ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, 'ಬಿಜೆಪಿಯ ಗೂಂಡಾಗಳು ದೆಹಲಿ ಜಲ ಮಂಡಳಿ ಕಚೇರಿಗೆ ಪ್ರವೇಶಿಸಿ ಅದನ್ನು ಧ್ವಂಸ ಮಾಡಿದರು. ರೈತರಿಗೆ ಬೆಂಬಲ ನೀಡಿರುವ ಎಎಪಿ ನಾಯಕರು ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಬೆದರಿಕೆ ಹಾಕಿದರು. ಇದೆಲ್ಲವೂ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ದೆಹಲಿ ಪೊಲೀಸರ ಸಹಾಯದಿಂದಲೇ ಈ ಘಟನೆ ನಡೆದಿರುವುದು ಸ್ಪಷ್ಟವಾಗಿದೆ' ಎಂದು ಆರೋಪಿಸಿದ್ದಾರೆ.