<p><strong>ನವದೆಹಲಿ</strong>: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಲಂಚದ ರೂಪದಲ್ಲಿ ಪಡೆದ ₹ 100 ಕೋಟಿಯಲ್ಲಿ ಕೆಲ ಭಾಗವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನೇರವಾಗಿ ಬಳಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಆರೋಪಪಟ್ಟಿಯಲ್ಲಿ ತಿಳಿಸಿದೆ.</p>.<p>ಕೇಜ್ರಿವಾಲ್ ಅವರು ಗೋವಾದ ಐಷಾರಾಮಿ ಹೋಟೆಲ್ನಲ್ಲಿ ತಂಗಲು ಈ ಹಣ ಬಳಸಿದ್ದರು ಎಂದು ಆರೋಪಪಟ್ಟಿಯಲ್ಲಿ ಹೇಳಿದೆ. </p>.<p>ಅಬಕಾರಿ ನೀತಿಗೆ ಸಂಬಂಧಿಸಿದಂತೆ ದೆಹಲಿ ಸರ್ಕಾರವು ‘ಸಚಿವರ ಗುಂಪು’ ರಚಿಸಿದ್ದೇ ಒಂದು ವಂಚನೆಯಾಗಿದೆ. ಅರವಿಂದ ಕೇಜ್ರಿವಾಲ್ ಅವರೇ ಈ ಹಗರಣದ ಮುಖ್ಯ ಸಂಚುಕೋರ. ಸಚಿವರು ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರು ಹಾಗೂ ಇತರ ಕೆಲವೊಂದಿಗೆ ಕೈಜೋಡಿಸಿ ಈ ಅಕ್ರಮ ಎಸಗಿದ್ದಾರೆ ಎಂದು ಇ.ಡಿ ಸಲ್ಲಿಸಿರುವ 209 ಪುಟಗಳ ಆರೋಪಪಟ್ಟಿಯಲ್ಲಿ ಹೇಳಿದೆ.</p>.<p>ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್ಎ) ಕುರಿತ ವಿಶೇಷ ನ್ಯಾಯಾಲಯವು ಪ್ರಾಸಿಕ್ಯೂಷನ್ ಮೇ 17ರಂದು ಸಲ್ಲಿಸಿರುವ ದೂರನ್ನು ಮಂಗಳವಾರ ಪರಿಗಣನೆಗೆ ತೆಗೆದುಕೊಂಡಿದ್ದು, ಕೇಜ್ರಿವಾಲ್ ಅವರನ್ನು ಜುಲೈ 12ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ವಾರಂಟ್ ಜಾರಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಲಂಚದ ರೂಪದಲ್ಲಿ ಪಡೆದ ₹ 100 ಕೋಟಿಯಲ್ಲಿ ಕೆಲ ಭಾಗವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನೇರವಾಗಿ ಬಳಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಆರೋಪಪಟ್ಟಿಯಲ್ಲಿ ತಿಳಿಸಿದೆ.</p>.<p>ಕೇಜ್ರಿವಾಲ್ ಅವರು ಗೋವಾದ ಐಷಾರಾಮಿ ಹೋಟೆಲ್ನಲ್ಲಿ ತಂಗಲು ಈ ಹಣ ಬಳಸಿದ್ದರು ಎಂದು ಆರೋಪಪಟ್ಟಿಯಲ್ಲಿ ಹೇಳಿದೆ. </p>.<p>ಅಬಕಾರಿ ನೀತಿಗೆ ಸಂಬಂಧಿಸಿದಂತೆ ದೆಹಲಿ ಸರ್ಕಾರವು ‘ಸಚಿವರ ಗುಂಪು’ ರಚಿಸಿದ್ದೇ ಒಂದು ವಂಚನೆಯಾಗಿದೆ. ಅರವಿಂದ ಕೇಜ್ರಿವಾಲ್ ಅವರೇ ಈ ಹಗರಣದ ಮುಖ್ಯ ಸಂಚುಕೋರ. ಸಚಿವರು ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರು ಹಾಗೂ ಇತರ ಕೆಲವೊಂದಿಗೆ ಕೈಜೋಡಿಸಿ ಈ ಅಕ್ರಮ ಎಸಗಿದ್ದಾರೆ ಎಂದು ಇ.ಡಿ ಸಲ್ಲಿಸಿರುವ 209 ಪುಟಗಳ ಆರೋಪಪಟ್ಟಿಯಲ್ಲಿ ಹೇಳಿದೆ.</p>.<p>ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್ಎ) ಕುರಿತ ವಿಶೇಷ ನ್ಯಾಯಾಲಯವು ಪ್ರಾಸಿಕ್ಯೂಷನ್ ಮೇ 17ರಂದು ಸಲ್ಲಿಸಿರುವ ದೂರನ್ನು ಮಂಗಳವಾರ ಪರಿಗಣನೆಗೆ ತೆಗೆದುಕೊಂಡಿದ್ದು, ಕೇಜ್ರಿವಾಲ್ ಅವರನ್ನು ಜುಲೈ 12ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ವಾರಂಟ್ ಜಾರಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>