p><p>ಈ ಚಳಿಗಾಲದಲ್ಲಿ ದೆಹಲಿಯ ಗಾಳಿಯ ಗುಣಮಟ್ಟ 'ತುಂಬಾ ಕಳಪೆ' ಮತ್ತು 'ತೀವ್ರ ಕಳಪೆ' ಮಟ್ಟಕ್ಕೆ ಇಳಿಯುತ್ತಿರುವುದರಿಂದ, ಮಾಲಿನ್ಯ ಸಂಬಂಧಿತ ಆರೋಗ್ಯ ಸಮಸ್ಯೆಯ ಆರಂಭಿಕ ಚಿಹ್ನೆಗಳನ್ನು ಪತ್ತೆಹಚ್ಚಲು ನಿಯಮಿತ ರೋಗನಿರ್ಣಯ ತಪಾಸಣೆಯ ಅಗತ್ಯವನ್ನು ವೈದ್ಯರು ಒತ್ತಿ ಹೇಳಿದ್ದಾರೆ.</p> .ದೇಶದ ಮಕ್ಕಳು ಉಸಿರು ಕಟ್ಟುತ್ತಿದ್ದಾರೆ: ಮೋದಿ ಮೌನ ಪ್ರಶ್ನಿಸಿದ ರಾಹುಲ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ–ಎನ್ಸಿಆರ್ ಪ್ರದೇಶದಲ್ಲಿ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿರುವುದನ್ನು ಪರಿಗಣಿಸಿ ಗಾಳಿ ಮತ್ತು ನೀರು ಶುದ್ಧೀಕರಣ ಯಂತ್ರಗಳ ಮೇಲೆ ವಿಧಿಸಲಾಗುತ್ತಿರುವ ಶೇ 18ರಷ್ಟು ಜಿಎಸ್ಟಿಯನ್ನು ತೆಗೆದುಹಾಕುವಂತೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p><p>ಶುದ್ಧ ಗಾಳಿ ಮತ್ತು ಶುದ್ಧ ನೀರು ಎಲ್ಲ ನಾಗರಿಕರ ಮೂಲಭೂತ ಹಕ್ಕುಗಳು ಎಂದು ಅವರು ಎಕ್ಸ್ ಪೋಸ್ಟ್ನಲ್ಲಿ ಪ್ರತಿಪಾದಿಸಿದ್ದಾರೆ.</p><p>‘ದೆಹಲಿ ಮತ್ತು ಉತ್ತರ ಭಾರತದಾದ್ಯಂತ ಗಾಳಿ ಗುಣಮಟ್ಟ ಮಾರಣಾಂತಿಕವಾಗಿದೆ. ಈ ಸಮಸ್ಯೆಗೆ ಪರಿಹಾರ ನೀಡುವ ಬದಲು ಕೇಂದ್ರ ಸರ್ಕಾರವು ಅಧಿಕ ತೆರಿಗೆ ಸಂಗ್ರಹಿಸುವತ್ತ ನಿರತವಾಗಿದೆ’ ಎಂದು ಅವರು ಕಿಡಿಕಾರಿದ್ದಾರೆ.</p><p>ಮಾಲಿನ್ಯದಿಂದ ತಮ್ಮ ಕುಟುಂಬಗಳನ್ನು ರಕ್ಷಿಸಲು ಜನರು ಗಾಳಿ ಶುದ್ಧೀಕರಣ ಯಂತ್ರಗಳನ್ನು ಖರೀದಿಸಲು ಹೋದಾಗ, ಸರ್ಕಾರವು ಅವರ ಮೇಲೆ ಶೇ 18ರಷ್ಟು ಜಿಎಸ್ಟಿ ವಿಧಿಸುತ್ತಿದೆ. ಇದು ಸಂಪೂರ್ಣ ಅನ್ಯಾಯವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ;</p><p>ಗಾಳಿ ಮತ್ತು ನೀರು ಶುದ್ಧೀಕರಣ ಯಂತ್ರಗಳ ಮೇಲೆ ವಿಧಿಸಲಾಗುತ್ತಿರುವ ಜಿಎಸ್ಟಿಯನ್ನು ಕೇಂದ್ರವು ತಕ್ಷಣ ತೆಗೆದುಹಾಕಬೇಕೆಂದು ಎಎಪಿ ಮುಖ್ಯಸ್ಥ ಒತ್ತಾಯಿಸಿದ್ದಾರೆ. ನಿಮಗೆ ಕಲುಷಿತ ಗಾಳಿಯಿಂದ ಪರಿಹಾರ ಒದಗಿಸಲು ಸಾಧ್ಯವಾಗದಿದ್ದರೆ, ಕನಿಷ್ಠ ಜನರ ಜೇಬಿನ ಮೇಲೆ ಹೊರೆ ಹಾಕುವುದನ್ನು ನಿಲ್ಲಿಸಿ ಎಂದು ಅವರು ಹೇಳಿದ್ದಾರೆ.</p><p>ಮುನ್ಸೂಚನೆಯ ಪ್ರಕಾರ, ಮುಂಬರುವ ವಾರದಲ್ಲೂ ದೆಹಲಿಯ ಗಾಳಿ ಗುಣಮಟ್ಟ 'ತುಂಬಾ ಕಳಪೆ'ಯಾಗಿಯೇ ಉಳಿಯುವ ಸಾಧ್ಯತೆಯಿದೆ.</p><p>ಈ ಚಳಿಗಾಲದಲ್ಲಿ ದೆಹಲಿಯ ಗಾಳಿಯ ಗುಣಮಟ್ಟ 'ತುಂಬಾ ಕಳಪೆ' ಮತ್ತು 'ತೀವ್ರ ಕಳಪೆ' ಮಟ್ಟಕ್ಕೆ ಇಳಿಯುತ್ತಿರುವುದರಿಂದ, ಮಾಲಿನ್ಯ ಸಂಬಂಧಿತ ಆರೋಗ್ಯ ಸಮಸ್ಯೆಯ ಆರಂಭಿಕ ಚಿಹ್ನೆಗಳನ್ನು ಪತ್ತೆಹಚ್ಚಲು ನಿಯಮಿತ ರೋಗನಿರ್ಣಯ ತಪಾಸಣೆಯ ಅಗತ್ಯವನ್ನು ವೈದ್ಯರು ಒತ್ತಿ ಹೇಳಿದ್ದಾರೆ.</p> .ದೇಶದ ಮಕ್ಕಳು ಉಸಿರು ಕಟ್ಟುತ್ತಿದ್ದಾರೆ: ಮೋದಿ ಮೌನ ಪ್ರಶ್ನಿಸಿದ ರಾಹುಲ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>