<p><strong>ನವದೆಹಲಿ</strong>: ಬಂಧನದಲ್ಲಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಕ್ತದಲ್ಲಿ ಸಕ್ಕರೆ ಅಂಶ ಇಳಿದಿದ್ದರಿಂದಾಗಿ ಇನ್ಸುಲಿನ್ ನೀಡಲಾಗಿದೆ ಎಂದು ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. </p>.<p>‘ಹನುಮಾನ್ ಜಯಂತಿ ದಿನದಂದೇ ಆಗಿರುವ ಈ ಬೆಳವಣಿಗೆ ಸ್ವಾಗತಾರ್ಹ. ದೇವರ ಆಶೀರ್ವಾದದಿಂದಲೇ ಇದು ನಡೆದಿದೆ’ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಪ್ರತಿಕ್ರಿಯಿಸಿದೆ.</p>.<p>‘ಏಮ್ಸ್ನ ತಜ್ಞವೈದ್ಯರ ಸಲಹೆಯಂತೆ ಸೋಮವಾರ ಸಂಜೆ ಕೇಜ್ರಿವಾಲ್ ಅವರಿಗೆ ಕಡಿಮೆ ಡೋಸ್ನ ಇನ್ಸುಲಿನ್ ನೀಡಲಾಯಿತು’ ಎಂದು ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಏಪ್ರಿಲ್ 20ರಂದು ಕೇಜ್ರಿವಾಲ್ ಅವರೊಂದಿಗೆ ಏಮ್ಸ್ ಪರಿಣತರು ವಿಡಿಯೊ ಸಮಾಲೋಚನೆ ನಡೆಸಿದ್ದರು. ಅವರ ದೇಹದ ರಕ್ತದಲ್ಲಿ ಸಕ್ಕರೆ ಅಂಶವು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆಯಾದರೆ ಇನ್ಸುಲಿನ್ ನೀಡಬೇಕು ಎಂದು ತಿಹಾರ್ ಜೈಲಿನ ವೈದ್ಯರಿಗೆ ಸಲಹೆ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಪಕ್ಷದ ನಾಯಕನಿಗೆ ಜೈಲಿನಲ್ಲಿ ಸರಿಯಾದ ಚಿಕಿತ್ಸೆ ದೊರೆಯುತ್ತಿರಲಿಲ್ಲ. ಅವರನ್ನು ಬಂಧಿಸಿದ 23 ದಿನಗಳ ನಂತರ ಈಗ ಇನ್ಸುಲಿನ್ ನೀಡಲಾಗಿದೆ. ಹನುಮಾನ್ ದೇವರ ಆಶೀರ್ವಾದವೇ ಇದಕ್ಕೆ ಕಾರಣ ಎಂದು ಎಎಪಿ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಪ್ರತಿಕ್ರಿಯಿಸಿದರು.</p>.<p>ಸಚಿವೆ ಆತಿಶಿ ಈ ಕುರಿತಂತೆ ಎಕ್ಸ್ ಜಾಲತಾಣದಲ್ಲಿ, ‘ಹನುಮಾನ್ ಜಯಂತಿಯಂದು ಶುಭ ಸುದ್ದಿ ಬಂದಿದೆ. ತಿಹಾರ್ ಜೈಲಿನ ಅಧಿಕಾರಿಗಳು ಕೊನೆಗೂ ಇನ್ಸುಲಿನ್ ನೀಡಿದ್ದಾರೆ’ ಎಂದು ಪ್ರತಿಕ್ರಿಯಿಸಿದ್ದಾರೆ. </p>.<p><strong>‘ನ್ಯಾಯಾಂಗ ಬಂಧನ 7ರವರೆಗೆ ವಿಸ್ತರಣೆ’ </strong></p><p>ದೆಹಲಿ ಸಿ.ಎಂ ಅರವಿಂದ ಕೇಜ್ರಿವಾಲ್ ಮತ್ತು ಬಿಆರ್ಎಸ್ ನಾಯಕಿ ಕೆ.ಕವಿತಾ ನ್ಯಾಯಾಂಗ ಬಂಧನವನ್ನು ಕೋರ್ಟ್ ಮೇ 7ರವರೆಗೆ ವಿಸ್ತರಿಸಿದೆ. ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಇಬ್ಬರನ್ನು ಬಂಧಿಸಲಾಗಿದೆ. ಸಿಬಿಐ ಇ.ಡಿ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಕೋರ್ಟ್ನ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ವರ್ಚುಯೆಲ್ ಕಲಾಪದಲ್ಲಿ ಈ ಕುರಿತ ಆದೇಶ ನೀಡಿದರು.</p>.<p><strong>ಹನುಮ ಮಂದಿರಲ್ಲಿ ಸುನೀತಾ ಪ್ರಾರ್ಥನೆ </strong></p><p>ಅರವಿಂದ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಮಂಗಳವಾರ ಇಲ್ಲಿ ಹನುಮಾನ್ ಮಂದಿರದಲ್ಲಿ ಹನುಮಾನ್ ಜಯಂತಿ ನಿಮಿತ್ತ ಪ್ರಾರ್ಥನೆ ಸಲ್ಲಿಸಿದರು. ‘ಹನುಮಾನ್ ದೇವರು ನನ್ನದೂ ಸೇರಿ ಸರ್ವರ ಕಷ್ಟಗಳನ್ನೂ ನಿವಾರಿಸಲಿ. ಮುಂದಿನ ಬಾರಿ ಪತಿ ಜೊತೆಗೆ ಭೇಟಿ ನೀಡುತ್ತೇನೆ’ ಎಂದು ಈ ಸಂದರ್ಭದಲ್ಲಿ ಪ್ರಾರ್ಥಿಸಿದರು. ಕನ್ನಾಟ್ ಪ್ಲೇಸ್ನಲ್ಲಿರುವ ಮಂದಿರಕ್ಕೆ ಸುನೀತಾ ನಿಯಮಿತವಾಗಿ ಭೇಟಿ ನೀಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಂಧನದಲ್ಲಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಕ್ತದಲ್ಲಿ ಸಕ್ಕರೆ ಅಂಶ ಇಳಿದಿದ್ದರಿಂದಾಗಿ ಇನ್ಸುಲಿನ್ ನೀಡಲಾಗಿದೆ ಎಂದು ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. </p>.<p>‘ಹನುಮಾನ್ ಜಯಂತಿ ದಿನದಂದೇ ಆಗಿರುವ ಈ ಬೆಳವಣಿಗೆ ಸ್ವಾಗತಾರ್ಹ. ದೇವರ ಆಶೀರ್ವಾದದಿಂದಲೇ ಇದು ನಡೆದಿದೆ’ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಪ್ರತಿಕ್ರಿಯಿಸಿದೆ.</p>.<p>‘ಏಮ್ಸ್ನ ತಜ್ಞವೈದ್ಯರ ಸಲಹೆಯಂತೆ ಸೋಮವಾರ ಸಂಜೆ ಕೇಜ್ರಿವಾಲ್ ಅವರಿಗೆ ಕಡಿಮೆ ಡೋಸ್ನ ಇನ್ಸುಲಿನ್ ನೀಡಲಾಯಿತು’ ಎಂದು ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಏಪ್ರಿಲ್ 20ರಂದು ಕೇಜ್ರಿವಾಲ್ ಅವರೊಂದಿಗೆ ಏಮ್ಸ್ ಪರಿಣತರು ವಿಡಿಯೊ ಸಮಾಲೋಚನೆ ನಡೆಸಿದ್ದರು. ಅವರ ದೇಹದ ರಕ್ತದಲ್ಲಿ ಸಕ್ಕರೆ ಅಂಶವು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆಯಾದರೆ ಇನ್ಸುಲಿನ್ ನೀಡಬೇಕು ಎಂದು ತಿಹಾರ್ ಜೈಲಿನ ವೈದ್ಯರಿಗೆ ಸಲಹೆ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಪಕ್ಷದ ನಾಯಕನಿಗೆ ಜೈಲಿನಲ್ಲಿ ಸರಿಯಾದ ಚಿಕಿತ್ಸೆ ದೊರೆಯುತ್ತಿರಲಿಲ್ಲ. ಅವರನ್ನು ಬಂಧಿಸಿದ 23 ದಿನಗಳ ನಂತರ ಈಗ ಇನ್ಸುಲಿನ್ ನೀಡಲಾಗಿದೆ. ಹನುಮಾನ್ ದೇವರ ಆಶೀರ್ವಾದವೇ ಇದಕ್ಕೆ ಕಾರಣ ಎಂದು ಎಎಪಿ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಪ್ರತಿಕ್ರಿಯಿಸಿದರು.</p>.<p>ಸಚಿವೆ ಆತಿಶಿ ಈ ಕುರಿತಂತೆ ಎಕ್ಸ್ ಜಾಲತಾಣದಲ್ಲಿ, ‘ಹನುಮಾನ್ ಜಯಂತಿಯಂದು ಶುಭ ಸುದ್ದಿ ಬಂದಿದೆ. ತಿಹಾರ್ ಜೈಲಿನ ಅಧಿಕಾರಿಗಳು ಕೊನೆಗೂ ಇನ್ಸುಲಿನ್ ನೀಡಿದ್ದಾರೆ’ ಎಂದು ಪ್ರತಿಕ್ರಿಯಿಸಿದ್ದಾರೆ. </p>.<p><strong>‘ನ್ಯಾಯಾಂಗ ಬಂಧನ 7ರವರೆಗೆ ವಿಸ್ತರಣೆ’ </strong></p><p>ದೆಹಲಿ ಸಿ.ಎಂ ಅರವಿಂದ ಕೇಜ್ರಿವಾಲ್ ಮತ್ತು ಬಿಆರ್ಎಸ್ ನಾಯಕಿ ಕೆ.ಕವಿತಾ ನ್ಯಾಯಾಂಗ ಬಂಧನವನ್ನು ಕೋರ್ಟ್ ಮೇ 7ರವರೆಗೆ ವಿಸ್ತರಿಸಿದೆ. ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಇಬ್ಬರನ್ನು ಬಂಧಿಸಲಾಗಿದೆ. ಸಿಬಿಐ ಇ.ಡಿ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಕೋರ್ಟ್ನ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ವರ್ಚುಯೆಲ್ ಕಲಾಪದಲ್ಲಿ ಈ ಕುರಿತ ಆದೇಶ ನೀಡಿದರು.</p>.<p><strong>ಹನುಮ ಮಂದಿರಲ್ಲಿ ಸುನೀತಾ ಪ್ರಾರ್ಥನೆ </strong></p><p>ಅರವಿಂದ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಮಂಗಳವಾರ ಇಲ್ಲಿ ಹನುಮಾನ್ ಮಂದಿರದಲ್ಲಿ ಹನುಮಾನ್ ಜಯಂತಿ ನಿಮಿತ್ತ ಪ್ರಾರ್ಥನೆ ಸಲ್ಲಿಸಿದರು. ‘ಹನುಮಾನ್ ದೇವರು ನನ್ನದೂ ಸೇರಿ ಸರ್ವರ ಕಷ್ಟಗಳನ್ನೂ ನಿವಾರಿಸಲಿ. ಮುಂದಿನ ಬಾರಿ ಪತಿ ಜೊತೆಗೆ ಭೇಟಿ ನೀಡುತ್ತೇನೆ’ ಎಂದು ಈ ಸಂದರ್ಭದಲ್ಲಿ ಪ್ರಾರ್ಥಿಸಿದರು. ಕನ್ನಾಟ್ ಪ್ಲೇಸ್ನಲ್ಲಿರುವ ಮಂದಿರಕ್ಕೆ ಸುನೀತಾ ನಿಯಮಿತವಾಗಿ ಭೇಟಿ ನೀಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>